ಬಿಜೆಪಿ ಭಯೋತ್ಪಾದಕರ ಪಕ್ಷ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

Date:

ಅರ್ಬನ್ ನಕ್ಸಲರು ಕಾಂಗ್ರೆಸ್ ಪಕ್ಷವನ್ನು ನಡೆಸುತ್ತಿದ್ದಾರೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ಭಯೋತ್ಪಾದಕರ ಪಕ್ಷ ಎಂದು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ತಳ್ಳಿಹಾಕಿದ ಖರ್ಗೆ, “ಮೋದಿ ಯಾವಾಗಲೂ ಕಾಂಗ್ರೆಸ್ ಅನ್ನು ಅರ್ಬನ್ ನಕ್ಸಲರ ಪಕ್ಷ ಎಂದು ಲೇಬಲ್ ಮಾಡುತ್ತಾರೆ. ಅದು ಅವರ ಅಭ್ಯಾಸ. ಆದರೆ ಅವರ ಸ್ವಂತ ಪಕ್ಷದ ಬಗ್ಗೆ ಏನಂತಾರೆ? ಬಿಜೆಪಿ ಭಯೋತ್ಪಾದಕರ ಪಕ್ಷವಾಗಿದ್ದು, ಹತ್ಯೆಯಲ್ಲಿ ತೊಡಗಿದೆ. ಇಂತಹ ಆರೋಪ ಮಾಡುವ ಹಕ್ಕು ಮೋದಿಯವರಿಗಿಲ್ಲ ಎಂದಿದ್ದಾರೆ.

ಅರ್ಬನ್ ನಕ್ಸಲರು ಕಾಂಗ್ರೆಸ್ ಅನ್ನು ನಡೆಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಎರಡು ಬಾರಿ, ವಿವಿಧ ಸಂದರ್ಭಗಳಲ್ಲಿ ಹೇಳಿದ್ದಾರೆ. ಅಕ್ಟೋಬರ್ 5 ರಂದು, ಪಿಎಂ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಅರ್ಬನ್ ನಕ್ಸಲರ ಗುಂಪು ನಿಯಂತ್ರಿಸುತ್ತಿದೆ ಎಂದು ಹೇಳಿದ್ದು, ಪಕ್ಷದ “ಅಪಾಯಕಾರಿ ಅಜೆಂಡಾ” ವನ್ನು ಸೋಲಿಸಲು ಜನರು ಒಗ್ಗೂಡಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್‌- ಇದು ಸಾಮಾನ್ಯ ವಿದ್ಯಮಾನವಲ್ಲ

ʼಬಿಜೆಪಿಯವರು ದುಷ್ಕೃತ್ಯ ನಡೆಸುವವರಿಗೆ ಸಹಕಾರ ನೀಡುತ್ತಿರುತ್ತಾರೆ. ಚಿಂತಕರಿಗೆ, ಕಾಂಗ್ರೆಸ್ ಪಕ್ಷದವರಿಗೆ ಅರ್ಬನ್ ನಕ್ಸಲ್ ಎಂದು ಕರೆಯುವುದು ಬಿಜೆಪಿಗೆ ಚಾಳಿ ಇದೆ. ಈ ಮಧ್ಯೆ ಇದನ್ನು ಹೇಳುವುದನ್ನು ನಿಲ್ಲಿಸಿದ್ದರೂ ಇದೀಗ ಮತ್ತೆ ಹೇಳಲು ಪ್ರಾರಂಭಿಸಿದ್ದಾರೆʼ ಎಂದು ಟೀಕಿಸಿದರು.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ ಕುರಿತು ಪ್ರಕ್ರಿಯೆ ನೀಡಿ, ʼಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ಇಡೀ ದೇಶದ ಜನರಿಗೆ ವಿಶ್ವಾಸವಿತ್ತು. ಜನ ಸಮುದಾಯದಲ್ಲಿ ಜನರ ಅಭಿಪ್ರಾಯ ಕಾಂಗ್ರೆಸ್ ಪಕ್ಷದ ಪರವಾಗಿಯೇ ಇತ್ತು. ಆದಾಗ್ಯೂ ಚುನಾವಣಾ ಫಲಿತಾಂಶ ಬೇರೆಯದ್ದೇ ರೀತಿಯಲ್ಲಿ ಬಂದಿದೆ. ಚುನಾವಣಾ ಪ್ರಕ್ರಿಯೆ ಮೇಲೆ ಅನುಮಾನ ಕಾಡುತ್ತಿದೆʼ ಎಂದರು.

ʼಈ ರೀತಿಯ ಫಲಿತಾಂಶ ಬರಲು ಏನು ಕಾರಣ ಎಂಬುದರ ಬಗ್ಗೆ ವಿಶ್ಲೇಷಣೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೂತ್ ಮಟ್ಟದಿಂದ ವರದಿ ತರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ವರದಿ ಬಂದ ಬಳಿಕ ತಪ್ಪು ನಮ್ಮ ಪಕ್ಷದ ಕಾರ್ಯಕರ್ತರದ್ದೋ, ಅಥವಾ ಈ ಚುನಾವಣಾ ಪ್ರಕ್ರಿಯೆಯಲ್ಲಿ ಮತ್ತೇನಾದರೂ ಅಸಂಬದ್ಧತೆ ನಡೆದಿದೆಯೋ ಎಂಬುದರ ಕುರಿತು ಸ್ಪಷ್ಟ ಚಿತ್ರಣ ಹೊರಬೀಳಲಿದೆʼ ಎಂದು ಹೇಳಿದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...