ಇವಿಎಂಗಳ ಬಗ್ಗೆ ನಮ್ಮ ಕಳವಳ ತಿಳಿಸಲು ಅವಕಾಶ ನೀಡಿ: ಕೇಂದ್ರ ಚುನಾವಣಾ ಆಯುಕ್ತರಿಗೆ ಜೈರಾಮ್ ರಮೇಶ್ ಪತ್ರ

Date:

ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ‘ಇಂಡಿಯಾ’ ಒಕ್ಕೂಟದ ನಾಯಕರ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ ನಂತರ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‌ ಕುಮಾರ್ ಅವರಿಗೆ ಪತ್ರ ಬರೆದಿರುವ ಜೈರಾಮ್ ರಮೇಶ್, ಇವಿಎಂಗಳ ಮೇಲೆ ಇಂಡಿಯಾ ಒಕ್ಕೂಟಕ್ಕೆ ಮೂಡಿರುವ ಕಳವಳಗಳನ್ನು ನೀವು ತಿಳಿಸಲಾಗಿಲ್ಲ. ಅಲ್ಲದೆ ನಮ್ಮ ಒಕ್ಕೂಟಕ್ಕೆ ವಿಚಾರಣೆ ನಡೆಸಲು ಅವಕಾಶವನ್ನು ನೀಡಿಲ್ಲ ಎಂದು ತಿಳಿಸಿದ್ದಾರೆ.

“ಇವಿಎಂಗಳ ಬಗ್ಗೆ ಚುನಾವಣಾ ಆಯೋಗ ಸ್ಪಷ್ಟೀಕರಣ ನೀಡಿರುವುದು ನಿರ್ದಿಷ್ಟ ವಿಷಯಕ್ಕೆ ಸಂಬಂಧಿಸಿಲ್ಲ. ಈ ಮೊದಲು ಇಂಡಿಯಾ ಒಕ್ಕೂಟ ಕೋರಿದ ಮನವಿಗಳಿಗೆ ಯಾವುದೇ ವಿಚಾರಣೆ ಅಥವಾ ಸಭೆಯನ್ನು ಒದಗಿಸಲಾಗಿಲ್ಲ. ಈ ಕಾರಣದಿಂದ ಇವಿಎಂಗಳ ಬಗ್ಗೆ ಇರುವ ನಮ್ಮ ಕಳವಳ ತಿಳಿಸಲು ಸಭೆ ಏರ್ಪಡಿಸಿ ಅವಕಾಶ ನೀಡಬೇಕೆಂದು” ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ತ ಅತಿಥಿ ಉಪನ್ಯಾಸಕರು ಇತ್ತ ಸರಕಾರ; ನಡುವೆ ನಲುಗದಿರಲಿ ವಿದ್ಯಾರ್ಥಿಗಳು

ವಿವಿಪಿಟಿ ಬಳಕೆಯ ಕುರಿತು ನಮ್ಮ ಕಳವಳಗಳನ್ನು ವ್ಯಕ್ತಪಡಿಸಲು ಸಭೆ ಏರ್ಪಡಿಸಬೇಕೆಂದು ಇಂಡಿಯಾ ಒಕ್ಕೂಟಕ್ಕೆ 2023 ಆಗಸ್ಟ್ 9 ರಿಂದ ನಾಲ್ಕು ಬಾರಿ ಮನವಿ ಮಾಡಿದ್ದೇವೆ. ಇತ್ತೀಚಿಗಷ್ಟೆ ಡಿಸೆಂಬರ್‌ 20ರಂದು ಕೂಡ ಪತ್ರ ಬರೆದಿದ್ದರೂ ಕೇಂದ್ರ ಚುನಾವಣಾ ಆಯೋಗವು ನಮ್ಮ ಒಕ್ಕೂಟಕ್ಕೆ ಸಭೆ ಏರ್ಪಡಿಸಲು ವಿಫಲವಾಗಿದೆ” ಎಂದು ತಿಳಿಸಿದ್ದಾರೆ.

ಡಿಸೆಂಬರ್‌ 19 ರಂದು ಇವಿಎಂ ತಾಂತ್ರಿಕ ವಿನ್ಯಾಸ ಹಾಗೂ ಕಾರ್ಯಾಚರಣೆಗಳ ಬಗ್ಗೆ ಹಲವು ನಿರ್ದಿಷ್ಟ  ಪ್ರಶ್ನೆಗಳೊಂದಿಗೆ ಇಂಡಿಯಾ ಒಕ್ಕೂಟ ಜ್ಞಾಪಕ ಪತ್ರ ಸಲ್ಲಿಸಲು ನಿರ್ಣಯ ಕೈಗೊಂಡು ಡಿ.20 ರಂದು ಪತ್ರ ಬರೆಯಲಾಗಿತ್ತು. ದುರಾದೃಷ್ಟವಶಾತ್, ಕೇಂದ್ರ ಚುನಾವಣಾ ಆಯೋಗ ನಮ್ಮ ಮನವಿಯನ್ನು ನಿರಾಕರಿಸುತ್ತಲೇ ಬಂದಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

“ನಮ್ಮ ಸಲಹೆ ಸರಳವಾಗಿದೆ. ವಿವಿಪ್ಯಾಟ್ ಚೀಟಿ ಮತಯಂತ್ರಕ್ಕೆ ಬೀಳುವ ಮೊದಲು ಅದನ್ನು ಮತದಾರನಿಗೆ ನೀಡಿ ಅದನ್ನು ಆತ ಪರಿಶೀಲಿಸಿ ಪ್ರತ್ಯೇಕ ಇನ್ನೊಂದು ಮತಡಬ್ಬಿಗೆ ಹಾಕುವುದಕ್ಕೆ ವ್ಯವಸ್ಥೆ ಮಾಡಬೇಕು. ಮತಡಬ್ಬಿಗೆ ಹಾಕಿದ ಚೀಟಿಗಳನ್ನು ಕೂಡ ಶೇ.100 ರಷ್ಟು ಎಣಿಕೆ ಮಾಡಬೇಕು. ಈ ಕಾರಣದಿಂದ ಇಂಡಿಯಾ ಒಕ್ಕೂಟದ ಮೂರ್ನಾಲ್ಕು ಮಂದಿಗೆ ಸಭೆ ಏರ್ಪಡಿಸಲು ನಿಮ್ಮ ಆಯೋಗದ ಸಿಬ್ಬಂದಿ ಅವಕಾಶ ನೀಡಬೇಕು. ಸಂಪೂರ್ಣವಾಗಿ ಇದು ಸಮಂಜಸ ಹಾಗೂ ಕಾನೂನುಬದ್ಧವಾಗಿದೆ” ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...