ಹೈಕೋರ್ಟ್ ಕೊಲಿಜಿಯಂಗಿಂತ ಸುಪ್ರೀಂ ಕೋರ್ಟ್‌ ಕೊಲಿಜಿಯಂ ಮೇಲಲ್ಲ: ಸಿಜೆಐ ಬಿ ಆರ್‌ ಗವಾಯಿ

Date:

ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಕೊಲಿಜಿಯಂ – ಎರಡೂ ಸಾಂವಿಧಾನಿಕ ಸಂಸ್ಥೆಗಳು. ಇವುಗಳಲ್ಲಿ ಯಾವುದೂ ಮೇಲಲ್ಲ, ಯಾವುದೂ ಕೀಳಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರು ಶನಿವಾರ ಅಭಿಪ್ರಾಯಪಟ್ಟರು.

ಸುಪ್ರೀಂ ಕೋರ್ಟ್ ಬಾರ್‌ ಅಸೋಸಿಯೇಷನ್‌ (ಎಸ್‌ಸಿಬಿಎ) 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಎಸ್‌ಸಿಬಿಎ ಅಧ್ಯಕ್ಷ ವಿಕಾಸ್‌ ಸಿಂಗ್‌ ಅವರು, ‘ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳ ನೇಮಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ವಕೀಲಿಕೆ ಮಾಡುವ ವಕೀಲರನ್ನೂ ಪರಿಗಣಿಸಿ’ ಎಂದು ಮನವಿ ಮಾಡಿದರು.

ಆಗ ಸಿಜೆಐ ಗವಾಯಿ ಅವರು, ‘ನ್ಯಾಯಮೂರ್ತಿಗಳ ನೇಮಕಕ್ಕೆ ನಿರ್ದಿಷ್ಟ ಹೆಸರು ಶಿಫಾರಸು ಮಾಡುವಂತೆ ಹೈಕೋರ್ಟ್‌ ಕೊಲಿಜಿಯಂಗೆ, ಸುಪ್ರೀಂ ಕೋರ್ಟ್ ಕೊಲಿಜಿಯಂ ಆದೇಶ ಮಾಡುವಂತಿಲ್ಲ’ ಎಂದು ಸ್ಪಷ್ಟಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ನ್ಯಾಯಮೂರ್ತಿಗಳ ನೇಮಕ ವಿಚಾರದಲ್ಲಿ ಹೈಕೋರ್ಟ್‌ ಕೊಲಿಜಿಯಂ ಮೊದಲಿಗೆ ನಿರ್ಧಾರ ಕೈಗೊಳ್ಳುತ್ತದೆ. ಹೈಕೋರ್ಟ್‌ ಕೊಲಿಜಿಯಂಗೆ ನಾವು ಕೆಲವು ಹೆಸರುಗಳನ್ನು ಶಿಫಾರಸು ಮಾಡುತ್ತೇವೆ ಮತ್ತು ಅವುಗಳನ್ನು ಪರಿಗಣಿಸುವಂತೆ ಮನವಿ ಮಾಡುತ್ತೇವೆ. ಅಂತಿಮವಾಗಿ ಹೈಕೋರ್ಟ್‌ ಕೊಲಿಜಿಯಂ ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಸುಪ್ರೀಂ ಕೋರ್ಟ್‌ಗೆ ಕಳುಹಿಸುತ್ತದೆ’ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೊಟ್ಟೆಗೆ ವಿರೋಧ; ಬಡ ಮಕ್ಕಳ ಆಹಾರದ ಸ್ವಾತಂತ್ರ್ಯಕ್ಕೆ ಕೊಕ್ಕೆ

ಸಂಜೀವ್‌ ಖನ್ನಾ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಆಗಿದ್ದಾಗ, ಅಭ್ಯರ್ಥಿಗಳೊಂದಿಗೆ ಸಂದರ್ಶನ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಲಾಯಿತು. ಅಭ್ಯರ್ಥಿಗಳೊಂದಿಗೆ 10 ನಿಮಿಷ, 15 ನಿಮಿಷ ಅಥವಾ ಅರ್ಧ ತಾಸು ಸಂವಾದ ನಡೆಸಿದಾಗ ಸಮಾಜದ ಸೇವೆ ಸಲ್ಲಿಸಲು ಅವರು ಯೋಗ್ಯರೇ ಎಂಬುದನ್ನು ಪರಿಶೀಲಿಸಬಹುದು ಎಂದು ಅವರು ಹೇಳಿದರು.

ಸ್ವಾತಂತ್ರ್ಯೋತ್ಸವನ್ನು ಉಲ್ಲೇಖಿಸಿ, ಸ್ವಾತಂತ್ರ್ಯವು ರಾಜಕೀಯ ಚಳವಳಿ ಅಷ್ಟೇ ಅಲ್ಲ, ನೈತಿಕ ಮತ್ತು ಕಾನೂನಾತ್ಮಕ ಹೋರಾಟವೂ ಆಗಿತ್ತು. ಅಸಂಖ್ಯಾತ ವಕೀಲರು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂಬುದನ್ನು ದೇಶದ ಇತಿಹಾಸವು ತಿಳಿಸಿಕೊಡುತ್ತದೆ ಎಂದು ಹೇಳಿದರು.

ರವೀಂದ್ರನಾಥ ಟ್ಯಾಗೋರ್‌, ಮಹಾತ್ಮ ಗಾಂಧಿ, ಬಿ ಆರ್‌ ಅಂಬೇಡ್ಕರ್‌, ಮೌಲಾನಾ ಅಬುಲ್ ಕಲಾಮ್ ಆಜಾದ್‌ ಮತ್ತಿತರ ಸ್ವಾತಂತ್ರ್ಯ ಹೋರಾಟಗಾರರನ್ನು ಅವರು ಸ್ಮರಿಸಿದರು. ದುರ್ಬಲರ ಸ್ವಾತಂತ್ರ್ಯವನ್ನು ವಿಸ್ತರಿಸುವ ಮತ್ತು ಅವರ ಹಕ್ಕುಗಳನ್ನು ರಕ್ಷಿಸುವ ಮೂಲಕ ನಾವು ಕಾನೂನನ್ನು ವ್ಯಾಖ್ಯಾನಿಸಿ, ಬಲಪಡಿಸಬೇಕಾಗಿದೆ. ಆಗ ಮಾತ್ರ ಟ್ಯಾಗೋರ್‌ ಅವರ ಪ್ರಾರ್ಥನೆ, ಮಹಾತ್ಮ ಗಾಂಧಿ ಅವರ ಸ್ವರಾಜ್ಯ, ಅಂಬೇಡ್ಕರ್‌ ಅವರ ಪ್ರಜಾಪ್ರಭುತ್ವ ಚಿಂತನೆ ಫಲಿಸುತ್ತದೆ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...