ಹಿಮಾಚಲ ಪ್ರದೇಶಕ್ಕೆ ನೆರವಿನ ಹಸ್ತ ಚಾಚಿದ ಸಿಎಂ ಸಿದ್ದರಾಮಯ್ಯ

Date:

ಮುಂಗಾರು ಮಳೆ​ ಅಬ್ಬರ ಹಿಮಾಚಲ ಪ್ರದೇಶದಲ್ಲಿ ಇನ್ನೂ ನಿಂತಿಲ್ಲ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ, ಮೇಘಸ್ಫೋಟಗಳಿಂದ ಭೂ ಕುಸಿತ, ಪ್ರವಾಹ ಉಂಟಾಗಿದ್ದು, ನದಿಗಳು ಅಪಾಯ ಮಟ್ಟ ಮೀರಿ ಹರಿಯುವ ಮೂಲಕ ಜನ ಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ.

ಮಳೆ ಮತ್ತು ಪ್ರವಾಹದಿಂದ ನಲುಗಿರುವ ಹಿಮಾಚಲ ಪ್ರದೇಶ ರಾಜ್ಯದ ಪ್ರಕೃತಿ ವಿಕೋಪ ನಿಧಿಗೆ ಕರ್ನಾಟಕ ಸರ್ಕಾರ ₹5 ಕೋಟಿ ನೀಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಮಾಚಲ ಮುಖ್ಯಮಂತ್ರಿ ಸುಖವಿಂದ‌ರ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಅಮೂಲ್ಯ ಜೀವಗಳು ಬಲಿಯಾಗಿವೆ. ಅಪಾರ ಆಸ್ತಿ ಹಾನಿ ಸಂಭವಿಸಿದೆ. ಈ ಸಂಕಷ್ಟದ ಸಮಯದಲ್ಲಿ ಕರ್ನಾಟಕದ ಜನರು ನಿಮ್ಮೊಂದಿಗೆ (ಹಿಮಾಚಲದ ಜನರೊಂದಿಗೆ) ನಿಲ್ಲುತ್ತಾರೆ. ಬೆಂಬಲದ ಸಂಕೇತವಾಗಿ, ನಮ್ಮ ಸರ್ಕಾರ ವಿಪತ್ತು ಪರಿಹಾರ ಮತ್ತು ಪುನರ್ವಸತಿಗಾಗಿ ₹5 ಕೋಟಿ ನೆರವು ನೀಡಿದೆ ಎಂದು ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿಮಾಚಲ ಪ್ರದೇಶಕ್ಕೆ ಜೂನ್​ 20ರಿಂದ ಪ್ರವೇಶಿಸಿದ ಮಾನ್ಸೂನ್​ ಮಳೆಗೆ ಇಲ್ಲಿಯವರೆಗೆ ಅಂದರೆ, ಸೆಪ್ಟೆಂಬರ್​ 1ರ ವರೆಗೆ ಉಂಟಾದ ಹಾನಿ ₹3158.04. ಕೋಟಿಯಾಗಿದೆ.

ಹಿಮಾಚಲದಲ್ಲಿ ಮಳೆ ಈ ಬಾರಿ ದೊಡ್ಡ ಪ್ರಮಾದ ಉಂಟುಮಾಡಿದ್ದು, ಭೂ ಕುಸಿತ, ಪ್ರವಾಹದಿಂದ ಜೂನ್ 20ರಿಂದ ಸೆಪ್ಟೆಂಬರ್​ 1ರ ವರೆಗೆ 362 ಮಂದಿ ಸಾವನ್ನಪ್ಪಿದ್ದರೆ, 41 ಮಂದಿ ಕಣ್ಮರೆಯಾಗಿದ್ದು, 385 ಮಂದಿ ಗಾಯಗೊಂಡಿದ್ದಾರೆ. ಮೇಘಸ್ಫೋಟ ಮತ್ತು ಪ್ರವಾಹದಿಂದ 4,196 ಮನೆಗಳಿಗೆ ಹಾನಿಯಾಗಿದೆ. 861 ಕಚ್ಚಾ ಮತ್ತು ಪಕ್ಕಾ ಮನೆಗಳು ಹಾನಿಗೊಂಡಿದ್ದು, 3,335 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಇದರ ಹೊರತಾಗಿ 3,813 ಕೊಟ್ಟಿಗೆಗಳು ಹಾನಿಗೊಂಡಿದ್ದು, 471 ಅಂಗಡಿ ಮತ್ತು ಫ್ಯಾಕ್ಟರಿಗಳು ಹಾಳಾಗಿವೆ.

ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ, ಭೂ ಕುಸಿತದಿಂದಾಗಿ ಲೋಕೋಪಯೋಗಿ ಇಲಾಖೆ ₹1776.12 ಕೋಟಿ ಹಾನಿ ಅನುಭವಿಸಿದೆ. ಇಲ್ಲಿಯವರೆಗೆ ರಾಜ್ಯದ ₹1,281 ರಸ್ತೆಗಳು ಬಂದ್​ ಆಗಿದ್ದು, ಇದರಲ್ಲಿ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳಿವೆ. ಕುಡಿಯುವ ನೀರಿನ ಯೋಜನೆ ಹಾನಿಗೊಂಡ ಪರಿಣಾಮ ಜಲ ಶಕ್ತಿ ಇಲಾಖೆ ಕೂಡ ₹1101.11 ಕೋಟಿ ಮಷ್ಟ ಅನುಭವಿಸಿದೆ. ಇಲ್ಲಿಯವರೆಗೆ 790 ಕುಡಿಯುವ ನೀರಿನ ಯೋಜನೆಗೆ ಅಡ್ಡಿಯಾಗಿದೆ. ಇದರ ಹೊರತಾಗಿ ₹11.45 ಕೋಟಿ ಬೆಳೆ ನಷ್ಟವಾಗಿದ್ದು, ತೋಟಗಾರಿಕೆ ₹27.43 ಕೋಟಿ ನಷ್ಟ ಕಂಡಿದೆ. ವಿದ್ಯುತ್​ ಮಂಡಳಿ ₹139.46 ಕೋಟಿ ನಷ್ಟ ಅನುಭವಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...