ನೂತನ ದೂರ ಸಂಪರ್ಕ ಮಸೂದೆ: ಕೇಂದ್ರ ಯಾವುದೇ ಮೊಬೈಲ್ ನೆಟ್ವರ್ಕ್ಅನ್ನು ತನ್ನ ವಶಕ್ಕೆ ಪಡೆಯಬಹುದು

Date:

ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಅಥವಾ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರವು ಯಾವುದೇ ದೂರಸಂಪರ್ಕ (ಮೊಬೈಲ್ ನೆಟ್‌ವರ್ಕ್) ಜಾಲವನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸಿಕೊಳ್ಳಬಹುದು ಎಂದು ದೂರಸಂಪರ್ಕದ ಉದ್ದೇಶಿತ ಕಾನೂನು ಹೇಳುತ್ತದೆ.

ಕಳೆದ ವಾರ ಸಂಸತ್ತಿನ ಭದ್ರತೆಯ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ ದೂರಸಂಪರ್ಕ ಮಸೂದೆ 2023 ಅನ್ನು ಇಂದು ಲೋಕಸಭೆಯಲ್ಲಿ ದೂರ ಸಂಪರ್ಕ ಸಚಿವ ಅಶ್ವಿನಿ ವೈಷ್ಣವ್ ಮಂಡಿಸಿದರು.

“ವಿಪತ್ತು ನಿರ್ವಹಣೆ ಸೇರಿದಂತೆ ಯಾವುದೇ ಸಾರ್ವಜನಿಕ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅಥವಾ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ವಿಶೇಷವಾಗಿ ಅಧಿಕಾರ ಪಡೆದ ಯಾವುದೇ ಅಧಿಕಾರಿ, ಅಧಿಸೂಚನೆಯ ಮೂಲಕ ವಶಕ್ಕೆ ಪಡೆಯುವುದು ಅವಶ್ಯಕ ಅಥವಾ ಸೂಕ್ತವೆಂದು ಕಂಡುಬಂದರೆ ಅಧಿಕೃತ ಘಟಕದಿಂದ ಯಾವುದೇ ದೂರಸಂಪರ್ಕ ಸೇವೆ ಅಥವಾ ದೂರಸಂಪರ್ಕ (ಮೊಬೈಲ್ ನೆಟ್‌ವರ್ಕ್) ಜಾಲವನ್ನು ತಾತ್ಕಾಲಿಕವಾಗಿ ಸ್ವಾಧೀನಪಡಿಸಿಕೊಳ್ಳಬಹುದು” ಎಂದು ಮಸೂದೆಯ ಕಾನೂನು ಹೇಳುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಭದ್ರತಾ ಷರತ್ತಿನ ಅಡಿಯ ಪ್ರಕಾರ ಮಾನ್ಯತೆ ಹೊಂದಿರುವ ಮಾಧ್ಯಮ ಪ್ರತಿನಿಧಿಗಳಿಂದ ರಾಷ್ಟ್ರೀಯ ಭದ್ರತೆ ಹಾಗೂ ಹಿತಾಸಕ್ತಿಗೆ ಧಕ್ಕೆ ತರದ ರೀತಿ ಇರುವ ಯಾವುದೇ ಸಂದೇಶಗಳನ್ನು ತಡೆ ಹಿಡಿಯಬಾರದು ಎಂದು ಕೂಡ ಮಸೂದೆಯಲ್ಲಿ ವಿವರಿಸಲಾಗಿದೆ.

ಭಾರತದಲ್ಲಿ ಪ್ರಕಟಿಸಲು ಉದ್ದೇಶಿಸಿರುವ ಪತ್ರಿಕಾ ಸಂದೇಶಗಳು, ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಕ್ಕೆ ಮಾನ್ಯತೆ ಪಡೆದಿರುವ ವರದಿಗಾರರ ಸಂದೇಶಗಳನ್ನು ಅವರ ಪ್ರಸರಣವನ್ನು ಉಪ-ವಿಭಾಗ (2) ರ ಷರತ್ತು (ಎ) ಅಡಿಯಲ್ಲಿ ನಿಷೇಧಿಸದ ಹೊರತು ತಡೆಹಿಡಿಯಲಾಗುವುದಿಲ್ಲ ಅಥವಾ ಅವರನ್ನು ಬಂಧಿಸಲಾಗುವುದಿಲ್ಲ” ಎಂದು ಕರಡು ಮಸೂದೆ ಹೇಳುತ್ತದೆ.

ಈ ಸುದ್ದಿ ಓದಿದ್ದೀರಾ? ‘ದೇಶಕ್ಕಾಗಿ ದೇಣಿಗೆ’ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ವ್ಯಕ್ತಿಗಳ ನಡುವೆ ಯಾವುದೇ ಸಂದೇಶವನ್ನು ಪ್ರತಿಬಂಧಿಸಲು ಸರ್ಕಾರವು ನಿರ್ದೇಶಿಸಬಹುದು ಎಂದು ಕರಡು ಕಾನೂನು ಹೇಳುತ್ತದೆ. ಇದು ದೂರಸಂಪರ್ಕ ಜಾಲಗಳನ್ನು ಸ್ಥಗಿತಗೊಳಿಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ.

ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಾಜ್ಯದ ರಕ್ಷಣೆ ಮತ್ತು ಭದ್ರತೆಯ ಹಿತಾಸಕ್ತಿಯಲ್ಲಿ, ಕೇಂದ್ರವು ಯಾವುದೇ ಸಂದೇಶ ಅಥವಾ ವರ್ಗದ ಸಂದೇಶಗಳನ್ನು ಯಾವುದೇ ವ್ಯಕ್ತಿ ಅಥವಾ ವ್ಯಕ್ತಿಗಳಿಂದ ಅಥವಾ ಯಾವುದೇ ದೂರಸಂಪರ್ಕಕ್ಕೆ ಅಥವಾ ಅವರಿಂದ ನಿರ್ದೇಶಿಸಬಹುದು ಎಂದು ಮಸೂದೆ ಹೇಳುತ್ತದೆ.

ಸಂದೇಶಗಳನ್ನು ಕಾನೂನು ಬಾಹಿರವಾಗಿ ಪ್ರತಿಬಂಧಿಸಿದರೆ ನೂತನ ಕಾನೂನಿನ ಅನ್ವಯ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದು ಅಥವಾ ₹ 2 ಕೋಟಿ ಅಥವಾ ಅದಕ್ಕಿಂತ ಹೆಚ್ಚು ದಂಡ ವಿಧಿಸಬಹುದು. ಮಸೂದೆಯು ಟೆಲಿಕಾಂ ವಿವಾದಗಳ ಇತ್ಯರ್ಥ ಮತ್ತು ಮೇಲ್ಮನವಿ ನ್ಯಾಯಮಂಡಳಿಯ ರಚನೆಗೆ ಅವಕಾಶ ನೀಡುತ್ತದೆ.

ಪ್ರಸ್ತಾವಿತ ಕಾನೂನು 138 ವರ್ಷಗಳಷ್ಟು ಹಳೆಯದಾದ ಭಾರತೀಯ ಟೆಲಿಗ್ರಾಫ್ ಕಾಯ್ದೆ 1885, ಭಾರತೀಯ ವೈರ್ಲೆಸ್ ಟೆಲಿಗ್ರಾಫಿ ಕಾಯ್ದೆ 1933 ಮತ್ತು ಟೆಲಿಗ್ರಾಫ್ ವೈರ್ಸ್ (ಕಾನೂನುಬಾಹಿರ ಸ್ವಾಧೀನ) ಕಾಯ್ದೆ, 1950 ರ ಕಾನೂನಿನ ಸ್ಥಾನವನ್ನು ತುಂಬಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...