ಛತ್ತೀಸ್‌ಗಢ | ಸರಪಂಚ್‌ಗೆ ‘ಮತ’ ಹಾಕಿಲ್ಲವೆಂದು ಕುಟುಂಬದ ಮನೆ ಧ್ವಂಸ, ಬಹಿಷ್ಕಾರ

Date:

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸರಪಂಚ್‌ವೊಬ್ಬ ತನಗೆ ಮತ ಹಾಕಿರಲಿಲ್ಲ ಎಂಬ ಕಾರಣಕ್ಕೆ ಕುಟುಂಬವೊಂದರ ಮನೆಯನ್ನು ಧ್ವಂಸಗೊಳಿಸಿ, ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಛತ್ತೀಸ್‌ಗಢದ ಬೆಮೆತಾರಾ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗದಾಮೋಡ್ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸರಪಂಚ್ ತಮಗೆ ನಾವು ಮತ ಹಾಕಿಲ್ಲ ಎಂಬ ಕಾರಣಕ್ಕೆ, ನಮ್ಮ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಅವರ ನಿರ್ದೇಶನದ ಮೇರೆಗೆ ತಮಗೆ ಸಾಮಾಜಿಕ ಬಹಿಷ್ಕರ ವಿಧಿಸಲಾಗಿದ್ದು, ತಮ್ಮ ಮನೆಯನ್ನು ಕೊಡವಿದ್ದಾರೆ ಎಂದು ಸಂತ್ರಸ್ತ ಕುಟುಂಬವು ಆರೋಪಿಸಿದೆ.

ಸಂತ್ರಸ್ತ ಕುಟುಂಬ ಮತ್ತು ಸರಪಂಚ್ ಇಬ್ಬರೂ ಸತ್ನಾಮಿ ಸಮುದಾಯಕ್ಕೆ ಸೇರಿದವರು ಎಂದು ವರದಿಯಾಗಿದೆ. ಸಂತ್ರಸ್ತ ಕುಟುಂಬದ ಸದಸ್ಯೆ ವಿಜಯ ಲಕ್ಷ್ಮಿ ಮನ್ಹಾರೆ ಅವರು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್, ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ. ತಮಗೆ ಪರಿಹಾರ ಒದಗಿಸುವಂತೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮದು 10 ಸದಸ್ಯರ ಕುಟುಂಬ. ಕಳೆದ 25 ವರ್ಷಗಳಿಂದ ವಾಸಿಸುತ್ತಿದ್ದ ನಮ್ಮ ಮನೆಯನ್ನು ಸರಪಂಚ್ ಮಹಾಜನ್ ಮನ್ಹಾರೆ ಅವರ ಸೂಚನೆಯ ಮೇರೆಗೆ ತಹಶೀಲ್ದಾರ್ ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಉಸ್ತುವಾರಿಯಲ್ಲಿ ಧ್ವಂಸಗೊಳಿಸಿದ್ದಾರೆ. ಸರಪಂಚ್ ಆದೇಶವನ್ನು ಪ್ರಶ್ನಿಸಲು ನಮಗೆ ಅವಕಾಶವನ್ನೂ ನೀಡಲಿಲ್ಲ” ಎಂದು ವಿಜಯ ಲಕ್ಷ್ಮಿ ಮನ್ಹಾರೆ ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ ಈಗ ‘ಭಯೋತ್ಪಾದಕರು ಅಳುತ್ತಿದ್ದಾರೆ’ ಎಂದು ಹೇಳುತ್ತಿರುವುದೇಕೆ?

“ಈ ಹಿಂದೆಯೂ, ಮನೆ ಖಾಲಿ ಮಾಡುವಂತೆ ಸರಪಂಚ್ ನೋಟಿಸ್ ನೀಡಿದ್ದರು. ಆದರೆ, ಅವರ ನೋಟಿಸ್ ವಿರುದ್ಧ ನವಗಢ ತಹಶೀಲ್ದಾರ್ ಮತ್ತು ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ, ಅವರು ನಮ್ಮ ದೂರು ಸ್ವೀಕರಿಸಲಿಲ್ಲ. ಅಧಿಕಾರಿಗಳು ಸರಪಂಚ್‌ಗೆ ಸಹಕಾರ ನೀಡುತ್ತಿದ್ದಾರೆ. ಶಾಲೆಯಲ್ಲಿ ನಮ್ಮ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿಯಲ್ಲಿ ಊಟವೂ ದೊರೆಯಂತೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಬೆಮೆತಾರ ಜಿಲ್ಲಾಧಿಕಾರಿ ರಣವೀರ್ ಶರ್ಮಾ, “ಗ್ರಾಮಸಭೆಯು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಿರುವ ಕಟ್ಟಡವನ್ನು ಕೆಡವಲು ಅಧಿಕಾರ ಹೊಂದಿದೆ. ಆದಾಗ್ಯೂ, ಈ ಘಟನೆಯ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಸಂತ್ರಸ್ತ ಕುಟುಂಬಕ್ಕೆ ಸಾಮಾಜಿಕವಾಗಿ ಬಹಿಷ್ಕರಿಸಿದ್ದರೆ, ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...