MGNREGA ಕಾಯ್ದೆ ಉಳಿಸಲು ದೇಶವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಕ್ರಿಯಾ ಸಮಿತಿ ಸಭೆಯಲ್ಲಿ ನಿರ್ಣಯ

Date:

ಒಂಭತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR), MGNREGA ಬದಲಿಗೆ ಬಂದಿರುವ ನೂತನ ಜಿ ರಾಮ್ ಜಿ ಕಾಯ್ದೆ ಹಾಗೂ ಬಾಂಗ್ಲಾದೇಶದಲ್ಲಿ ಪ್ರಸಕ್ತ ನೆಲೆಸಿರುವ ಅಶಾಂತಿ ಸೇರಿದಂತೆ ಹಲವಾರು ಮಹತ್ವದ ವಿಷಯಗಳ ಬಗ್ಗೆ ಕಾಂಗ್ರೆಸ್ ಕ್ರಿಯಾ ಸಮಿತಿ ಸಭೆಯಲ್ಲಿ ಶನಿವಾರ ಚರ್ಚಿಸಲಾಯಿತು.

ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಶಶಿ ತರೂರ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳುವ ಪಕ್ಷದ ಅತ್ಯುನ್ನತ ಗುಂಪಿನ ಸಭೆಯಲ್ಲಿ ಭಾಗವಹಿಸಿದರು.

ಸಭೆಯ ಬಳಿಕ, ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಅಧ್ಯಕ್ಷ ಖರ್ಗೆ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಕೈಬಿಟ್ಟಿರುವುದಕ್ಕೆ ಜನರು ಕೋಪಗೊಂಡಿದ್ದಾರೆ ಎಂದು ಹೇಳಿದರು ಹಾಗೂ ಇದರ ಪರಿಣಾಮಗಳನ್ನು ಸರಕಾರ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಕಸಿತ ಭಾರತ- ಉದ್ಯೋಗ ಖಾತರಿ ಮತ್ತು ಅಜೀವಿಕಾ ಮಿಶನ್ (ಗ್ರಾಮೀಣ) ಕಾಯ್ದೆಯು ಯಾರೊಂದಿಗೂ ಸಮಾಲೋಚಿಸದ ಏಕಪಕ್ಷೀಯ ನಿರ್ಧಾರವಾಗಿದೆ ಎಂದು ಖರ್ಗೆ ಆರೋಪಿಸಿದರು. ಈ ಕಾಯಿದೆಯು ರಾಜ್ಯಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆಯನ್ನು ಹೊರಿಸುತ್ತದೆ ಎಂದು ಹೇಳಿದರು. ಮನ್‌ರೇಗ ಯೋಜನೆಯನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಸುವುದು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

‘‘2026 ಜನವರಿ 5ರಿಂದ ‘ಮನ್‌ರೇಗ ಬಚಾವೊ ಆಂದೋಲನ’ವನ್ನು ಆರಂಭಿಸಲು ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ’’ ಎಂದರು.

‘‘ಮನ್‌ರೇಗದಿಂದ ಮಹಾತ್ಮಾ ಗಾಂಧಿಯ ಹೆಸರನ್ನು ತೆಗೆದು ಹಾಕುವ ಪ್ರತಿ ಪಿತೂರಿಯನ್ನು ನಾವು ಪ್ರಜಾಸತ್ತಾತ್ಮಕವಾಗಿ ವಿರೋಧಿಸುವ ಪ್ರತಿಜ್ಞೆಯನ್ನು ನಾವು ತೆಗೆದುಕೊಂಡಿದ್ದೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟು ಮನ್‌ರೇಗವನ್ನು ರಕ್ಷಿಸುವ, ಕಾರ್ಮಿಕರ ಹಕ್ಕುಗಳನ್ನು ಉಳಿಸುವ ಮತ್ತು ಪ್ರತಿ ಗ್ರಾಮದಲ್ಲಿ ನಮ್ಮ ಧ್ವನಿಗಳನ್ನು ಎತ್ತುವ ಪ್ರತಿಜ್ಞೆಯನ್ನು ನಾವು ತೆಗೆದುಕೊಂಡಿದ್ದೇವೆ. ‘ಜೈ ಸಂವಿಧಾನ’ ಮತ್ತು ‘ಜೈ ಹಿಂದ್’ ಘೋಷಣೆಗಳೊಂದಿಗೆ ನಾವು ಈ ನಿರ್ಧಾರವನ್ನು ಸಾಮೂಹಿಕವಾಗಿ ತೆಗೆದುಕೊಂಡಿದ್ದೇವೆ’’ ಎಂದರು.

ಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...