ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್ ಇನ್ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ವಿಫಲ: ಖರ್ಗೆ

Date:

ಉದ್ಯೋಗ ಸೃಷ್ಟಿ ಹಾಗೂ ಅನುದಾನ ಬಳಕೆಯಲ್ಲಿನ ಸಂಪೂರ್ಣ ನಿಷ್ಕ್ರಿಯತೆಯಿಂದ ಮೇಕ್‌ ಇನ್‌ ಇಂಡಿಯಾ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಸರ್ಕಾರ ಏಕೆ ಉದ್ಯೋಗಗಳನ್ನು ಸೃಷ್ಠಿಸಲು ಸಾಧ್ಯವಾಗಲಿಲ್ಲ ಹಾಗೂ ದೇಶದಲ್ಲಿನ ಪ್ರಮುಖ ವಲಯಗಳಲ್ಲಿ ತಯಾರಿಕೆಯನ್ನು ಉತ್ತೇಜಿಸಲು ಅನುದಾನಗಳ ಕೊರತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಮಲ್ಲಿಕಾರ್ಜುನ ಖರ್ಗೆ ಮುಂದಿಟ್ಟಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, “ ಮೋದಿ ಸರ್ಕಾರ ಮೇಕ್‌ ಇನ್‌ ಇಂಡಿಯಾ ಅನುಷ್ಠಾನಗೊಳಿಸಲು ಸಂಪೂರ್ಣ ವಿಫಲವಾಗಿದೆ. ಪ್ರಧಾನಿಯ ಹಸ್ತಕ್ಷೇಪದಿಂದ ಕೈಗಾರಿಕಾ ವಲಯವನ್ನು ಸಂಪೂರ್ಣ ನಿಷ್ಕ್ರಿಯತೆಯಿಂದ ಮುಳುಗಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷರು ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಭಾರತದ ಜಿಡಿಪಿಯಲ್ಲಿನ ಉತ್ಪಾದನಾ ಮೌಲ್ಯವು ಕಳೆದ ಒಂದು ದಶಕದಲ್ಲಿ ಶೇ.16ರಿಂದ 13ಕ್ಕೆ ಏಕೆ ಕಡಿಮೆಯಾಗಿದೆ ಎಂದು ಪ್ರಶ್ನಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ʼಹಸಿವು ಮುಕ್ತ ಕರ್ನಾಟಕʼಕ್ಕೆ ಬೇಕಿದೆ ಅಧಿಕಾರಿಗಳ ಬದ್ಧತೆ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸರಾಸರಿ ಉತ್ಪಾದನಾ ಬೆಳವಣಿಗೆ ಏಕೆ ಕುಸಿಯಿತು?ಕಾಂಗ್ರೆಸ್ ಸರ್ಕಾರದಲ್ಲಿ ಶೇ. 7.85 ರಷ್ಟಿದ್ದ ಬೆಳವಣಿಗೆ ಈಗಿನ ಸರ್ಕಾರದಲ್ಲಿ ಶೇ.6ಕ್ಕೆ ಕಡಿಮೆಯಾಗಿದೆ ಎಂದು ತಿಳಿಸಿದ್ದಾರೆ.

2022ರ ವೇಳೆಗೆ 10 ಕೋಟಿ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಕೇಂದ್ರ ಭರವಸೆ ನೀಡಿರುವ ಬಗ್ಗೆ ಖರ್ಗೆ ಪ್ರಶ್ನಿಸಿದರು.

“ಉದ್ಯೋಗಗಳೆಲ್ಲಿ? ಕಳೆದ 10 ವರ್ಷಗಳಲ್ಲಿ ಉದ್ಯಮಗಳಲ್ಲಿನ ಕಾರ್ಮಿಕರು ಏಕೆ ಕಡಿಮೆಯಾಗಿದ್ದಾರೆ? ಪ್ರಮುಖ ವಲಯಗಳಲ್ಲಿ ಬೃಹತ್ ಪ್ರಮಾಣದ ನಿಧಿಯ ಕೊರತೆ ಏಕೆ ಉಂಟಾಗಿದೆ? ಅಲ್ಲದೆ ಜವಳಿ ಉದ್ಯಮ ವಲಯದಲ್ಲಿನ ಪಿಎಲ್‌ಐ ಯೋಜನೆ ಶೇ.96 ರಷ್ಟು ನಿಧಿ ಬಳಕೆಯಾಗದೆ ಉಳಿದಿದೆ” ಎಂದು ಖರ್ಗೆ ಹೇಳಿದರು.

ನವೀಕರಿಸಬಹುದಾದ ವಲಯದಲ್ಲಿ ಪಿಎಲ್‌ಐ ಯೋಜನೆಗಾಗಿ ಯಾವುದೇ ಯೋಜನೆಯನ್ನು ಒದಗಿಸಲಾಗಿಲ್ಲ ಹಾಗೂ ತಯಾರಿಕಾ ಘಟಕಗಳ ಸರಕುಗಳು ಹಾಗೂ ಎಸಿ ಮತ್ತು ಎಲ್‌ಇಡಿ ಬಿಡಿಭಾಗಗಳ ಯೋಜನೆಗೆ ಮೀಸಲಿಡಲಾಗಿದ್ದ ಶೇ.95 ರಷ್ಟು ಹಣ ಬಳಕೆಯಾಗಿಲ್ಲ ಎಂದು ಖರ್ಗೆ ಹೇಳಿದರು

ಯುಪಿಎ ಸರ್ಕಾರದಲ್ಲಿ ಶೇ.549 ರಷ್ಟಿದ್ದ ರಫ್ತು ಮೋದಿ ಸರ್ಕಾರದಲ್ಲಿ ಸಂಪೂರ್ಣವಾಗಿ ಕುಸಿದಿರುವಾಗ ಭಾರತದ ರಫ್ತುಗಳು ಶೇಕಡವಾರಿನಲ್ಲಿ ಹೇಗೆ ಹೆಚ್ಚಾಗುತ್ತದೆ” ಎಂದು ಖರ್ಗೆ ಪ್ರಶ್ನಿಸಿದ್ದಾರೆ.

“ಗಲ್ವಾನ್‌ನಲ್ಲಿ 20 ಯೋಧರು ಹುತಾತ್ಮರಾದ ನಂತರವೂ ಚೀನಾದಿಂದ ಶೇ.45 ರಷ್ಟು ಉತ್ಪನ್ನಗಳನ್ನು ಆಮದು ಮಾಡಿಕೊಂಡಿರುವುದು ಬಿಜೆಪಿಯ ನಕಲಿ ರಾಷ್ಟ್ರೀಯವಾದವಲ್ಲವೆ ಎಂದು ಪ್ರಶ್ನಿಸಿದ ಖರ್ಗೆ ಹಳೆಯ ಗತವೈಭವವನ್ನು ಸೃಷ್ಟಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...