ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೆಲ್ಲ ಭಾರತದಲ್ಲಿ ನೋಟು ನಿಷೇಧ: ಖರ್ಗೆ ಆರೋಪ

Date:

ಪ್ರಧಾನಿ ನರೇಂದ್ರ ಮೋದಿ ಜಪಾನ್‌ಗೆ ಹೋದಾಗಲೆಲ್ಲಾ ಭಾರತದಲ್ಲಿ ನೋಟು ನಿಷೇಧ ಹೇರುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀ ಕರಿಸಿದ ನಂತರ ಮಾತನಾಡಿದ ಖರ್ಗೆ, “ಕಳೆದ ಬಾರಿ 2016ರಲ್ಲಿ ಪ್ರಧಾನಿ ಮೋದಿ ಜಪಾನ್‌ಗೆ ಹೋದಾಗಲೂ. 1,000 ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ್ದರು. ಈ ಬಾರಿ 2,000 ರೂ. ನೋಟುಗಳನ್ನು ನಿಷೇಧಿಸಿದ್ದಾರೆ” ಎಂದು ಹೇಳಿದರು.

“ಇಂತಹ ಕ್ರಮಗಳಿಂದ ದೇಶಕ್ಕೆ ಲಾಭವಿಲ್ಲ , ಬದಲು ನಷ್ಟವಾಗಲಿದೆ. ದೇಶದ ಜನರನ್ನು ಒಂದಲ್ಲ ಒಂದು ವಿಧದಲ್ಲಿ ತೊಂದರೆಗೊಳಪಡಿಸುವುದು ಮೋದಿ ಅವರಿಗೆ ಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರಧಾನಿಗೆ ಶಿಕ್ಷಣ ಬೇಕೆಂದು ಅದಕ್ಕೇ ಹೇಳೋದು; 2 ಸಾವಿರ ರೂ. ನೋಟ್ ಬ್ಯಾನ್‌ ಬಗ್ಗೆ ಕೇಜ್ರಿವಾಲ್ ವ್ಯಂಗ್ಯ

“ರಾಜ್ಯ ದ ಹೊಸ ಕಾಂಗ್ರೆಸ್ ಸರ್ಕಾರ ಹಿಂದಿನ ಸರ್ಕಾರದಂತಲ್ಲ. ಎಲ್ಲರನ್ನೂ ಜೊತೆಯಾಗಿ ಕರೆದುಕೊಂಡು ಮುನ್ನಡೆಯಲಿದೆ. ಬಿಜೆಪಿಯಂತೆ ನಾವು ಜನರಿಗೆ ಕೈಕೊಡುವುದಿಲ್ಲ. ಕಾಂಗ್ರೆಸ್ ಸರ್ಕಾರ ತನ್ನ ಮಾತುಗಳನ್ನು ಉಳಿಸಿಕೊಳ್ಳಲಿದೆ,” ಎಂದು ಖರ್ಗೆ ಹೇಳಿದರು.

2 ಸಾವಿರ ಮುಖಬೆಲೆಯ ನೋಟುಗಳನ್ನು ಬೇರೆ ಮುಖಬೆಲೆಯ ನೋಟುಗಳೊಂದಿಗೆ ಒಂದು ಬಾರಿಗೆ 20 ಸಾವಿರದವರೆಗೆ ಮಾತ್ರವೇ ಬದಲಾಯಿಸಿಕೊಳ್ಳಬಹುದು ಎನ್ನುವ ಮಿತಿಯನ್ನು ಆರ್‌ಬಿಐ ವಿಧಿಸಿದೆ. ಬ್ಯಾಂಕ್ ಶಾಖೆಗಳ ದೈನಂದಿನ ಕೆಲಸಗಳಿಗೆ ಅಡಚಣೆ ಆಗಬಾರದು ಎಂಬ ಕಾರಣಕ್ಕೆ ಈ ಮಿತಿಯನ್ನು ಹೇರಲಾಗಿದೆ.

2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ದೊಡ್ಡ ನೋಟುಗಳನ್ನು ರದ್ದುಗೊಳಿಸಿ ಸಂಚಲನ ಮೂಡಿಸಿದ್ದರು. ಭ್ರಷ್ಟಾಚಾರ ಮತ್ತು ಕಪ್ಪುಹಣ ಹೆಚ್ಚುತ್ತಿದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಒಂದು ಸಾವಿರ ರೂಪಾಯಿ ಬ್ಯಾನ್ ಮಾಡಿ 2000 ನೋಟು ಪರಿಚಯಿಸಿತ್ತು.

1000 ರೂಪಾಯಿ ನೋಟುಗಳಿಂದ ಕಪ್ಪುಹಣ ಹೆಚ್ಚುತ್ತದೆ ಎಂದು ಹೇಳಿದಾಗ 2000 ನೋಟು ಚಲಾವಣೆಗೆ ಟೀಕೆ ವ್ಯಕ್ತವಾಗಿತ್ತು. ಮತ್ತೊಂದೆಡೆ 500 ರೂಪಾಯಿಯ ಹಳೆಯ ನೋಟು ರದ್ದು ಮಾಡಿ ಹೊಸ 500 ರೂಪಾಯಿ ನೋಟು ಚಲಾವಣೆಗೆ ಬಂದಿತ್ತು.

ಆಗಿನ ಸಮಯದಲ್ಲಿ ದೇಶದ ಜನತೆ ಕರೆನ್ಸಿ ವಿನಿಮಯಕ್ಕೆ ಬ್ಯಾಂಕ್‌ಗಳ ಮೊರೆ ಹೋಗಿದ್ದನ್ನು ಯಾರೂ ಮರೆಯುವಂತಿಲ್ಲ. ಇದೀಗ ಮತ್ತೊಮ್ಮೆ ಅದೇ ರೀತಿ ಆರ್‌ಬಿಐ ಶಾಕ್ ನೀಡಿದ್ದಕ್ಕೆ ವಿಪಕ್ಷಗಳು ಕಿಡಿಕಾರಿವೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...