ಗಣೇಶ ಪೂಜೆಯಲ್ಲಿ ಪ್ರಧಾನಿಗೆ ಆಹ್ವಾನ: ಮೌನ ಮುರಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್

Date:

ತಮ್ಮ ಮನೆಯ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸಲಾಗಿರುವ ಕುರಿತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮೌನ ಮುರಿದಿದ್ದಾರೆ.

ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿರುವ ಅವರು, ಸಾಂವಿಧಾನಿಕ ನ್ಯಾಯಾಲಯಗಳ ನ್ಯಾಯಾಧೀಶರಲ್ಲಿ ಸಾಕಷ್ಟು ಪ್ರಬುದ್ಧತೆ ಇದೆ. ಕಾರ್ಯನಿರ್ವಾಹಕ ಮುಖ್ಯಸ್ಥರಲ್ಲಿ ನ್ಯಾಯಾಂಗಕ್ಕೆ ಸಂಬಂಧಿಸಿದ ಯಾವುದೇ ವಿಷಯಗಳನ್ನು ಚರ್ಚಿಸಲಾಗಿಲ್ಲ. ಪ್ರೋಟೋಕಾಲ್‌ ತುಂಬ ಕಟ್ಟುನಿಟ್ಟಾಗಿರುತ್ತವೆ. ರಾಜಕೀಯ ಕಾರ್ಯನಿರ್ವಾಹಕ ಮುಖ್ಯಸ್ಥರೊಂದಿಗೆ ನ್ಯಾಯಾಂಗದ ಯಾವುದೇ ವಿಷಯಗಳನ್ನು ಚರ್ಚಿಸಲಾಗಿಲ್ಲ. ನಮಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಆಡಳಿತ ಕರ್ತವ್ಯಗಳ ಬಗ್ಗೆ ತಿಳಿದಿದೆ. ಅವರಿಗೂ ರಾಜಕೀಯ ನಡವಳಿಕೆಗಳ ಬಗ್ಗೆ ಅರಿವಿದೆ. ಸ್ವಾಯತ್ತ ನ್ಯಾಯಾಂಗದ ಮುಖ್ಯ ನ್ಯಾಯಮೂರ್ತಿ ಅಥವಾ ನ್ಯಾಯಮೂರ್ತಿ ಒಳಗೊಂಡಂತೆ ಯಾವುದೇ ನ್ಯಾಯಾಧೀಶರು ಯಾವುದೇ ಬೆದರಿಕೆಗೆ ಒಳಗಾಗುವುದಿಲ್ಲ” ಎಂದಿದ್ದಾರೆ.

ರಾಜ್ಯಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು ವಾಡಿಕೆ. ಹಾಗೆಯೇ ಇದು ಕೂಡ. ರಾಜಕೀಯದಲ್ಲಿಯೂ ಕೂಡ ನ್ಯಾಯಾಂಗಕ್ಕೆ ಹೆಚ್ಚಿನ ಗೌರವವಿದೆ. ನ್ಯಾಯಾಂಗ ಮತ್ತು ಸರ್ಕಾರದ ನಡುವೆ ಸುಗಮವಾಗಿ ಕಾರ್ಯಗಳು ಸಾಗಲು ಸಭೆಗಳು ಅಗತ್ಯವಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೂರು ಪಕ್ಷಗಳಿಂದಲೂ ಕುಟುಂಬ ಅಭ್ಯರ್ಥಿಗಳ ದುರಂತ ರಾಜಕಾರಣ

ನಾವು ರಾಜ್ಯದ ಮುಖ್ಯಮಂತ್ರಿ ಅವರೊಂದಿಗೆ ಮಾತುಕತೆ ನಡೆಸಬೇಕು. ಏಕೆಂದರೆ ಬಜೆಟ್ ಒದಗಿಸುವವರು ಅವರು. ನ್ಯಾಯಾಂಗಕ್ಕೆ ಬಜೆಟ್ ಒದಗಿಸುವವರು ಅವರೇ ವಿನಾ: ನ್ಯಾಯಾಧೀಶರಲ್ಲ. ನಾವು ಭೇಟಿಯಾಗದೇ ಪತ್ರಗಳ ಮೇಲೆ ಮಾತ್ರ ಅವಲಂಬಿತವಾಗಿದ್ದರೆ ನಮ್ಮ ಕೆಲಸ ನಡೆಯುವುದಿಲ್ಲ ಎಂದು ಹೇಳಿದರು.

ನ.10ರಂದು ನಿವೃತ್ತಿ ಹೊಂದಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ದೆಹಲಿ ನಿವಾಸಕ್ಕೆ ಸೆಪ್ಟೆಂಬರ್‌ನಲ್ಲಿ ಗಣೇಶ ಪೂಜೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದರು. ಈ ಭೇಟಿಗೆ ಸಂಬಂಧಿಸಿದಂತೆ ವಿಪಕ್ಷಗಳು ಟೀಕೆ ಮಾಡಿದ್ದವು.

ಭಾರತದ ಮುಖ್ಯ ನ್ಯಾಯಮೂರ್ತಿ ಹಾಗೂ ಪ್ರಧಾನಿಯವರು ಉನ್ನತ ವ್ಯಕ್ತಿಗಳು. ಒಬ್ಬ ಹಾಲಿ ಸಿಜೆಐ ಮನೆಗೆ ಪ್ರಧಾನಿಯೊಬ್ಬರು ಭೇಟಿ ನೀಡುವುದು ಸರಿಯೇ? ಇದು ನ್ಯಾಯಾಂಗಕ್ಕೆ ಧಕ್ಕೆ ತಂದಹಾಗಲ್ಲವೇ? ಎಂದು ವಿಪಕ್ಷಗಳು ಕಿಡಿಕಾರಿದ್ದವು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...