‘ದೇಶಕ್ಕಾಗಿ ದೇಣಿಗೆ’ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

Date:

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಪಕ್ಷದ ಆನ್‌ಲೈನ್ ಕ್ರೌಡ್‌ಫಂಡಿಂಗ್ ಕಾರ್ಯಕ್ರಮ ‘ದೇಶಕ್ಕಾಗಿ ದೇಣಿಗೆ’ಗೆ 1.38 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದರು. ಉತ್ತಮ ಭಾರತವನ್ನು ನಿರ್ಮಿಸುವ ಪ್ರಯತ್ನಗಳಲ್ಲಿ ಕಾರ್ಯಕರ್ತರು ಆರ್ಥಿಕ ನೆರವನ್ನು ನೀಡಬೇಕೆಂದು ಒತ್ತಾಯಿಸಿದರು.

ಪಕ್ಷದ ಬೊಕ್ಕಸ ಖಾಲಿಯಾದ ಸಮಯದಲ್ಲಿ ‘ದೇಶಕ್ಕಾಗಿ ದೇಣಿಗೆ’ ಉಪಕ್ರಮವನ್ನು ಪ್ರಾರಂಭಿಸಲಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆಗೆ ಹಣದ ಅಗತ್ಯವಿದೆ. ಅಸಹಕಾರ ಚಳವಳಿಗೆ ನಿಧಿ ಸಂಗ್ರಹಿಸಲು ಮಹಾತ್ಮ ಗಾಂಧಿಯವರ ‘ತಿಲಕ್ ಸ್ವರಾಜ್ ನಿಧಿ’ಯಿಂದ ಈ ಕಾರ್ಯಕ್ರಮಕ್ಕೆ ಪ್ರೇರೇಪಣೆ ಪಡೆಯಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಖರ್ಗೆ, ”ಶ್ರೀಮಂತರಿಂದ ಹಣ ವಸೂಲಿ ಮಾಡುವುದನ್ನು ಮುಂದುವರಿಸಿದರೆ ಅವರ ಇಚ್ಛೆಗೆ ತಕ್ಕಂತೆ ನೀತಿ ಮತ್ತು ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಮ್ಮ ಪಕ್ಷ ಯಾವಾಗಲೂ ಹಿಂದುಳಿದವರು, ದಲಿತರು, ಆದಿವಾಸಿಗಳು, ಒಬಿಸಿಗಳು, ಅಲ್ಪಸಂಖ್ಯಾತರು ಮತ್ತು ಮೇಲ್ಜಾತಿಗಳ ಜೊತೆಗಿದೆ. ನಾವು ಅವರಿಗೆ ಸಹಾಯ ಮಾಡಲು ಬಯಸುತ್ತೇವೆ. ಜನ ಸಾಮಾನ್ಯರ ನೆರವಿನಿಂದ ದೇಶವನ್ನು ಕಟ್ಟುವ ಪ್ರಯತ್ನ ಇದಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಕೊರೋನಾ ಮತ್ತೆ ಸಕ್ರಿಯ: 1800 ಪ್ರಕರಣ ದಾಖಲು

ಕಾಂಗ್ರೆಸ್ ಮುಖಂಡ ಅಜಯ್ ಮಕಾನ್, “ಇದು ಪ್ರಚಾರಕ್ಕಿಂತ ಹೆಚ್ಚು. ಇದು ಅಂಚಿನಲ್ಲಿರುವ ಸಮುದಾಯಗಳ ಹಕ್ಕುಗಳನ್ನು ಎತ್ತಿಹಿಡಿಯಲು, ಅಸಮಾನತೆಗಳನ್ನು ನಿವಾರಿಸಲು ಮತ್ತು ಶ್ರೀಮಂತರಿಗೆ ಒಲವು ತೋರುವ ಸರ್ಕಾರದ ವಿರುದ್ಧದ ಕಾರ್ಯಕ್ರಮವಾಗಿದೆ. ನಾವು ನಿರುದ್ಯೋಗ ಮತ್ತು ಹೆಚ್ಚುತ್ತಿರುವ ಬೆಲೆ ಏರಿಕೆಯ ವಿರುದ್ಧ ಹೋರಾಡುತ್ತಿದ್ದೇವೆ” ಎಂದು ಹೇಳಿದರು.

ಕ್ರಾಡ್‌ ಫಂಡಿಂಗ್ ಉಪಕ್ರಮವು ಆನ್ಲೈನ್ ಮತ್ತು ಆಫ್ಲೈನ್ ಘಟಕವನ್ನು ಹೊಂದಿದೆ. ಪಕ್ಷವು ಡಿಸೆಂಬರ್ 28 ರಂದು 138 ವರ್ಷಗಳನ್ನು ಪೂರ್ಣಗೊಳಿಸುವುದರೊಂದಿಗೆ, ಇದು ಕಾರ್ಯಕರ್ತರಲ್ಲಿ 138 ರೂ.ಗಳ ಗುಣಾಕಾರಗಳಲ್ಲಿ ದೇಣಿಗೆ ನೀಡುವಂತೆ ಕೇಳುತ್ತಿದೆ. ಉದಾ, ರೂ 138, ರೂ 1,380, ರೂ 13,800 ಅಥವಾ ಅದಕ್ಕಿಂತ ಹೆಚ್ಚು. ಉತ್ತಮ ಭಾರತಕ್ಕಾಗಿ ಪಕ್ಷದ ನಿರಂತರ ಬದ್ಧತೆಯನ್ನು ಕಾರ್ಯಕ್ರಮ ಸಂಕೇತಿಸುತ್ತದೆ.

ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಮತ್ತು ರಾಜ್ಯಾಧ್ಯಕ್ಷರು ಮತ್ತು ಎಐಸಿಸಿ ಪದಾಧಿಕಾರಿಗಳು ಅಭಿಯಾನಕ್ಕೆ ತಲಾ ಕನಿಷ್ಠ 1,380 ರೂ. ದೇಣಿಗೆ ನೀಡಲಿದ್ದಾರೆ. ಡಿಸೆಂಬರ್ 28 ರವರೆಗೆ ಆನ್‌ಲೈನ್‌ನಲ್ಲಿರುತ್ತದೆ. ನಂತರ ಸ್ವಯಂಸೇವಕರಿಂದ ಮನೆ-ಮನೆ ಪ್ರಚಾರವನ್ನು ಪ್ರಾರಂಭಿಸಲಾಗುವುದು. ಪ್ರತಿ ಬೂತ್‌ನಲ್ಲಿ ಕನಿಷ್ಠ ಹತ್ತು ಮನೆಗಳಿಗೆ ಕನಿಷ್ಠ 138 ರೂಪಾಯಿಗಳ ಕೊಡುಗೆಗಾಗಿ ಗುರಿಪಡಿಸಲಾಗುತ್ತದೆ.

ಆನ್ಲೈನ್ ಕ್ರೌಡ್ಫಂಡಿಂಗ್ಗಾಗಿ ಪಕ್ಷವು www.donateinc.in ಮತ್ತು www.inc.in ಎಂಬ ಎರಡು ವೆಬ್‌ಸೈಟ್‌ಗಳನ್ನು ಸ್ಥಾಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...