ಛತ್ತೀಸ್‌ಗಢದಲ್ಲಿ ಕೋಮು ಹಿಂಸಾಚಾರ: ಮುಸ್ಲಿಮರ ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Date:

ಹಳೆಯ ವಿವಾದದ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದ್ದು, ಮುಸ್ಲಿಮರು ಮನೆಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ 10 ಮನೆಗಳು ಮತ್ತು ನಾಲ್ಕು ವಾಹನಗಳು ಸುಟ್ಟುಹೋಗಿವೆ. ಪೊಲೀಸರು ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಗರಿಯಾಬಂದ್‌ ಜಿಲ್ಲೆಯ ದುತ್ಕಾಯ ಗ್ರಾಮದಲ್ಲಿ ಭಾನುವಾರ ರಾತ್ರಿ ಹಿಂಸಾಚಾರ ನಡೆದಿದೆ. ಗ್ರಾಮದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌ ಮಾಡಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಪ್ರಮುಖ ಆರೋಪಿ ಆರಿಫ್‌ನನ್ನು ಶಿವ ದೇವಾಲಯಕ್ಕೆ ಹಾನಿ ಮಾಡಿದ ಆರೋಪ ಮತ್ತು ಗ್ರಾಮಸ್ಥರ ದೂರಿನ ಆಧಾರದ ಮೇಲೆ ಕಳೆದ ವರ್ಷ ಬಂಧಿಸಲಾಗಿತ್ತು. ಆತ ಇತ್ತೀಚೆಗೆ ಜಾಮೀನು ಪಡೆದು, ಜೈಲಿನಿಂದ ಹೊರಬಂದಿದ್ದ. ತನ್ನ ಬಂಧನಕ್ಕೆ ಕಾರಣರಾದವರ ವಿರುದ್ಧ ಆರಿಫ್‌ ಮತ್ತು ಆತನ ಸಹಚರರು ಆರಂಭದಲ್ಲಿ ಗಲಾಟೆ ನಡೆಸಿದ್ದಾರೆ. ಬಳಿಕ, ಪರಿಸ್ಥಿತಿ ಉದ್ವಿಘ್ನನಗೊಂಡಿದೆ. ಹಿಂದು ಸಮುದಾಯದ ಕೆಲವರು ಮುಸ್ಲಿಮರ ಮೇಲೆ ದಾಳಿ ನಡೆಸಿದ್ದಾರೆ. ಗಲಾಟೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದವರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ” ಎಂದು ಪೊಲೀಸರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರಿಫ್‌ ಸುಮಾರು ಒಂದೂವರೆ ವರ್ಷಗಳ ಹಿಂದೆ ಗ್ರಾಮದ ಶಿವ ದೇವಾಲಯವನ್ನು ಧ್ವಂಸಗೊಳಿಸಿದ್ದ. ಆತ ಈಗ ಜಾಮೀನಿನ ಮೇಲೆ ಹೊರಗಿದ್ದಾನೆ. ಹಿಂದಿನ ವೈಷಮ್ಯದಿಂದ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದಾನೆ” ಎಂದು ಗ್ರಾಮದ ನಿವಾಸಿ ಜಿತೇಂದ್ರ ಕುಮಾರ್ ಯಾದವ್ ಹೇಳಿರುವುದಾಗಿ ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಗಂಭೀರತೆ ಕಳೆದುಕೊಂಡು ಮೀಮ್ಸ್ ಮಟ್ಟಕ್ಕಿಳಿಯಿತೇ ಕೇಂದ್ರ ಬಜೆಟ್‌!

ಹಿಂಸಾಚಾರದಲ್ಲಿ ಮನೆ ಕಳೆದುಕೊಂಡ ಜರಿನಾಶಹನಾಜ್ ಮತ್ತು ದೌಲತ್ ಬಿ ಅವರು ಘಟನೆ ಬಗ್ಗೆ ವಿವರಿಸಿದ್ದು, “ಗ್ರಾಮದಲ್ಲಿ ನಡೆದ ಆರಂಭಿಕ ದಾಳಿಯ ನಂತರ, ಗುಂಪೊಂದು ವೇಗವಾಗಿ ಸೇರಲು ಪ್ರಾರಂಭಿಸಿತು. ಗುಂಪಿನಲ್ಲಿದ್ದವರು ನಮ್ಮ ಮನೆಗಳಿಗೆ ಹೋಗುವ ಎರಡೂ ರಸ್ತೆಗಳು ನಿರ್ಬಂಧಿಸಿದರು. ನಮ್ಮ ಮನೆಗಳಿಗೆ ಬೆಂಕಿ ಹಚ್ಚಿದರು. ನಾವು 112ಗೆ ಕರೆ ಮಾಡಿ ಪೊಲೀಸರನ್ನು ಸಂಪರ್ಕಿಸಿದೆವು. ಪೊಲೀಸರು ಬರುವಷ್ಟರಲ್ಲಿ ನಮ್ಮ ಮನೆಗಳು ಸುಟ್ಟುಹೋಗಿದ್ದವು. ಪೊಲೀಸರ ಸಹಾಯದಿಂದ ನಾವು ನಮ್ಮ ಜೀವಗಳನ್ನು ಉಳಿಸಿಕೊಂಡು ರಾಯ್‌ಪುರಕ್ಕೆ ತಲುಪಿದೆವು” ಎಂದು ಹೇಳಿದ್ದಾರೆ.

ಗುಂಪಿನಲ್ಲಿದ್ದವರು ಮಹಿಳೆಯರು, ಮಕ್ಕಳು ಹಾಗೂ ವೃದ್ಧರನ್ನೂ ಥಳಿಸಿದ್ದಾರೆ. ಮನೆಗಳಿಗೆ ಬೆಂಕಿ ಹಚ್ಚಿದಾಗ, ಮಹಿಳೆಯರು ಮತ್ತು ಮಕ್ಕಳು ಒಳಗೆ ಇದ್ದರು. ಪೊಲೀಸರು ಅವರೆಲ್ಲರನ್ನೂ ರಕ್ಷಿಸಿ, ಹೊರ ತಂದರು” ಎಂದು ಹೇಳಿದ್ದಾರೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಗರಿಯಾಬಂದ್‌ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ವೇದ್‌ಬ್ರತ್ ಸಿರ್ಮೌರ್, “ಆರೋಪಿ ಆರಿಫ್ ಖಾನ್, ಇಮ್ರಾನ್ ಮತ್ತು ಸಲೀಂ ಅವರನ್ನು ಬಂಧಿಸಲಾಗಿದೆ. ಬೆಂಕಿ ಹಚ್ಚಿದ ಗುಂಪಿನಲ್ಲಿದ್ದವರನ್ನು ಗುರುತಿಸಲು ವೀಡಿಯೊ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಹಿಂಸಾಚಾರದಲ್ಲಿ ಭಾಗಿಯಾದ ಎಲ್ಲರನ್ನೂ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...