ಪ್ರೊ. ಸಾಯಿಬಾಬಾ ನಿಧನಕ್ಕೆ ಸಂತಾಪ; ಮಂಜೀರಾಗೆ ಪತ್ರ ಬರೆದ ಜರ್ಮನಿ ರಾಯಭಾರಿ ಕಚೇರಿ!

Date:

ಮಾವೋವಾದಿ ಹೋರಾಟಗಾರರೊಂದಿಗೆ ಸಂಪರ್ಕ ಹೊಂದಿದ್ದಾರೆಂಬ ಅರೋಪದ ಮೇಲೆ ಜೈಲು ಸೇರಿ, ನಿರಂತರ ಸೆರೆವಾಸ ಅನುಭವಿಸಿ, ನಿರ್ದೋಷಿಯೆಂದು ಸಾಬೀತಾದ ಬಳಿಕ ಜೈಲಿನಿಂದ ಹೊರಬಂದಿದ್ದ ಪ್ರೊ. ಸಾಯಿಬಾಬಾ ಅವರು ಇತ್ತೀಚೆಗೆ ಸಾವನ್ನಪ್ಪಿದ್ದರು. ಅವರ ಸಾವಿಗೆ ದೆಹಲಿಯಲ್ಲಿರುವ ಜರ್ಮನ್ ರಾಯಭಾರಿ ಕಚೇರಿ ಸಂತಾಪ ಸೂಚಿಸಿದೆ.

ಸಾಯಿಬಾಬಾ ಅವರ ಪುತ್ರಿ ಮಂಜೀರಾ ಅವರಿಗೆ ಜರ್ಮನ್ ರಾಯಭಾರಿ ಡಾ. ಫಿಲಿಪ್ ಅಕರ್‌ಮನ್ ಅವರು ಪತ್ರ ಬರೆದಿದ್ದಾರೆ. “ನಿಮ್ಮ ತಂದೆಯ ಅಕಾಲಿಕ ಮರಣದ ಸುದ್ದಿ ಕೇಳಿ ಬಹಳ ಆಘಾತ ಮತ್ತು ದುಃಖವಾಗಿದೆ. ನಿಮ್ಮ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ಪತ್ರದಲ್ಲಿ ಹೇಳಿದ್ದಾರೆ.

“ನಿಮಗೆ ನೆನಪಿರಬಹುದು: ಕಳೆದ ಏಪ್ರಿಲ್‌ನಲ್ಲಿ ನಾನು ನಿಮ್ಮನ್ನು ಮತ್ತು ನಿಮ್ಮ ತಂದೆಯನ್ನು ನನ್ನ ಫ್ರೆಂಚ್ ಸಹೋದ್ಯೋಗಿಯೊಂದಿಗೆ ಭೇಟಿಯಾಗಿದ್ದೆ. ನಮ್ಮ ಭೇಟಿಯು ಕಡಿಮೆ ಸಮಯದ್ದೇ ಆಗಿದ್ದರೂ, ಆ ಸಂದರ್ಭವು ನನ್ನ ಮೇಲೆ ಆಳವಾದ ಪ್ರಭಾವ ಬೀರಿದೆ. ನಿಮ್ಮ ತಂದೆಯ ಜೀವನಗಾಥೆ, ಅವರ ಸುದೀರ್ಘ ಸೆರೆವಾಸ ಮತ್ತು ಅವರಲ್ಲಿ ಅಚಲವಾದ ಬದ್ಧತೆಯು ಭಾರತದಲ್ಲಿನ ನಾಗರಿಕ ಹಕ್ಕುಗಳ ಬಗ್ಗೆ ನನಲ್ಲಿ ಹೆಚ್ಚು ಗೌರವವನ್ನು ಹುಟ್ಟುಹಾಕಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 18 at 2.35.53 PM

“ನಿಮ್ಮ ದುಃಖದ ಅರಿವು ನಮಗಿದೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಹಾಗೂ ನಿಮ್ಮ ತಂದೆಯ ಅನೇಕ ಸ್ನೇಹಿತರಿಗೆ ದುಃಖವನ್ನು ಅರಗಿಸಿಕೊಳ್ಳುವ ಶಕ್ತಿ ದೊರೆಯಲೆಂದು ನಾನು ಪ್ರಾರ್ಥಿಸುತ್ತೇನೆ” ಎಂದು ಜರ್ಮನ್ ರಾಯಭಾರಿ ಹೇಳಿದ್ದಾರೆ.

ಸಾಯಿಬಾಬಾ ಅವರು ದೆಹಲಿ ವಿಶ್ವವಿದ್ಯಾಲಯದ ರಾಮ್ ಲಾಲ್ ಆನಂದ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದವರು. ಅವರಿಗೆ ಮಾವೋವಾದಿ ಹೋರಾಟಗಾರರೊಂದಿಗೆ ಸಂಪರ್ಕವಿದೆ ಎಂಬ ಆರೋಪದ ಮೇಲೆ 2014ರಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದರು. ಅವರ ಬಂಧನ ಬಳಿಕ, ಅವರನ್ನು ಅಧ್ಯಾಪಕ ಹುದ್ದೆಯಿಂದಲೂ ಅಮಾನತು ಮಾಡಲಾಗಿತ್ತು.

ಸಾಯಿಬಾಬಾ ಅವರನ್ನು ಬಂಧಿಸಿದ್ದ ಪೊಲೀಸರು, ಅವರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಅಧೀನ ನ್ಯಾಯಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆದರೆ, ಅವರು ಅಪರಾಧಿ ಎಂದು ಸಾಬೀತು ಮಾಡುವಲ್ಲಿ, ಸಾಕ್ಷಾಧಾರಗಳನ್ನು ಸಂಗ್ರಹಿಸುವಲ್ಲಿ ಪೊಲೀಸರು ವಿಫಲರಾಗಿದ್ದರು. ಇತ್ತೀಚೆಗೆ, ಅವರನ್ನು ನಿರ್ದೋಷಿ ಎಂದು ಘೋಷಿಸಿ, ಪ್ರಕರಣದಿಂದ ಖುಲಾಸೆಗಳಿಸಿ ಬಾಂಬೆ ಹೈಕೋರ್ಟ್‌ ತೀರ್ಪು ನೀಡಿತು.

ಸಾಬೀತಾಗದ ಆರೋಪದಲ್ಲಿ ನಿರಂತರವಾಗಿ 10 ವರ್ಷಗಳ ಕಾಲ ಜೈಲಿನಲ್ಲಿದ್ದ ಸಾಯಿಬಾಬಾ ಅವರು ಕಳೆದ ಮಾರ್ಚ್‌ 7ರಂದು ನಾಗ್ಲುರ ಜೈಲಿನಿಂದ ಬಿಡುಗಡೆಯಾಗಿದ್ದರು. ಆದರೆ, ಪೋಲಿಯೋ ಪೀಡಿತರಾಗಿದ್ದ ಅವರಿಗೆ ಜೈಲಿನಲ್ಲಿ ಸರಿಯಾದ ಸೌಲಭ್ಯಗಳು ದೊರೆಯದ ಕಾರಣ, ಅವರು ಪಿತ್ತಕೋಶ ಸಮಸ್ಯೆಗೆ ತುತ್ತಾಗಿದ್ದರು. ಕಳೆದ 20 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಚೇತರಿಕೆ ಕಂಡಿರಲಿಲ್ಲ. ಪರಿಣಾಮ, ಅಕ್ಟೋಬರ್ 13ರಂದು ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...