ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಪ್ರಧಾನಿಗೆ ಎಂ ಕೆ ಸ್ಟಾಲಿನ್‌ ಪತ್ರ

Date:

ಕಾವೇರಿ ಜಲಾನಯನ ಪ್ರದೇಶದ ಕುರುವೈ ಬೆಳೆ ರೈತರು ಮಳೆ ಕೊರತೆಯಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಕಾರಣ ತಾವು ತಮಿಳುನಾಡಿಗೆ ನೀಡಬೇಕಾದ ಕಾವೇರಿ ನೀರನ್ನು ಬಿಡುಗಡೆ ಮಾಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಲು ತಕ್ಷಣ ಮಧ್ಯಪ್ರವೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಪತ್ರ ಬರೆದಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ತಮಿಳುನಾಡಿಗೆ ನಿಗದಿಪಡಿಸಿದ ನೀರಿನ ಪಾಲನ್ನು ಕರ್ನಾಟಕ ಬಿಡುತ್ತಿಲ್ಲ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನಗಳನ್ನು ಸಹ ಅನುಸರಿಸುತ್ತಿಲ್ಲ ಎಂದು ಸ್ಟಾಲಿನ್‌ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ  

ಪ್ರಸಕ್ತ 2023-2024 ನೀರಿನ ವರ್ಷದಲ್ಲಿ, ಕರ್ನಾಟಕವು ಜೂನ್ 1 ರಿಂದ ಜುಲೈ 31 ರವರೆಗೆ ಬಿಳಿಗೊಂಡ್ಲು ಪ್ರದೇಶಕ್ಕೆ 40.4 ಟಿಎಂಸಿಗೆ ಬದಲಾಗಿ 11.6 ಟಿಎಂಸಿ ನೀರನ್ನು ಮಾತ್ರ ಬಿಡುಗಡೆ ಮಾಡಿದೆ. ಬಾಕಿಯುಳಿದ 28.8 ಟಿಎಂಸಿಯಷ್ಟು ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಿಲ್ಲ. ಕರ್ನಾಟಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನಾಲ್ಕು ಪ್ರಮುಖ ಜಲಾಶಯಗಳ ಒಟ್ಟು ಸಾಮರ್ಥ್ಯದ 114.6 ಟಿಎಂಸಿಯಲ್ಲಿ ಪ್ರಸ್ತುತ 91 ಟಿಎಂಸಿ ನೀರು ಸಂಗ್ರಹವಿದೆ ಎಂದು ಎಂ ಕೆ ಸ್ಟಾಲಿನ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಣಿಪುರ | ಮುಂದುವರೆದ ಹಿಂಸಾಚಾರ; ಪೊಲೀಸ್‌ ಶಸ್ತ್ರಾಗಾರದಿಂದ ಶಸ್ತ್ರಗಳು ಲೂಟಿ, ಸೇನಾಧಿಕಾರಿ ಸಾವು

ಭಾರತದ ಇತರ ಭಾಗಗಳಿಗೆ ಹೋಲಿಸಿದರೆ, ತಮಿಳುನಾಡಿನ ಕಾವೇರಿ ನದಿ ಮುಖಜ ಭೂಮಿಯಲ್ಲಿ ಈ ಬಾರಿ ಮುಂಗಾರು ಮಳೆ ಕಡಿಮೆ ಬಿದ್ದಿದೆ. ಆದ್ದರಿಂದ, ಕುರುವೈ ಕೃಷಿ ಮತ್ತು ಸಾಂಬಾ ಭತ್ತದ ಬೆಳೆಗಳ ಬಿತ್ತನೆಯು ಮೆಟ್ಟೂರು ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವುದರ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ. ಇದು ಕರ್ನಾಟಕದಿಂದ ಪಡೆಯುವ ಕಾವೇರಿ ನೀರಿನ ಮೇಲೆ ಮಾತ್ರ ಅವಲಂಬಿತವಾಗಿರುತ್ತದೆ ಎಂದು ಸ್ಟಾಲಿನ್‌ ಪತ್ರದಲ್ಲಿ ವಿವರಿಸಿದ್ದಾರೆ.

ಕಾವೇರಿ ನದಿ ಮುಖಜಭೂಮಿಯ ಜೀವನಾಡಿಯಾಗಿರುವ ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ಆಗಸ್ಟ್ 2 ಕ್ಕೆ ಕೇವಲ 26.6 ಟಿಎಂಸಿ ನೀರು ಮಾತ್ರ ಸಂಗ್ರಹವಿದೆ. ಕುಡಿಯುವ ನೀರು ಮತ್ತು ಇತರ ಅಗತ್ಯಗಳಿಗೆ ಒದಗಿಸಿದ ನಂತರ ಜಲಾಶಯದಲ್ಲಿ ಕುರುವೈ ಬೆಳೆಗೆ ಲಭ್ಯವಿರುವ ನೀರು ಕೇವಲ 15 ದಿನಗಳವರೆಗೆ ಮಾತ್ರ ಸಾಲುತ್ತದೆ. ಪೂರ್ಣ ಇಳುವರಿಯನ್ನು ಪಡೆಯಬೇಕಾದರೆ ಈ ಪ್ರದೇಶದಲ್ಲಿ 45 ದಿನಗಳವರೆಗೆ ನೀರು ಬೇಕಾಗುತ್ತದೆ”ಎಂದು ಪತ್ರದಲ್ಲಿ ಸ್ಟಾಲಿನ್ ಸೂಚಿಸಿದ್ದಾರೆ.

ಈ ವಿಚಾರವನ್ನು ಮುನ್ನೆಚ್ಚರಿಕಾ ಕ್ರಮವಾಗಿ ತಮಿಳುನಾಡು ಸರ್ಕಾರವು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಗಮನಕ್ಕೂ ತಂದಿದ್ದೇವೆ. ಹೀಗಾಗಿ, ಕೂಡಲೇ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಹಾಗೂ ಸುಪ್ರೀಂ ಕೋರ್ಟ್, ಕಾವೇರಿ ನದಿ ನೀರು ಪ್ರಾಧಿಕಾರದ ಆದೇಶಕ್ಕೆ ಬದ್ಧರಾಗಿರುವಂತೆ ನಿರ್ದೇಶಿಸುವಂತೆ ಸ್ಟಾಲಿನ್ ಹೇಳಿದ್ದಾರೆ.

ಇದೇ ವೇಳೆ ಕರ್ನಾಟಕ ರಾಜ್ಯದಲ್ಲಿ ಕಬಿನಿ ಜಲಾಶಯ ಪೂರ್ಣ ತುಂಬಿದ್ದರೂ ನೀರು ಬಿಟ್ಟಿಲ್ಲ. ಇನ್ನು ಮಿಕ್ಕ ಜಲಾಶಯಗಳಲ್ಲಿ ಶೇ. 80ರಷ್ಟು ನೀರಿದೆ, ನಿರಂತರ ಒಳ ಹರಿವು ಇದೆ. ಆದರೂ ನೀರು ಬಿಡುತ್ತಿಲ್ಲ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೆ ಕೇಂದ್ರ ಸರ್ಕಾರ ಬಾಸ್ಮತಿ ಅಲ್ಲದ ಅಕ್ಕಿಯ ರಫ್ತನ್ನು ನಿಷೇಧಿಸಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಆದ ಕಾರಣ ಕಾವೇರಿ ಜಲಾನಯನ ಪ್ರದೇಶದಲ್ಲಿ ಕುರುವೈ ಭತ್ತದ ಬೆಳೆ ಮತ್ತು ನಮ್ಮ ರೈತರ ಜೀವನಾಡಿಯನ್ನು ರಕ್ಷಿಸಲು ನಿಮ್ಮ ತುರ್ತು ಮಧ್ಯಸ್ಥಿಕೆ ಅತ್ಯಂತ ಮುಖ್ಯವಾಗಿದೆ ಎಂದು ಪತ್ರದಲ್ಲಿ ಸ್ಟಾಲಿನ್‌ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...