ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕು; ಬಡಾಯಿ ಕೊಚ್ಚಿಕೊಳ್ಳುವುದರಿಂದಲ್ಲ: ಪ್ರಧಾನಿಗೆ ಖರ್ಗೆ ತರಾಟೆ

Date:

ಉತ್ತರಾಖಂಡದ ಗಡಿಯಂತ್ರಣ ರೇಖೆಯ ಉದ್ದಕ್ಕೂ ಚೀನಾದ ಹೊಸ ಮಿಲಿಟರಿ ನಿರ್ಮಾಣಗಳ ವರದಿಗಳ ಕುರಿತು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಚೀನಾವನ್ನು ಬುದ್ಧಿವಂತಿಕೆಯಿಂದ ಎದುರಿಸಬೇಕೇ ವಿನಾ ಬಡಾಯಿ ಕೊಚ್ಚಿಕೊಳ್ಳುವುದರಿಂದ ಸಾಧ್ಯವಿಲ್ಲ. ಗಡಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾವನ್ನು ದೋಷಮುಕ್ತಗೊಳಿಸಿದ್ದಕ್ಕಾಗಿ ರಾಷ್ಟ್ರವು ಭಾರೀ ಬೆಲೆ ತೆರಬೇಕಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಈಗ ಉತ್ತರಾಖಂಡದಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆಗೆ ಸಂಬಂಧಿಸಿದಂತೆ ಚೀನಾವು ಹೊಸ ನಿರ್ಮಾಣಗಳನ್ನು ಕೈಗೆತ್ತಿಕೊಂಡಿರುವುದರಿಂದ ನಮ್ಮ ದೇಶದ ಪ್ರಾದೇಶಿಕ ಸಮಗ್ರತೆಗೆ ಅಡ್ಡಿಯಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರಾಖಂಡದ ಗಡಿ ನಿಯಂತ್ರಣ ರೇಖೆಯ ಬಳಿ ನಿರ್ಮಾಣವಾಗುತ್ತಿರುವ ಚೀನಾದ ನಿರ್ಮಾಣಗಳನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಖರ್ಗೆ ಹಂಚಿಕೊಂಡಿದ್ದಾರೆ. 

ಚೀನಾದ ಆಕ್ರಮಣಕಾರಿ ನೀತಿಯ ಬಗ್ಗೆ ಕೇಂದ್ರ ಸರ್ಕಾರ ಏಕೆ ಪ್ರಶ್ನೆ ಮಾಡುವುದಿಲ್ಲ. ಪೂರ್ವ ಲಡಾಖ್‌ನಲ್ಲಿ ಗಡಿ ಪರಿಸ್ಥಿತಿಯು ಗಂಭೀರವಾಗಿರುವಾಗ ಚೀನಾದೊಂದಿಗಿನ ಸಂಬಂಧಗಳ ಬಗ್ಗೆ ಮಾತನಾಡಿದರೆ ಯಾವುದೇ ಪ್ರಯೋಜನವಿಲ್ಲ”

ಈ ಸುದ್ದಿ ಓದಿದ್ದೀರಾ? ಥಾಣೆ ಹತ್ಯೆ ಪ್ರಕರಣ | ಎಚ್‌ಐವಿ ಸೋಂಕಿತನಾಗಿದ್ದ ಹಂತಕ; ಮಹಿಳೆಯದು ಆತ್ಮಹತ್ಯೆ ಎಂದು ಹೇಳಿಕೆ!

ಚರ್ಚೆಯಿಲ್ಲದ ವಿಷಯವನ್ನು ಬಿಟ್ಟು ದೇಶದ ಗಡಿಯನ್ನು ಆಕ್ರಮಿಸಿರುವ ಚೀನಾದ ಬಗ್ಗೆ ಏಕೆ ಮಾತನಾಡುವುದಿಲ್ಲ. ಅಲ್ಲದೆ ಪೂರ್ವ ಲಡಾಖ್‌ನ ಗಡಿಯಲ್ಲಿ ಪರಿಸ್ಥಿತಿಯು ಸಾಮಾನ್ಯವಲ್ಲದಿರುವಾಗ ನೆರೆಯ ದೇಶದೊಂದಿಗಿನ ತನ್ನ ಸಂಬಂಧಗಳ ಬಗ್ಗೆ ಮೃದುಧೋರಣೆ ತಾಳಿದರೆ ಸಮಸ್ಯೆ ಪರಿಹಾರವಾಗುವುದೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...