ಲೋಕಸಭೆ ಚುನಾವಣೆ| ತಪ್ಪದೆ ಮತದಾನ ಮಾಡಿ; ಮುಖ್ಯ ನ್ಯಾಯಮೂರ್ತಿ ಮನವಿ

Date:

ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ, ತಪ್ಪದೆ ಮತದಾನ ಮಾಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಜನರಲ್ಲಿ ಮನವಿ ಮಾಡಿದ್ದು ಇದು ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಪ್ರಮುಖ ಕರ್ತವ್ಯ ಎಂದು ತಿಳಿಸಿದ್ದಾರೆ.

2024 ರ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗದ ‘ಮೈ ವೋಟ್ ಮೈ ವಾಯ್ಸ್’ ಮಿಷನ್‌ ವಿಡಿಯೋ ಸಂದೇಶದಲ್ಲಿ ನ್ಯಾಯಮೂರ್ತಿ ಚಂದ್ರಚೂಡ್, “ನಾವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರಜೆಗಳು, ಅದು ನಮ್ಮ ದೇಶ. ಸಂವಿಧಾನವು ನಮಗೆ ನಾಗರಿಕರಾಗಿ ಬಹುಸಂಖ್ಯೆಯ ಹಕ್ಕುಗಳನ್ನು ನೀಡುತ್ತದೆ ಆದರೆ ನಾವು ಪ್ರತಿಯೊಬ್ಬರೂ ನಮ್ಮ ಮೇಲೆ ಹೊರಿಸಲಾದ ಕರ್ತವ್ಯವನ್ನು ನಿರ್ವಹಿಸುತ್ತೇವೆ ಎಂಬ ನಿರೀಕ್ಷೆಯಿದೆ. ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಮತ ಚಲಾಯಿಸುವುದು ಪೌರತ್ವದ ಪ್ರಮುಖ ಕರ್ತವ್ಯಗಳಲ್ಲಿ ಒಂದಾಗಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ?  ಮಹಿಳೆಯರನ್ನು ‘ಈ ರೀತಿ’ ಉಲ್ಲೇಖಿಸದಿರಿ: ಮಹತ್ವದ ಕೈಪಿಡಿ ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ನಿಮ್ಮೆಲ್ಲರಲ್ಲಿಯೂ ವಿನಂತಿಸುತ್ತೇನೆ. ದಯವಿಟ್ಟು ನಮ್ಮ ಮಹಾನ್ ತಾಯ್ನಾಡಿನ ಪ್ರಜೆಗಳಾಗಿ ಜವಾಬ್ದಾರಿಯುತವಾಗಿ ಮತದಾನ ಮಾಡಲು ಈ ಅವಕಾಶವನ್ನು ಕಳೆದುಕೊಳ್ಳಬೇಡಿ. ಪ್ರತಿ ಐದು ವರ್ಷಗಳಿಗೊಮ್ಮೆ ನಮ್ಮ ದೇಶಕ್ಕಾಗಿ ಐದು ನಿಮಿಷಗಳನ್ನು ಮೀಸಲಿಡಲು ಸಾಧ್ಯವಾಗುವುದಿಲ್ಲದೇ? ಹೆಮ್ಮೆಯಿಂದ ಮತ ಚಲಾಯಿಸೋಣ. ನನ್ನ ಮತ, ನನ್ನ ಧ್ವನಿ” ಎಂದು ಜಸ್ಟಿಸ್ ಡಿವೈ ಚಂದ್ರಚೂಡ್ ಹೇಳಿದರು.

“ಸರ್ಕಾರವನ್ನು ಚುನಾಯಿಸುವಲ್ಲಿ ನಾಗರಿಕರು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಅದಕ್ಕಾಗಿಯೇ ಈ ಸರ್ಕಾರವು ಜನರ ಸರ್ಕಾರ, ಜನರಿಂದ ಮತ್ತು ಜನರಿಗಾಗಿ ಎಂದು ಹೇಳಲಾಗುತ್ತದೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದರು.

ಇದನ್ನು ಓದಿದ್ದೀರಾ?  ನ್ಯಾಯಾಂಗದಲ್ಲಿ ಮಹಿಳಾ ನೇಮಕಾತಿ | ಕರ್ನಾಟಕದಿಂದ ಸಾಮಾಜಿಕ ಪರಿವರ್ತನೆ: ಸಿಜೆಐ ಚಂದ್ರಚೂಡ್‌

ಮೊದಲ ಬಾರಿಗೆ ಮತದಾರರಾಗಿ ಮತ ಚಲಾಯಿಸಲು ಮತಗಟ್ಟೆಗೆ ಸರತಿ ಸಾಲಿನಲ್ಲಿ ನಿಂತ ಉತ್ಸಾಹವನ್ನು ಹಂಚಿಕೊಂಡಿದ್ದಾರೆ. “ನಾನು ಮತ ಚಲಾಯಿಸುವಾಗ ಬೆರಳಿನ ಶಾಯಿಯು ದೇಶಭಕ್ತಿಯ ಪ್ರಚಂಡ ಭಾವನೆಗಳನ್ನು ಮತ್ತು ರಾಷ್ಟ್ರದೊಂದಿಗಿನ ಒಡನಾಟದ ಗುರುತು ನೀಡುತ್ತದೆ” ಎಂದು ಚಂದ್ರಚೂಡ್ ವಿವರಿಸಿದರು.

ನಾನು ನನ್ನ ಜೀವನದಲ್ಲಿ ಒಂದೇ ಒಂದು ಮತವನ್ನು ಕೂಡಾ ಹಾಕದೆ ಕೂತಿಲ್ಲ. ಕೆಲಸಕ್ಕಾಗಿ ಅಲೆದಾಟ ಮಾಡಿದರೂ ಕೂಡಾ ಮತ ಚಲಾಯಿಸುವುದನ್ನು ಎಂದಿಗೂ ತಪ್ಪಿಸಿಲ್ಲ ಎಂದರು.

ಲೋಕಸಭೆ ಚುನಾವಣೆಯು ಏಪ್ರಿಲ್ 19 ರಿಂದ ಜೂನ್ 1, 2024 ರವರೆಗೆ ನಡೆಯಲಿದೆ. ಚುನಾವಣೆಗಳು ಏಳು ಹಂತಗಳಲ್ಲಿ ನಡೆಯಲಿದ್ದು, ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಗುವುದು. ಇನ್ನು 2019ರ ಲೋಕಸಭೆ ಚುನಾವಣೆಗೆ ಹೋಲಿಸಿದಾಗ 2024ರ ಮೊದಲ ಹಂತದ ಚುನಾವಣೆಯಲ್ಲಿ ಶೇಕಡ 61.06ರಷ್ಟು ಮತದಾನವಾಗಿದೆ. 2019ರಲ್ಲಿ ಶೇಕಡ 70.83 ಮತದಾನವಾಗಿದ್ದು, ಅದಕ್ಕಿಂತ ಶೇಕಡ 9.77ರಷ್ಟು ಕಡಿಮೆ ಮತದಾನವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...