ಛತ್ತೀಸ್‌ಗಢ | 25 ವಿದ್ಯಾರ್ಥಿಗಳ ಕೈಗೆ ಬಿಸಿ ಎಣ್ಣೆ ಸುರಿದ ಶಿಕ್ಷಕರ ಅಮಾನತು

Date:

ವಿದ್ಯಾರ್ಥಿನಿಯೊಬ್ಬಳು ಶೌಚಾಲಯದ ಹೊರಗೆ ಮಲ ವಿಸರ್ಜನೆ ಮಾಡಿದ ಕಾರಣಕ್ಕೆ  25 ಮಕ್ಕಳಿಗೆ ಬಲವಂತವಾಗಿ ಬಿಸಿ ಎಣ್ಣೆ ಸುರಿದು ಮಕ್ಕಳು ಪರಸ್ಪರರ ಅಂಗೈಗೆ ಬಿಸಿ ಎಣ್ಣೆಯಿಂದ ಸುಟ್ಟುಕೊಳ್ಳುವಂತೆ ಶಿಕ್ಷೆ ನೀಡಿದ ಭಯಾನಕ ಘಟನೆ ಛತ್ತೀಸ್‌ಗಢ ರಾಜ್ಯದ ಬಸ್ತರ್ ವಿಭಾಗದ ಕೊಂಡಗಾಂವ್ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ವರದಿಯಾಗಿದೆ.

ಈ ಬರ್ಬರ ಕೃತ್ಯ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ, ಶಿಕ್ಷಣ ಇಲಾಖೆ ಘಟನೆ ಬಗ್ಗೆ ವಿಚಾರಣೆಗೆ ಆದೇಶ ನೀಡಿದೆ. ಶಾಲೆಯ ಮುಖ್ಯ ಶಿಕ್ಷಕಿ ಹಾಗೂ ಇತರ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಘಟನೆಯ ಸಂತ್ರಸ್ತ ಮಕ್ಕಳು 11 ರಿಂದ 12 ವರ್ಷದವರು ಎನ್ನಲಾಗಿದ್ದು, ಅಂಗೈಯಲ್ಲಿ ಸುಟ್ಟ ಗಾಯಗಳಾಗಿವೆ. ವಿಚಿತ್ರವೆಂದರೆ ಛತ್ತೀಸ್‌ಗಢ ಕೊಂಡಗಾಂವ್ ಜಿಲ್ಲಾ ಶಿಕ್ಷಣಾಧಿಕಾರಿ ತಿವಾರಿ, ಎಣ್ಣೆ ಅಷ್ಟೊಂದು ಬಿಸಿ ಇರಲಿಲ್ಲ ಎಂಬ ಸಬೂಬು ನೀಡಿ 25 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಊಟದ ವೇಳೆ, ಶಿಕ್ಷಕರು ಊಟಕ್ಕೆ ತೆರಳಿದ್ದರು. ಅವರು ಮರಳಿದಾಗ, ಯಾರೋ ವಿದ್ಯಾರ್ಥಿಗಳು ಶೌಚಾಲಯದ ಹೊರಗೆ ವಿಸರ್ಜಿಸಿರುವುದು ಕಂಡುಬಂದಿದೆ. ವಿದ್ಯಾರ್ಥಿನಿಯರನ್ನು ಪ್ರಶ್ನಿಸಿದಾಗ ಯಾರೂ ಒಪ್ಪಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಶಿಕ್ಷೆಗೆ ಶಿಕ್ಷಕರು ಮುಂದಾದರು. ಮಧ್ಯಾಹ್ನದ ಬಿಸಿಯೂಟದ ಅಡುಗೆಮನೆಯಿಂದ ಬಿಸಿ ಎಣ್ಣೆ ತಂದು, ಪರಸ್ಪರರ ಕೈಗೆ ಎಣ್ಣೆ ಸುರಿಯುವಂತೆ ಬಲವಂತಪಡಿಸಿದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗುಟ್ಕಾ ಜಾಹೀರಾತು ಪ್ರಕರಣ: ಬಾಲಿವುಡ್ ನಟರಾದ ಶಾರೂಖ್, ಅಕ್ಷಯ್, ಅಜಯ್ ದೇವಗನ್‌ಗೆ ನೋಟಿಸ್

ಈ ಕರಾಳ ಶಿಕ್ಷೆಯ ಬಗ್ಗೆ ಕೆಲವರು ವಿಡಿಯೋ ಚಿತ್ರೀಕರಣ ಮಾಡಿ, ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದಾರೆ. ಇದು ಅಧಿಕಾರಿಗಳಿಗೆ ತಲುಪಿದೆ.

ತಕ್ಷಣ ಶಾಲೆಗೆ ತನಿಖಾ ತಂಡ ಕಳುಹಿಸಲಾಗಿದೆ ಎಂದು ತಾಲೂಕು ಶಿಕ್ಷಣ ಸಂಪನ್ಮೂಲ ಅಧಿಕಾರಿ ತಾಹಿರ್ ಖಾನ್ ಹೇಳಿದ್ದಾರೆ. ಐದು ಮಕ್ಕಳ ಅಂಗೈನಲ್ಲಿ ಸುಟ್ಟ ಗುಳ್ಳೆಗಳು ಎದ್ದಿವೆ ಎಂದು ಮಧುಲಿಕಾ ತಿವಾರಿ ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...