‘ಮಕ್ಕಳು ಉಸಿರುಗಟ್ಟುತ್ತಿದ್ದಾರೆ’: ಮುಂಬೈನ ಗಾಳಿ ಗುಣಮಟ್ಟದ ಕುರಿತು ನಟಿ ದೀಪಿಕಾ ಪಡುಕೋಣೆ ಕಳವಳ

Date:

ಮುಂಬೈನ ವಾಯು ಗುಣಮಟ್ಟವು ‘ಅಪಾಯಕಾರಿ’ ಹಂತಕ್ಕೆ ತಲುಪಿದೆ. ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಯನ್ನು ಸುಧಾರಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ದೀಪಿಕಾ, “ಈ ನಗರ (ಮುಂಬೈ ಮತ್ತು ಇಲ್ಲಿನ ಮಕ್ಕಳು ಉಸಿರುಗಟ್ಟುತ್ತಿದ್ದಾರೆ! ಇದು ಹೇಗೆ ಸರಿಯಾಗುತ್ತದೆ!? ಬಿಎಂಸಿ ಮತ್ತು ಬಿಎಂಸಿ ಆರೋಗ್ಯ ವಿಭಾಗವು ನಗರವಾಸಿಗಳಿಗೆ ಅಗತ್ಯ ನೆರವು ನೀಡಬೇಕು. ಹೆಚ್ಚುತ್ತಿರುವ ಮಾಲಿನ್ಯದ ಬಿಕ್ಕಟ್ಟನ್ನು ಪರಿಹರಿಸಲು ಅಧಿಕಾರಿಗಳು ಮಧ್ಯಪ್ರವೇಶಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಅವರ ಮಗಳು ಒಂದೂವರೆ ವರ್ಷದ ‘ದುವಾ’ ಸೇರಿದಂತೆ ಮುಂಬೈನಲ್ಲಿ ಬೆಳೆಯುತ್ತಿರುವ ಸಣ್ಣ ಮಕ್ಕಳ ಮೇಲೆ ಹೆಚ್ಚುತ್ತಿರುವ ಮಾಲಿನ್ಯದ ಮಟ್ಟವು ಹೇಗೆ ಪರಿಣಾಮ ಬೀರಬಹುದು ಎಂಬ ಕುರಿತು ದೀಪಿಕಾ ಚಿಂತಿತರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಕೆಲವು ತಿಂಗಳುಗಳಿಂದ ಮುಂಬೈನ ಗಾಳಿಯ ಗುಣಮಟ್ಟ ಹದಗೆಡುತ್ತಿದೆ. ನಗರದ ಹಲವು ಪ್ರದೇಶಗಳಲ್ಲಿ AQI ಮಟ್ಟವು ಕಳಪೆಯಿಂದ ಅತ್ಯಂತ ಕಳಪೆ ವರ್ಗಕ್ಕೆ ಕುಸಿದಿದೆ. 2026ರ ಫೆಬ್ರವರಿಯಲ್ಲಿ, ನಗರದಾದ್ಯಂತ AQI ಮಟ್ಟವು 230 ರಿಂದ 250ರ ನಡುವೆ ವರದಿಯಾಗಿದ್ದರೆ, ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ (BKC), ಘಾಟ್ಕೋಪರ್ ಮತ್ತು ಮುಲುಂಡ್‌ನಂತಹ ಸ್ಥಳಗಳಲ್ಲಿ 290ಕ್ಕೆ ತಲುಪಿತ್ತು. ಇದು ‘ತೀವ್ರ’ ವರ್ಗಕ್ಕೆ ಸಮೀಪದಲ್ಲಿದೆ.

ನಗರದಾದ್ಯಂತ ನಡೆಯುತ್ತಿರುವ ಬೃಹತ್ ನಿರ್ಮಾಣ ಮತ್ತು ಪುನರ್ ಅಭಿವೃದ್ಧಿ ಯೋಜನೆಗಳಿಂದ ಉಂಟಾಗುವ ಧೂಳೇ ಈ ಮಾಲಿನ್ಯದ ಏರಿಕೆಗೆ ಪ್ರಮುಖ ಕಾರಣ ಎಂದು ಪರಿಸರ ತಜ್ಞರು ಹೇಳುತ್ತಾರೆ. ಉತ್ಖನನ, ಕಟ್ಟಡಗಳ ಧ್ವಂಸ ಹಾಗೂ ಅವಶೇಷಗಳ ಸಾಗಣೆಯಂತಹ ಚಟುವಟಿಕೆಗಳು PM10 ಮತ್ತು PM2.5 ನಂತಹ ಹಾನಿಕಾರಕ ಕಣಗಳನ್ನು ಗಾಳಿಗೆ ಬಿಡುಗಡೆ ಮಾಡುತ್ತಿವೆ ಎಂದು ವರದಿಯಾಗಿದೆ.

ವಾಯುಮಾಲಿನ್ಯದ ವಿಚಾರದಲ್ಲಿ ನಟಿ ದೀಪಾಕಾ ಮಾತ್ರವಲ್ಲದೆ, ಹಲವಾರು ನಟಿಯರು ಧ್ವನಿ ಎತ್ತಿದ್ದಾರೆ. ಇತ್ತೀಚೆಗೆ ನಟಿ ಸಯಾಮಿ ಖೇರ್ ಕೂಡ ಮುಂಬೈನ ಹದಗೆಡುತ್ತಿರುವ ಗಾಳಿಯ ಗುಣಮಟ್ಟದ ಬಗ್ಗೆ ಅಸಮಾಧಾನ ಹಂಚಿಕೊಂಡಿದ್ದರು. ತಮ್ಮ ದೈನಂದಿನ ಓಟದ ಅಭ್ಯಾಸವನ್ನು ನೆನಪಿಸಿಕೊಂಡ ಅವರು, “ಹತ್ತು ವರ್ಷಗಳ ಹಿಂದೆ ನಾನು ಓಡುವುದನ್ನು ಪ್ರಾರಂಭಿಸಿದೆ… ಪ್ರತಿದಿನ ಬೆಳಿಗ್ಗೆ ನಾನು ಕಾರ್ಟರ್ ರಸ್ತೆಯಲ್ಲಿ ಸಮುದ್ರದ ತಂಗಾಳಿಯನ್ನು ಆಸ್ವಾದಿಸುತ್ತಾ ಓಡುತ್ತಿದ್ದೆ. ಇಂದು ಬೂಟು ಧರಿಸುವ ಮೊದಲು ಮಾಸ್ಕ್ ಧರಿಸುತ್ತಿದ್ದೇನೆ. ಇದು ಮತ್ತೆ ಸಾಂಕ್ರಾಮಿಕ ರೋಗದ ಕಾಲದಂತೆ ಭಾಸವಾಗುತ್ತಿದೆ. ವ್ಯತ್ಯಾಸವೆಂದರೆ ಈ ಬಾರಿ ಗಾಳಿಯೇ ನಮ್ಮನ್ನು ಕೊಲ್ಲಬಹುದು” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಈ ಲೇಖನ ಓದಿದ್ದೀರಾ?: ಮೋದಿ ಇಸ್ರೇಲ್ ದೋಸ್ತಿ; ಎಫೆಕ್ಟ್‌ ಮಾತ್ರ ಭಾರತಕ್ಕೆ!

ನಟಿ ರಿಚಾ ಚಡ್ಡಾ ಕೂಡ ಗಾಳಿಯ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಮುಂಬೈನ ಮಾಲಿನ್ಯವನ್ನು ‘ಮಾನವ ನಿರ್ಮಿತ ದುರಂತ’ ಎಂದು ಕರೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಜನರು ಧ್ವನಿ ಎತ್ತುತ್ತಿಲ್ಲ ಎಂದು ನಿರಾಸೆ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ನಿರ್ಮಾಣ ಕಾಮಗಾರಿಗಳ ಧೂಳು ಮತ್ತು ಧೂಳು-ನಿಯಂತ್ರಣ ನಿಯಮಗಳ ಉಲ್ಲಂಘನೆಯೇ ಮಾಲಿನ್ಯಕ್ಕೆ ಪ್ರಮುಖ ಕಾರಣ ಎಂಬುದನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಪರಿಸರ ಮಾರ್ಗಸೂಚಿಗಳನ್ನು ಪಾಲಿಸಲು ವಿಫಲವಾದ ನಿರ್ಮಾಣ ಸ್ಥಳಗಳಿಗೆ ಬಿಎಂಸಿ ಈಗಾಗಲೇ ನೂರಾರು ನೋಟಿಸ್‌ಗಳನ್ನು ಮತ್ತು ಕೆಲಸ ತಡೆಯುವ ಆದೇಶಗಳನ್ನು ನೀಡಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...