ಪ್ರಧಾನಿ ಮೋದಿ ದ್ವೇಷ ಭಾಷಣ: ಒಂದು ಲಕ್ಷಕ್ಕೂ ಅಧಿಕ ನಾಗರಿಕರಿಂದ ಚುನಾವಣಾ ಆಯೋಗಕ್ಕೆ ಪತ್ರ

Date:

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರ ಜನರ ಸಂಪತ್ತನ್ನು “ನುಸುಳುಕೋರರಿಗೆ” ಹಂಚಲಿದೆ ಎಂದು ತಮ್ಮ ಪ್ರಚಾರ ಭಾಷಣದಲ್ಲಿ ಹೇಳಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಒಂದು ಲಕ್ಷಕ್ಕೂ ಅಧಿಕ ನಾಗರಿಕರು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

“ಪ್ರಧಾನಿಯವರು ಬಿಜೆಪಿಯ ಸ್ಟಾರ್ ಚುನಾವಣಾ ಪ್ರಚಾರಕರಾಗಿ ಎಪ್ರಿಲ್ 21ರಂದು ರಾಜಸ್ಥಾನದಲ್ಲಿ ಸಂವಿಧಾನವನ್ನು ಗೌರವಿಸುವ ದೇಶದ ಲಕ್ಷಾಂತರ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಈ ಭಾಷಣ ಅಪಾಯಕಾರಿ ಮತ್ತು ದೇಶದ ಮುಸ್ಲಿಮರ ಮೇಲೆ ನೇರ ದಾಳಿಯಾಗಿದೆ” ಎಂದು ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. ಅಲ್ಲದೇ, ಈ ಬಗ್ಗೆ ಸಹಿ ಸಂಗ್ರಹ ಅಭಿಯಾನ ಕೂಡ ನಡೆಸಿದ್ದಾರೆ. ಈ ಪತ್ರಕ್ಕೆ ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳು ಸೇರಿದಂತೆ ಸಾಮಾಜಿಕ ಹೋರಾಟಗಾರರು ಸಹಿ ಹಾಕಿದ್ದಾರೆ.

ಇದನ್ನು ಓದಿದ್ದೀರಾ? ದ್ವೇಷ ಭಾಷಣ ವಿವಾದದ ಬೆನ್ನಲ್ಲೇ ‘ಡ್ಯಾಮೇಜ್ ಕಂಟ್ರೋಲ್‌’ಗೆ ಮುಂದಾದ ಪ್ರಧಾನಿ ಮೋದಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಸ್ಲಿಮರ ವಿರುದ್ಧ ನಿಂದನಾತ್ಮಕ ಭಾಷೆಯನ್ನು ಮತಗಳನ್ನು ಯಾಚಿಸುವ ಉದ್ದೇಶದಿಂದ ಪ್ರಧಾನಿ ಬಳಸಿರುವುದು, ಜಗತ್ತಿನ “ಮದರ್ ಆಫ್ ಡೆಮಾಕ್ರೆಸಿ” ಎಂಬ ಹೆಗ್ಗಳಿಕೆ ಪಡೆದಿರುವ ಭಾರತದ ಘನತೆಯನ್ನು ಕುಂದುಂಟು ಮಾಡುತ್ತದೆ, ಇಂತಹ ದ್ವೇಷದ ಭಾಷಣದ ವಿರುದ್ಧ ಚುನಾವಣಾ ಆಯೋಗ ಕ್ರಮಕೈಗೊಳ್ಳಲು ವಿಫಲವಾದರೆ ನಿಮಗಿಂತ ಮುಂಚೆ ಈ ಹುದ್ದೆಯಲ್ಲಿದ್ದ ಹಲವು ನಿಷ್ಠಾವಂತ ಅಧಿಕಾರಿಗಳು ಎತ್ತಿ ಹಿಡಿದಿದ್ದ ಸಂಸ್ಥೆಯ ವಿಶ್ವಾಸಾರ್ಹತೆ ಮತ್ತು ಸ್ವಾಯತ್ತತೆಗೆ ಧಕ್ಕೆ ತಂದಂತಾಗುತ್ತದೆ’ ಎಂದು ಮುಖ್ಯ ಚುನಾವಣಾ ಆಯುಕ್ತರಿಗೆ ಬರೆಯಲಾದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಚುನಾವಣೆ ಮುಗಿದ ಮೇಲೂ ಇದರ ಗಾಯಗಳು ದಶಕಗಳ ಕಾಲ ಉಳಿಯುತ್ತವೆ: ಜಾಗೃತ ನಾಗರಿಕರು ಕರ್ನಾಟಕ

‘ಮೋದಿಯವರು ದ್ವೇಷ ಭಾಷಣ ಮಾಡುವ ಮೂಲಕ ಅಲ್ಪ ಸಂಖ್ಯಾತರನ್ನು ಹೀಯಾಳಿಸುವ ಜತೆಗೆ, ಬಹು ಸಂಖ್ಯಾತ ಸಮುದಾಯವನ್ನು ಹೆದರಿಸಿದ್ದಾರೆ. ಮುಸ್ಲಿಮರು ಅತಿ ಹೆಚ್ಚು ಮಕ್ಕಳನ್ನು ಪಡೆಯುವಂಥವರು ಎಂದು ಚುಚ್ಚಿದ್ದಾರೆ. ಇವೆಲ್ಲವೂ ಸತ್ಯಕ್ಕೆ ದೂರವಾದ ಮಾತುಗಳು. ಇಂತಹ ಭಾಷಣಗಳು ಉಂಟು ಮಾಡುವ ಪರಿಣಾಮಗಳನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಚುನಾವಣೆ ಮುಗಿದ ಮೇಲೂ ಇದರ ಗಾಯಗಳು ದಶಕಗಳ ಕಾಲ ಉಳಿಯುತ್ತವೆ’ ಎಂದು ಜಾಗೃತ ನಾಗರಿಕರು ಕರ್ನಾಟಕ ಸಂಘಟನೆ ಹೇಳಿದೆ.

ECI 4

ಸಂಘಟನೆಯ ಮುಖಂಡರಾದ ಕೆ.ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ವಿಜಯಾ, ಎಸ್‌.ಜಿ.ಸಿದ್ದರಾಮಯ್ಯ, ರಾಜೇಂದ್ರ ಚೆನ್ನಿ, ವಿಮಲಾ.ಕೆ.ಎಸ್, ಮಾವಳ್ಳಿ ಶಂಕರ್, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್, ಬಿ.ಶ್ರೀಪಾದ ಭಟ್‌ ಮತ್ತಿತರರು ಆತಂಕ ವ್ಯಕ್ತಪಡಿಸಿದ್ದಾರೆ.

‘ಮೋದಿಯವರು ಅನೇಕ ದ್ವೇಷ ಭಾಷಣಗಳನ್ನು ಹಿಂದೆಯೂ ಮಾಡಿದ್ದಾರೆ. ಆದರೆ, ಈ ಬಾರಿ ತಮ್ಮ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ದ್ವೇಷ ಭಾಷಣದ ಪಾತಾಳಕ್ಕೆ ಇಳಿದಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಕೂಡಾ. ಚುನಾವಣಾ ಆಯೋಗ ಮತ್ತು ನ್ಯಾಯಾಂಗ ಈಗಲಾದರೂ ಅವರಿಗೆ ಲಗಾಮು ಹಾಕಬೇಕು ಹಾಗೂ ಶಿಕ್ಷೆ ವಿಧಿಸಬೇಕು. ಇಲ್ಲದಿದ್ದರೆ ಭಾರತದಲ್ಲಿ ಧರ್ಮ ನಿರಪೇಕ್ಷ ಜನತಂತ್ರ ಮರಣಶಯ್ಯೆಯಲ್ಲಿದೆ ಎಂದೇ ಅರ್ಥ. ಕೂಡಲೇ ಆಯೋಗವು ದೂರನ್ನು ದಾಖಲಿಸಿಕೊಂಡು ಕಾರ್ಯ ಪ್ರವೃತ್ತವಾಗಬೇಕು’ ಎಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...