ಪದ್ಮ ಪ್ರಶಸ್ತಿ 2025 | ಪುರಸ್ಕೃತರ ಪಟ್ಟಿ ಪ್ರಕಟ; ರಾಜ್ಯದ ವೆಂಕಪ್ಪ ಅಂಬಾಜಿಗೆ ಪದ್ಮಶ್ರೀ

Date:

ಕೇಂದ್ರ ಸರ್ಕಾರವು ಗಣರಾಜ್ಯೋತ್ಸವಕ್ಕೂ ಮುನ್ನಾದಿನ ಪದ್ಮ ಪ್ರಶಸ್ತಿ 2025 ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ಕರ್ನಾಟಕದ ಗೊಂದಲಿ ಕಲಾವಿದ ವೆಂಕಪ್ಪ ಅಂಬಾಜಿ ಸೇರಿದಂತೆ ಹಲವು ಮಂದಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬ್ರೆಜಿಲ್‌ನ ಹಿಂದೂ ಆಧ್ಯಾತ್ಮಿಕ ನಾಯಕ ಜೊನಾಸ್ ಮಾಸೆಟ್ಟಿ ಮತ್ತು ಭಾರತದ ಪರಂಪರೆಯ ಬಗ್ಗೆ ಬರೆಯುವ ವಿಚಾರದಲ್ಲಿ ಹೆಸರು ಮಾಡಿರುವ ದಂಪತಿಗಳಾದ ಹಗ್ ಮತ್ತು ಕೊಲೀನ್ ಗ್ಯಾಂಟ್ಜರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ವೆಂಕಪ್ಪ ಅಂಬಾಜಿ ಅವರಿಗೂ ಪದ್ಮಶ್ರೀ ದೊರಕಿದೆ.

ಇದನ್ನು ಓದಿದ್ದೀರಾ? ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ತುಳಸಿ ಗೌಡ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ.

ಕಲೆ, ಸಾಮಾಜಿಕ ಕಾರ್ಯ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ, ಎಂಜಿನಿಯರಿಂಗ್, ವ್ಯಾಪಾರ, ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆಯಂತಹ ವೈವಿಧ್ಯಮಯ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.

ಕರ್ನಾಟಕದ ವಿವಿಧ ಕ್ಷೇತ್ರಗಳ ಮೂವರು ಸಾಧಕರು ಪದ್ಮಶ್ರೀ ಗರಿ ಮುಡಿಗೇರಿಸಿಕೊಂಡಿದ್ದಾರೆ. ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ವೆಂಕಪ್ಪ ಅಂಬಾಜಿ ಸುಗಟೇಕರ್‌, ವೈದ್ಯೆ ಡಾ.ವಿಜಯಲಕ್ಷ್ಮೀ ದೇಶಮಾನೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದವರು. ಕೊಪ್ಪಳ ಮೂಲದ ತೊಗಲುಗೊಂಬೆಯಾಟದ ಹಿರಿಯ ಕಲಾವಿದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತ, ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ ವೆಂಕಪ್ಪ ಅಂಬಾಜಿ ಸುಗಟೇಕರ್‌ ಮತ್ತು ಕಲಬುರಗಿ ಮೂಲದವರಾಗಿರುವ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆ, ರೋಗಿಗಳ ಪಾಲಿನ ಸಾಕ್ಷಾತ್ ಧನ್ವಂತರಿ ಎಂದೇ ಹೆಸರುವಾಸಿಯಾಗಿರುವ ಡಾ.ವಿಜಯಲಕ್ಷ್ಮೀ ದೇಶಮಾನೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಗೋವಾದ 100 ವರ್ಷದ ಸ್ವಾತಂತ್ರ್ಯ ಹೋರಾಟಗಾರ, ಪುರುಷ ಪ್ರಧಾನ ಕ್ಷೇತ್ರದಲ್ಲಿ 150 ಮಹಿಳೆಯರಿಗೆ ತರಬೇತಿ ನೀಡಿದ ಪಶ್ಚಿಮ ಬಂಗಾಳದ ಧಕ್ ವಾದಕಿ ಮತ್ತು ಭಾರತದ ಮೊದಲ ಮಹಿಳಾ ಬೊಂಬೆ ಕಲಾವಿದರು ಪದ್ಮಶ್ರೀ ಪ್ರಶಸ್ತಿ ಪಡೆದ 30 ಮಂದಿಯಲ್ಲಿ ಸೇರಿದ್ದಾರೆ.

ಇದನ್ನು ಓದಿದ್ದೀರಾ? ಸಾವಯವ ಕೃಷಿಗೆ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತೆ ಕಮಲಾ ಪೂಜಾರಿ ನಿಧನ

ಗೋವಾದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಲಿಬಿಯಾ ಲೋಬೊ ಸರ್ದೇಸಾಯಿ, ಪೋರ್ಚುಗೀಸ್ ಆಳ್ವಿಕೆಯ ವಿರುದ್ಧ ಜನರನ್ನು ಒಟ್ಟುಗೂಡಿಸಲು 1955 ರಲ್ಲಿ ಅರಣ್ಯ ಪ್ರದೇಶದಲ್ಲಿ ‘ವೋಜ್ ಡಾ ಲಿಬರ್ಡಾಬೆʼ (ಸ್ವಾತಂತ್ರ್ಯದ ಧ್ವನಿ) ಎಂಬ ಭೂಗತ ರೇಡಿಯೋ ಕೇಂದ್ರವನ್ನು ಸಹ ಸ್ಥಾಪಿಸಿದರು.

ಪುರುಷ ಪ್ರಧಾನ ಕ್ಷೇತ್ರದಲ್ಲಿ 150 ಮಹಿಳೆಯರಿಗೆ ತರಬೇತಿ ನೀಡುವ ಮೂಲಕ ಲಿಂಗ ತಾರತಮ್ಯವನ್ನು ಮುರಿದ ಪಶ್ಚಿಮ ಬಂಗಾಳದ 57 ವರ್ಷದ ಧಕ್ ವಾದಕ ಗೋಕುಲ್ ಚಂದ್ರ ದೇ ಕೂಡ ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರು. ದೇ ಸಾಂಪ್ರದಾಯಿಕ ವಾದ್ಯಕ್ಕಿಂತ 1.5 ಕೆಜಿ ಕಡಿಮೆ ತೂಕದ ಹಗುರವಾದ ಧಕ್ ಪ್ರಕಾರವನ್ನು ಸಹ ರಚಿಸಿದರು. ಹಾಗೆಯೇ ವಿವಿಧ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತವನ್ನು ಪ್ರತಿನಿಧಿಸಿದರು. ಪಂಡಿತ್ ರವಿಶಂಕರ್ ಮತ್ತು ಉಸ್ತಾದ್ ಜಾಕಿರ್ ಹುಸೇನ್ ಅವರಂತಹ ಕಲಾವಿದರೊಂದಿಗೆ ಪ್ರದರ್ಶನ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...