ಮೂತ್ರಪಿಂಡ ಸೋಂಕಿನಿಂದ ಮೃತಪಟ್ಟ ನಮೀಬಿಯಾ ಚೀತಾ

Date:

  • ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಕಳೆದ ವರ್ಷ ಸೆ.17 ರಂದು ಬಿಡುಗಡೆ ಮಾಡಿದ್ದ ಪ್ರಧಾನಿ
  • ಚೀತಾಗಳ ಸಂರಕ್ಷಣೆ ಕಾರಣಕ್ಕಾಗಿ ಉದ್ಯಾನವನ ಸುತ್ತಮುತ್ತಲ 24 ಗ್ರಾಮಗಳ ಜನರ ಸ್ಥಳಾಂತರ

ನಮೀಬಿಯಾದಿಂದ ಕಳೆದ ವರ್ಷ ಭಾರತಕ್ಕೆ ಸ್ಥಳಾಂತರಗೊಂಡಿದ್ದ ಎಂಟು ಚಿರತೆಗಳ ಪೈಕಿ ಸಾಶಾ ಹೆಸರಿನ ಮೂರು ವರ್ಷದ ಹೆಣ್ಣು ಚೀತಾ ಮೂತ್ರಪಿಂಡ ಸೊಂಕಿನಿಂದ ಸೋಮವಾರ(ಮಾರ್ಚ್‌ 27 ) ಮೃತಪಟ್ಟಿದೆ.

ಸಾಶಾ, ಜನವರಿಯಲ್ಲಿಯೇ ನಿಶ್ಯಕ್ತಿಯಿಂದ ಬಳಲುತ್ತಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಅಲ್ಲದೆ ಭಾರತಕ್ಕೆ ಕರೆತರುವ ಮುನ್ನವೇ ಎರಡು ವರ್ಷಗಳಿಂದ ಅನಾರೋಗ್ಯದಿಂದ ಈ ಚೀತಾ ಬಳಲುತ್ತಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು.

ಅಳಿವಿನಂಚಿನಲ್ಲಿರುವ ವನ್ಯಜೀವಿಗಳನ್ನು ಸಂರಕ್ಷಣೆ ಮಾಡುವ ಯೋಜನೆಯಡಿ ನಮೀಬಿಯಾದಿಂದ ಭಾರತಕ್ಕೆ 3 ಗಂಡು ಹಾಗೂ 5 ಹೆಣ್ಣು ಚೀತಾಗಳನ್ನು ವಿಶೇಷ ವಿಮಾನದಲ್ಲಿ ಕರೆತರಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಈ ಚೀತಾಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ಬಿಡುಗಡೆ ಮಾಡಿದ್ದರು. ನವೆಂಬರ್‌ನಲ್ಲಿ ದೊಡ್ಡ ಆವರಣಕ್ಕೆ ಸ್ಥಳಾಂತರಿಸಿದ ಬಳಿಕ ಕಾಡಿಗೆ ಬಿಡಲಾಗಿತ್ತು. ಬಳಿಕ ಚೀತಾಗಳು ಕಾಡಿನ ವಾತಾವರಣಕ್ಕೆ ಹೊಂದಿಕೊಂಡು ಬೇಟೆಯಾಡಲು ಆರಂಭಿಸಿದ್ದವು.

ಮಚ್ಚೆ ಗುರುತಿನ ಚೀತಾಗಳ ಸಂತತಿಯನ್ನು 1952ರಲ್ಲಿ ಭಾರತದಲ್ಲಿ ಅಳಿದುಹೋದ ಸಂತತಿ ಎಂದು ಘೋಷಣೆ ಮಾಡಲಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. ಅದಾದ 75 ವರ್ಷಗಳ ನಂತರ ಭಾರತಕ್ಕೆ ಆಗಮಿಸಿದ ಚೀತಾಗಳಿಗೆ ಕುನೊ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು, ಈ ಕಾರಣಕ್ಕಾಗಿ ಸುತ್ತಮುತ್ತಲ 24 ಗ್ರಾಮಗಳ ಜನರನ್ನು ಖಾಲಿ ಮಾಡಿಸಲಾಗಿದೆ. ಚೀತಾಗಳ ಸ್ಥಳಾಂತರಕ್ಕೆ ಸರ್ಕಾರದಿಂದ 75 ಕೋಟಿ ರೂ. ಖರ್ಚು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...