ಪಶ್ಚಿಮ ಬಂಗಾಳ ಹೆಸರು ಬದಲಿಸಲು ಕೇಂದ್ರಕ್ಕೆ ಸಿಎಂ ಮಮತಾ ಬ್ಯಾನರ್ಜಿ ಒತ್ತಾಯ

Date:

ರಾಜ್ಯದ ಹೆಸರು ಪಶ್ಚಿಮ ಬಂಗಾಳವನ್ನು ‘ಬಾಂಗ್ಲಾ’ ಎಂದು ಬದಲಿಸಬೇಕೆಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತಮ್ಮ ಹೆಸರನ್ನು ಬದಲಾಯಿಸುವ ಸಾಧ್ಯವಾದ ರಾಜ್ಯಗಳ ವಿಭಾಗದಿಂದ ಪಶ್ಚಿಮ ಬಂಗಾಳವನ್ನು ಮಾತ್ರ ಏಕೆ ಹೊರಗಿಟ್ಟಿದೆ ಎಂದು ಪ್ರಶ್ನಿಸಿದರು.

ಗಾಜಿಯಾಬಾದ್ ಪುರಸಭೆ ತನ್ನ ಹೆಸರನ್ನು ಬದಲಿಸಿದ ನಿರ್ಧರಿಸಿದ ಕೆಲವು ದಿನಗಳ ನಂತರ ಈ ವಿಷಯ ಚರ್ಚೆಗೆ ಬಂದಿದೆ. ಬಿಜೆಪಿ ಸರ್ಕಾರದಲ್ಲಿ ಭಾರತದ ಹಲವು ನಗರಗಳು,ಸ್ಥಳಗಳು, ರೈಲು ನಿಲ್ದಾಣಗಳ ಹೆಸರನ್ನು ಮರು ನಾಮಕರಣ ಮಾಡಲಾಗಿದೆ. 2016ರಲ್ಲಿ ಗುರುಗಾವ್ ಗುರುಗ್ರಾಮವಾಗಿದೆ, 2018ರಲ್ಲಿ ಅಲಹಾಬಾದ್ ಪ್ರಯಾಗ್‌ರಾಜ್‌ ಆಗಿದೆ. ನ್ಯೂ ರಾಯ್‌ಪುರ ಅಟಲ್‌ ನಗರ ಆಗಿದೆ ಹಾಗೂ ಫೈಜಾಬಾದ್ ಅಯೋಧ್ಯವಾಗಿರುವ ಇತರ ನಗರಗಳು.

ಟಿಎಂಸಿ ಸರ್ಕಾರ 2011ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಹೆಸರನ್ನು ಬದಲಾಯಿಸಲು ಕೇಂದ್ರಕ್ಕೆ ಮನವಿ ಮಾಡಿತು. ಮೊದಲು ಪಶ್ಚಿಮ ಬಂಗಾ ಹಾಗೂ ಪಶ್ಚಿಮ ಬಂಗೋ ಎಂಬ ಹೆಸರನ್ನು ಸಲಹೆ ನೀಡಲಾಯಿತು. ಐದು ವರ್ಷಗಳ ನಂತರ ಮಮತಾ ಬ್ಯಾನರ್ಜಿ ಸರ್ಕಾರ ಬಂಗೋ ಅಥವಾ ಬಾಂಗ್ಲಾ ಎಂಬ ಹೆಸರನ್ನು ಅನುಮೋದಿಸಿತು. 2024ರ ಲೋಕಸಭಾ ಚುನಾವಣೆಗಳು ಕೆಲವೇ ತಿಂಗಳುಗಳು ಮುಂದಿರುವಾಗ ಕೇಂದ್ರಕ್ಕೆ ಮತ್ತೊಮ್ಮೆ ಹೆಸರು ಮರು ನಾಮಕರಣಕ್ಕೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನ್ನಪೂರ್ಣಿ ‘ನಿಷೇಧ’- ಧರ್ಮಗಳ ನಡುವೆ ಬೆಂಕಿ ಇಟ್ಟು ಬೇಳೆ ಬೇಯಿಸುವ ಕೃತ್ಯ

ಸಾಂಸ್ಕೃತಿಕ ಹಿನ್ನೆಲೆ ಹಾಗೂ ಪ್ರದೇಶಗಳ ಭಾಷಾ ಪ್ರಸ್ತುತತೆಯ ಮೇಲೆ ಬಾಂಬೆಯು ಮುಂಬೈ ಎಂದು ಹಾಗೂ ಒರಿಸ್ಸಾವು ಒಡಿಶಾ ಆಗಿ ಬದಲಾಗಿರುವ ಬಗ್ಗೆ ತಮ್ಮ ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

“ ನಾವು ಈಗಾಗಲೇ ವಿಧಾನಸಭೆಯಲ್ಲಿ ಮಸೂದೆ ಅಂಗೀಕರಿಸಿದ್ದೇವೆ.ಬಹಳ ಸಮಯದಿಂದಲೂ ಕೇಂದ್ರವು ನಮ್ಮ ರಾಜ್ಯವನ್ನು ಬಾಂಗ್ಲಾ ಎಂದು ಬದಲಾಯಿಸಿಲ್ಲ. ವರ್ಣ ಮಾಲೆಯ ಪ್ರಕಾರ ಕೂಡ ‘ಬಾಂಗ್ಲಾ’ ಹೆಸರು ಮುಂಚೂಣಿಯ ಆದ್ಯತೆಯಾಗಿದೆ. ಪಶ್ಚಿಮ ಬಂಗಾಳವು ಆದ್ಯತೆಯಲ್ಲಿ ಕೊನೆಯಾಗಿರುತ್ತದೆ” ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

“ ನಮ್ಮ ಹೆಸರು ‘ಬಾಂಗ್ಲಾ’ ಎಂದು ಬದಲಾದರೆ ನಮ್ಮ ಮಕ್ಕಳು ಆದ್ಯತೆಯ ಮೇರೆಗೆ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು ಹಾಗೂ ವಿದೇಶಗಳಲ್ಲಿ ವ್ಯಾಸಂಗ ಮಾಡಲು ತೆರಳಬಹುದು. ಪ್ರತಿ ಸಭೆಯಲ್ಲಿಯೂ ನಾವು ಕೊನೆಯವರೆಗೂ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ. ಹೆಸರು ಬದಲಾದರೆ ಮೊದಲ ಪ್ರಾತಿನಿಧ್ಯ ಸಿಗುತ್ತದೆ” ಎಂದು ಹೇಳಿದರು.

ರಾಜ್ಯದ ಹೆಸರಿನಲ್ಲಿ “ಪಶ್ಚಿಮ” ಎಂಬ ಪದವನ್ನು ಜೋಡಿಸುವ ಅಗತ್ಯವಿಲ್ಲ ಎಂದು ಪಾಕಿಸ್ತಾನವನ್ನು ಉದಾಹರಣೆಯಾಗಿ ನೀಡಿದ ಮಮತಾ, ಪಾಕಿಸ್ತಾನದಲ್ಲೂ ಪಂಜಾಬ್ ಪ್ರಾಂತ್ಯವಿದೆ. ಭಾರತದಲ್ಲೂ ಅದೇ ಹೆಸರಿನ ರಾಜ್ಯವಿದೆ. ಆದರೆ ನಮ್ಮ ದೇಶದ ಹೆಸರನ್ನು ಇಲ್ಲಿಯವರೆಗೆ ಬದಲಾಯಿಸಲಾಗಿಲ್ಲ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...