ಪಂಜಾಬ್ ಸಚಿವರ ಅಮೆರಿಕ ಭೇಟಿಗೆ ಅನುಮತಿ ನಿರಾಕರಿಸಿದ ಕೇಂದ್ರ

Date:

ಪಂಜಾಬಿನ ವಿದ್ಯುತ್ ಮತ್ತು ಲೋಕೋಪಯೋಗಿ ಸಚಿವ ಹರ್ಭಜನ್ ಸಿಂಗ್ ಅವರ ನಿಗದಿತ ಅಮೆರಿಕ ಭೇಟಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಾಜಕೀಯ ಅನುಮತಿಯನ್ನು ನಿರಾಕರಿಸಿದ ಬಳಿಕ ಆಪ್ ನೇತೃತ್ವದ ಪಂಜಾಬ್ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಗಳ ನಡುವೆ ಮತ್ತೆ ಉದ್ವಿಗ್ನತೆ ತಲೆದೋರಿದೆ ಎಂದು ವರದಿಯಾಗಿದೆ.

ಆ.4ರಿಂದ 6ರವರೆಗೆ ಮಸಾಚುಸೆಟ್ಸ್‌ನ ಬಾಸ್ಟನ್ ನಗರದಲ್ಲಿ ನಡೆಯಲಿರುವ ರಾಜ್ಯಶಾಸಕಾಂಗಗಳ ರಾಷ್ಟ್ರೀಯ ಸಮ್ಮೇಳನ(ಎನ್‌ಸಿಎಸ್‌ಎಲ್) ಶಾಸಕಾಂಗ ಶೃಂಗಸಭೆ 2025ರಲ್ಲಿ ಪಾಲ್ಗೊಳ್ಳುವಂತೆ ಸಿಂಗ್ ಅವರನ್ನು ಆಹ್ವಾನಿಸಲಾಗಿತ್ತು. ಇದರೊಂದಿಗೆ ಸಿಂಗ್ ಕೇಂದ್ರದಿಂದ ವಿದೇಶ ಪ್ರಯಾಣಕ್ಕೆ ಅನುಮತಿ ನಿರಾಕರಿಸಲ್ಪಟ್ಟ ಪಂಜಾಬಿನ ನಾಲ್ಕನೇ ಆಪ್ ಸಚಿವರಾಗಿದ್ದಾರೆ.

ಮೂಲಗಳ ಪ್ರಕಾರ ಎಲ್ಲ ರಾಜಕೀಯ ನಾಯಕರು ವಿದೇಶಗಳಿಗೆ ಭೇಟಿ ನೀಡಲು ವಿದೇಶಾಂಗ ಸಚಿವಾಲಯದ ಅನುಮತಿ ಅಗತ್ಯವಾಗಿದೆ. ಸಿಂಗ್ ಪ್ರಕರಣದಲ್ಲಿ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಅನುಮತಿಯನ್ನು ನಿರಾಕರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಸಿಂಗ್, ಶೃಂಗಸಭೆಯು ಅಮೂಲ್ಯಕಲಿಕೆಯ ಹಾಗೂ ವಿಶ್ವದಾದ್ಯಂತ ಇರುವ ಶಾಸಕರು ಮತ್ತು ನೀತಿ ರೂಪಕರೊಂದಿಗೆ ಸಂವಾದದ ಅವಕಾಶವನ್ನು ಒದಗಿಸುತ್ತಿತ್ತು. ಇದು ಪಂಜಾಬಿನ ಪ್ರಯೋಜನಕ್ಕಾಗಿ ಪ್ರಗತಿಪರ ವಿಚಾರಗಳೊಂದಿಗೆ ಮರಳಲು ನೆರವಾಗುತ್ತಿತ್ತು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಾಢ್ಯರೊಂದಿಗೆ ಜೊತೆಯಾಗುವುದು ಜನದ್ರೋಹ

ಕೇಂದ್ರ ಸರ್ಕಾರದ ನಿರ್ಧಾರವನ್ನು ಟೀಕಿಸಿದ ಆಪ್‌ನ ಪಂಜಾಬ್ ವಕ್ತಾರ ನೀಲ್ ಗರ್ಗ್ ಅವರು, ಅದು ಒಕ್ಕೂಟ ವ್ಯವಸ್ಥೆಯನ್ನು ಹತ್ತಿಕ್ಕುತ್ತಿದೆ ಮತ್ತು ಆಪ್‌ನ ಆಡಳಿತ ಮಾದರಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಕಿಗೆ ಬರುತ್ತದೆ ಎಂಬ ಭೀತಿಯಲ್ಲಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರವು ಕಳೆದ ವರ್ಷ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್, ವಿಧಾನಸಭಾ ಸ್ಪೀಕರ್ ಕುಲ್ತಾರ್ ಸಿಂಗ್ ಸಂಧ್ವಾನ್ ಅವರ ವಿದೇಶ ಭೇಟಿಗಳಿಗೆ ಅನುಮತಿಯನ್ನು ನಿರಾಕರಿಸಿತ್ತು. ಅದಕ್ಕೂ ಮುನ್ನ 2022ರಲ್ಲಿ ಆಗಿನ ನವೀಕರಿಸಬಹುದಾದ ಇಂಧನ ಮತ್ತು ಆಡಳಿತ ಸುಧಾರಣಾ ಸಚಿವ ಅಮನ್ ಅರೋರಾ ಅವರೂ ಅನುಮತಿಯಿಂದ ವಂಚಿತರಾಗಿದ್ದರು.

ವಿದೇಶ ಪ್ರಯಾಣಕ್ಕೆ ಅನುಮತಿಯು ಆಡಳಿತಾತ್ಮಕ ವಿಷಯವಾಗಿದೆ, ರಾಜಕೀಯ ವಿಷಯವಲ್ಲ. ಆಪ್ ನಾಯಕರು ಇದಕ್ಕೆ ರಾಜಕೀಯ ಬಣ್ಣ ನೀಡುವುದರಿಂದ ದೂರವಿರಬೇಕು, ಬದಲಿಗೆ ನಿರ್ಧಾರದ ಹಿಂದಿನ ಕಾರಣಗಳಿಗಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವನ್ನು ಸಂಪರ್ಕಿಸಬೇಕು ಎಂದು ಪಂಜಾಬ್ ಬಿಜೆಪಿ ವಕ್ತಾರ ಅನಿಲ ಸರೀನ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...