ವಯನಾಡ್‌ಗೆ 529.50 ಕೋಟಿ ರೂ. ಸಾಲ ಮಂಜೂರು ಮಾಡಿದ ಕೇಂದ್ರ; ಬಳಕೆಗೆ ಮಾರ್ಚ್‌ 31 ಅಂತಿಮ ದಿನ

Date:

ಭೂಕುಸಿತಕ್ಕೊಳಗಾಗಿದ್ದ ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ಪುನರ್‌ನಿರ್ಮಾಣ ಕೆಲಸಗಳಿಗಾಗಿ 16 ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ. ಈ ಯೋಜನೆಗಳಿಗೆ 529.50 ಕೋಟಿ ರೂ. ವಿಶೇಷ ನೆರವು (ಸಾಲ) ಮಂಜೂರು ಮಾಡಿದೆ. 2024-25 ಹಣಕಾಸು ವರ್ಷಕ್ಕೆ ನಿಗದಿಪಡಿಸಿದ ಈ ಹಣವನ್ನು 2025ರ ಮಾರ್ಚ್ 31ರೊಳಗೆ ಬಳಸಿಕೊಳ್ಳಬೇಕೆಂದು ಸೂಚಿಸಿದೆ.

ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ಸಹಾಯ ಯೋಜನೆ (SASCI) ಅಡಿಯಲ್ಲಿ ಕೇಂದ್ರ ಸರ್ಕಾರವು ಕೇರಳ ಸರ್ಕಾರಕ್ಕೆ ಬಡ್ಡಿ ರಹಿತ ಸಾಲವನ್ನು ನೀಡಿದೆ.

ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಹಣಕಾಸು ಸಚಿವಾಲಯವು ಫೆಬ್ರವರಿ 11ರಂದು ಪತ್ರ ಬರೆದಿದ್ದು, “10 ಕೆಲಸದ ದಿನಗಳೊಳಗೆ ರಾಜ್ಯ ಸರ್ಕಾರಕ್ಕೆ ಹಣ ಬಿಡುಗಡೆ ಮಾಡಲಾಗುವುದು. ರಾಜ್ಯ ಸರ್ಕಾರವು ಸಲ್ಲಿಸಿರುವ ಪುನರ್ವಸತಿ, ಸಾರ್ವಜನಿಕ ಕಟ್ಟಡಗಳ ನಿರ್ಮಾಣ, ಪ್ರವೇಶ ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ಈ ಹಣವನ್ನು ಬಳಸಿಕೊಳ್ಳಬೇಕು” ಎಂದು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನುಮೋದಿತ 16 ಯೋಜನೆಗಳ ಹೊರತಾಗಿ, ಬೇರೆ ಯಾವುದೇ ಉದ್ದೇಶಕ್ಕೆ ಹಣವನ್ನು ಬಳಸಿದರೆ, ಸಾಲದ ಮೊತ್ತದಲ್ಲಿ ಕಡಿತ ಮಾಡಲಾಗುತ್ತದೆ” ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಕೇರಳ ಸರ್ಕಾರವು ವಯನಾಡ್‌ನ ಪುನರ್ನಿರ್ಮಾಣಕ್ಕಾಗಿ 2,000 ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜ್ ನೀಡಬೇಕೆಂದು ಕೇಂದ್ರ ಸರ್ಕಾರವನ್ನು ಕೇಳಿತ್ತು. ಕೇರಳದ ಮನವಿಯಲ್ಲಿ ಪರಿಶೀಲಿಸಿರುವ ಕೇಂದ್ರವು, ಇದೀಗ, 529.50 ಕೋಟಿ ರೂ. ಸಾಲ ಮಂಜೂರು ಮಾಡಿದೆ.

ಅನುಮೋದಿತ ಯೋಜನೆಗಳು ಮತ್ತು ಮಂಜೂರಾದ ಹಣ

  • ನೆಡುಂಪಲ ಮತ್ತು ಎಲ್ಸ್ಟೋನ್ ಎಸ್ಟೇಟ್‌ ಪ್ರದೇಶದಲ್ಲಿ ಪುನರ್ವಸತಿ ಮತ್ತು ಸಾರ್ವಜನಿಕ ಕಟ್ಟಡಗಳ ನಿರ್ಮಾಣ- 111.32 ಕೋಟಿ ರೂ.
  • ಹಳ್ಳಿಗಳಲ್ಲಿ ರಸ್ತೆ ಮತ್ತು ಇತರ ನಿರ್ಮಾಣ ಕೆಲಸಗಳು- 87.24 ಕೋಟಿ ರೂ.
  • ಪುನ್ನಪ್ಪುಳ ನದಿಯ ಪುನಶ್ಚೇತನ- 65 ಕೋಟಿ ರೂ.
  • ಅಗ್ನಿಶಾಮಕ ಮತ್ತು ರಕ್ಷಣಾ ಠಾಣೆ- 21 ಕೋಟಿ ರೂ.
  • ಮುಟ್ಟಿಲ್-ಮೇಪ್ಪಾಡಿ ರಸ್ತೆ ನವೀಕರಣ- 60 ಕೋಟಿ ರೂ.
  • ಚೂರಲ್ಮಲಾ ಸೇತುವೆ ನಿರ್ಮಾಣ- 38 ಕೋಟಿ ರೂ.
  • ವೆಲ್ಲರ್ಮಲಾ ಮತ್ತು ಮುಂಡಕ್ಕೈನಲ್ಲಿ ಶಾಲೆಗಳ ಪುನರ್‌ನಿರ್ಮಾಣ- 12 ಕೋಟಿ ರೂ.
  • ಆಸ್ಪತ್ರೆಗಳಲ್ಲಿ ಒಳರೋಗಿಗಳ ಕಟ್ಟಡ ನಿರ್ಮಾಣ- 15 ಕೋಟಿ ರೂ.
  • ಎಲ್ಸ್ಟೋನ್ ಪ್ರದೇಶದಲ್ಲಿ 110 ಕೆವಿ ಸಬ್‌ಸ್ಟೇಷನ್ ನಿರ್ಮಾಣ- 13.50 ಕೋಟಿ ರೂ.
  • ಕರಾಪುಳ ನೀರು ಶುದ್ಧೀಕರಣ ಘಟಕ- 22.50 ಕೋಟಿ ರೂ.
  • ಅಪ್ರೋಚ್ ರಸ್ತೆಗಳು ಸೇರಿದಂತೆ ಆರು ಹೆಲಿಪ್ಯಾಡ್‌ಗಳ ನಿರ್ಮಾಣ- 9 ಕೋಟಿ ರೂ.
  • ಕಲ್ಪೆಟ್ಟ ಸಿವಿಲ್ ಸ್ಟೇಷನ್‌ನಲ್ಲಿ ಡಿಡಿಎಂಎ ಕಾಂಪ್ಲೆಕ್ಸ್ ಮತ್ತು ಡಿ-ಬ್ಲಾಕ್ ನಿರ್ಮಾಣ- 30 ಕೋಟಿ ರೂ.
  • ಬಹುಪಯೋಗಿ ವಸತಿ ಗೃಹಗಳ ನಿರ್ಮಾಣ- 28 ಕೋಟಿ ರೂ.
  • ಚೂರಲ್‌ಮಲಾ-ಅಟ್ಟಮಾಲ ರಸ್ತೆ- 9 ಕೋಟಿ ರೂ.
  • ಪುಂಚಿರಿಮಟ್ಟಂ–ವನರಾಣಿ ಸೇತುವೆ ಮತ್ತು ಅಪ್ರೋಚ್ ರಸ್ತೆ– 7 ಕೋಟಿ ರೂ.
  • ಜಿಎಲ್‌ಪಿಎಸ್ ಎಂಟನೇ ನಂಬರ್ ಸೇತುವೆ ಮತ್ತು ಅಪ್ರೋಚ್ ರಸ್ತೆ- 7 ಕೋಟಿ ರೂ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...