ಒಡಿಶಾ ರೈಲು ದುರಂತ : ಘಟನಾ ಸ್ಥಳದ ಪಕ್ಕದಲ್ಲಿರುವುದು ಮಸೀದಿಯಲ್ಲ, ಮಂದಿರ

Date:

ಒಡಿಶಾದ ಬಾಲಾಸೋರ್‌ ಬಳಿ ನಡೆದ ರೈಲು ದುರಂತದಲ್ಲಿ 288 ಮಂದಿ ಸಾವನ್ನಪ್ಪಿದ್ದು, ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಲು ರೈಲ್ವೆ ಇಲಾಖೆ ತನಿಖೆ ನಡೆಸುತ್ತಿದೆ. ʼಎಲೆಕ್ಟ್ರಾನಿಕ್‌ ಇಂಟರ್‌ಲಾಕಿಂಗ್‌ʼ ಮತ್ತು ʼಪಾಯಿಂಟ್‌ ಮಷಿನ್‌ʼಗಳಲ್ಲಿನ ಬದಲಾವಣೆಯಿಂದಾಗಿ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ. ಆದರೆ, ಕೆಲವು ಬಲಪಂಥೀಯರು ಈ ರೈಲು ದುರಂತಕ್ಕೆ ಕೋಮುವಾದದ ಬಣ್ಣ ಬಳಿಯುವ ವಿಫಲ ಪ್ರಯತ್ನವನ್ನು ಕೂಡ ನಡೆಸಿದ್ದಾರೆ.

ಅಪಘಾತ ಸಂಭವಿಸಿರುವ ಸ್ಥಳದ ಫೋಟೋಗಳು ಶುಕ್ರವಾರ ರಾತ್ರಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡತೊಡಗಿದ್ದವು. ಈ ಪೈಕಿ ಅಪಘಾತದ ಸ್ಥಳದಿಂದ ಕೂಗಳತೆ ದೂರದಲ್ಲಿರುವ ಕಟ್ಟಡವೊಂದರ ಚಿತ್ರ ಭಾರೀ ಚರ್ಚೆಗೆ ಕಾರಣವಾಗಿತ್ತು.

ಬಹುಚರ್ಚಿತ ಕಟ್ಟಡದ ಫೋಟೋ ಹಂಚಿಕೊಂಡು ವಿವಾದ್ಮಾತಕ ಟ್ವೀಟ್‌ ಮಾಡಿದ್ದ ಬಿಜೆಪಿ ಬೆಂಬಲಿಗ ವೀರೇಂದ್ರ ತಿವಾರಿ, “ಅಪಘಾತ ಸಂಭವಿಸಿರುವುದು ಶುಕ್ರವಾರ, ರೈಲ್ವೆ ಹಳಿಯ ಪಕ್ಕದಲ್ಲೇ ಮಸೀದಿ ಇದೆ. ʼಜಿಹಾದ್‌ʼ ಮಾಡಲಿಕ್ಕಾಗಿಯೇ ಹೆದ್ದಾರಿಗಳು ಮತ್ತು ರೈಲ್ವೆ ಹಳಿಗಳ ಪಕ್ಕದಲ್ಲಿ ಮುಸಲ್ಮಾನರ ಕಾಲೋನಿಗಳು ಹುಟ್ಟಿಕೊಳ್ಳುತ್ತಿವೆ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Virendra tiwari

ಹೀಗೆ ಹಲವರು ಬಿಜೆಪಿ ಬೆಂಬಲಿಗರು ಮತ್ತು ಬಲಪಂಥೀಯರು ಘಟನೆಗೆ ಮುಸ್ಲಿಂ ಸಮುದಾಯವೇ ನೇರ ಹೊಣೆ. ಪಕ್ಕದ ಮಸೀದಿಯಲ್ಲೇ ಪ್ರಯೋಗ ನಡೆದಿದೆ ಎಂದೆಲ್ಲ ಆಧಾರ ರಹಿತವಾಗಿ ಫುಂಕಾನು ಫುಂಕ ಆರೋಪಗಳನ್ನು ಮಾಡಿದ್ದರು.

dev 1

ಆದರೆ, ಸುಳ್ಳು ಸುದ್ದಿಗಳ ಹಿಂದೆ ಬಿದ್ದು ಸತ್ಯಾಸತ್ಯತೆಯನ್ನು ಬಹಿರಂಗ ಪಡಿಸುವ ʼಆಲ್ಟ್‌ ನ್ಯೂಸ್‌ʼ ಸಂಸ್ಥೆ. ಬಲಪಂಥೀಯರು ಹಂಚಿಕೊಳ್ಳುತ್ತಿರುವ ಫೋಟೋದ ಹಿಂದೆ ಬಿದ್ದು ಅಸಲಿ ಅಂಶಗಳನ್ನು ಜನರ ಮುಂದಿಟ್ಟಿದೆ. ಅಪಘಾತವಾದ ಸ್ಥಳದ ಹತ್ತಿರದಲ್ಲಿರುವುದು ಮಸೀದಿಯಲ್ಲ, ಬದಲಿಗೆ ನಿರ್ಮಾಣ ಹಂತದಲ್ಲಿರುವ ಇಸ್ಕಾನ್‌ ಮಂದಿರ ಎಂಬುದು ʼಆಲ್ಟ್‌ ನ್ಯೂಸ್‌ʼನ ತನಿಖಾ ವರದಿಯಿಂದ ಸ್ಪಷ್ಟವಾಗಿದೆ. ಮಂದಿರದ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡಿರುವ ಸಂಸ್ಥೆಯ ಮುಖ್ಯಸ್ಥ ಮೊಹಮ್ಮದ್‌ ಜುಬೇರ್‌ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರಿಗೆ ತಿರುಗೇಟು ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...