ದಾಳಿಗೆ ಹೆದರಿ ದೇಣಿಗೆ : ಬಿಜೆಪಿ ವಿರುದ್ಧದ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್

Date:

ಹಲವು ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳಿಯನ್ನು ತಪ್ಪಿಸಿಕೊಳ್ಳಲು ಬಿಜೆಪಿಗೆ ದೇಣಿಗೆ ನೀಡಿರುವುದು ಹಾಗೂ ಬಿಜೆಪಿಯಿಂದ ದೇಣಿಗೆ ಪಡೆದಿರುವ ಹಲವು ಸಂಸ್ಥೆಗಳು ಕೇಂದ್ರದಿಂದ ಅನುಕೂಲ ಪಡೆದಿರುವುದರ ವಿರುದ್ಧ ಸಂಪೂರ್ಣ ತನಿಖೆ ನಡೆಸುವಂತೆ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪತ್ರ ಬರೆದಿದ್ದಾರೆ.

ಇತ್ತೀಚಿಗಷ್ಟೆ ಆನ್‌ಲೈನ್‌ ಮಾಧ್ಯಮಗಳಾದ ದಿ ನ್ಯೂಸ್ ಮಿನಿಟ್ ಹಾಗೂ ನ್ಯೂಸ್ ಲಾಂಡ್ರಿ ಬಿಜೆಪಿಗೆ ದೇಣಿಗೆ ನೀಡಿದ ಸುಮಾರು 30 ಕಂಪನಿಗಳ ಪಟ್ಟಿಯನ್ನು ಹಲವು ದಾಖಲೆಗಳ ಸಮೇತ ತನಿಖಾ ವರದಿ ಪ್ರಕಟಿಸಿದ್ದವು.

ಎರಡೂ ಮಾಧ್ಯಮ ಸಂಸ್ಥೆಗಳು ಕೈಗೊಂಡ ತನಿಖಾ ವರದಿಯಲ್ಲಿ ದೇಶದ ವಿವಿಧ ರಾಜ್ಯಗಳ 30 ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ), ಆದಾಯ ತೆರಿಗೆ ಇಲಾಖೆ(ಐ.ಟಿ) ಹಾಗೂ ಸಿಬಿಐ ಒಳಗೊಂಡ ಇತರ ಸಂಸ್ಥೆಗಳು ದಾಳಿ ನಡೆಸಿವೆ. ದಾಳಿಗೊಳಗಾದ ನಂತರ ಈ ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡಿವೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಿಖಾ ವರದಿಯ ಪ್ರಕಾರ ಕನಿಷ್ಠ 30 ಸಂಸ್ಥೆಗಳು 2018 ರಿಂದ 2022-23 ವರೆಗೆ ಬಿಜೆಪಿಗೆ ಸುಮಾರು 335 ಕೋಟಿ ರೂ. ದೇಣಿಗೆ ನೀಡಿವೆ. ಇವುಗಳಲ್ಲಿ 23 ಸಂಸ್ಥೆಗಳು ಬಿಜೆಪಿಗೆ ದೇಣಿಗೆ ನೀಡದಿದ್ದಾಗ ತನಿಖಾ ಸಂಸ್ಥೆಗಳಿಂದ ದಾಳಿಗೆ ಒಳಗಾಗಿವೆ. ಈ ಕಂಪನಿಗಳಲ್ಲಿ ಹಲವು ತನಿಖಾ ಸಂಸ್ಥೆಗಳ ಕ್ರಮದಿಂದಾಗಿ ಬಿಜೆಪಿಗೆ ದೇಣಿಗೆ ನೀಡುವುದನ್ನು ಹೆಚ್ಚಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಂಡ್ ಎಂಬ ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಜನ ಪ್ರಶ್ನಿಸಬಾರದೇ?

“ಮೇಲಿನ ನಿದರ್ಶನಗಳಂತೆ ತನಿಖಾ ಸಂಸ್ಥೆಗಳ ದಾಳಿಗೆ ಹೆದರಿ ಆಡಳಿತ ಪಕ್ಷಕ್ಕೆ ದೇಣಿಗೆ ನೀಡಿರುವುದು  ಕಾನೂನು ಸುಲಿಗೆಯ ಸ್ಪಷ್ಟವಾದ ಪ್ರಕರಣವಾಗಿದೆ. ಖಂಡಿತವಾಗಿಯೂ ಕೇವಲ ಇಂತಹ ಕಾರ್ಯವಿಧಾನದ ಪ್ರಕರಣಗಳಲ್ಲಿ ಮಾತ್ರ ಸುಲಿಗೆಗಳು ನಡೆದಿಲ್ಲ. ಈ ಪ್ರಕರಣ ದೊಡ್ಡ ಜಾಲದಂತೆ ಕಾಣುತ್ತಿದೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

“ನಾವು ಎಲ್ಲಿಯೂ ಪ್ರಕರಣಗಳನ್ನು ದಾಖಲಿಸಿಲ್ಲ ಎಂದು ಆರೋಪಿಸಿಲ್ಲ ಅಥವಾ ತನಿಖಾ ಸಂಸ್ಥೆಗಳು ಅಕ್ರಮವಾಗಿ ಕ್ರಮ ಕೈಗೊಂಡಿವೆ ಎಂದು ಹೇಳಿಲ್ಲ. ಈ ಸಂಶಯಾತ್ಮಕ ಕಂಪನಿಗಳ ವಿರುದ್ಧ ಏಕೆ ಇ.ಡಿ ಕ್ರಮ ಕೈಗೊಂದೆ ಹಾಗೂ ನಂತರ ಇವುಗಳು ಬಿಜೆಪಿಗೆ ದೇಣಿಗೆ ನೀಡಿರುವುದರಿಂದ ತನಿಖೆಯನ್ನು ಸಮರ್ಥಿಸುತ್ತದೆ.ಇದು ಕಾಕತಾಳಿಯವಾದರೆ ಇ.ಡಿ ಕ್ರಮದ ನಂತರ ಬಿಜೆಪಿಗೆ ಏಕೆ ದೇಣಿಗೆ ನೀಡಿದ್ದಾರೆ” ಎಂದು ವೇಣುಗೋಪಾಲ್ ಪ್ರಶ್ನಿಸಿದ್ದಾರೆ.

“ನೀವು ಯಾವುದನ್ನು ಮುಚ್ಚಿಡಲಿಲ್ಲವೆಂದರೆ, ನೀವು ಪ್ರತಿಯೊಂದು ವರ್ಷ ಬಿಜೆಪಿ ಖಜಾನೆಗೆ ನೀಡಿರುವ ದಾಖಲೆಗಳನ್ನು ಪ್ರಸ್ತುತಪಡಿಸಲು ಇಚ್ಚೀಸುವಿರಾ?ನೀವು ವಾಸ್ತವ ವರದಿಯನ್ನು ಪ್ರಸ್ತುತಪಡಿಸದಿದ್ದರೆ, ಸಂಶಯಾಸ್ಪದ ಸಂಸ್ಥೆಗಳ ಮೂಲಕ ಬಿಜೆಪಿಗೆ ನೀಡಿರುವ ಸುಲಿಗೆ ದೇಣಿಗೆಯನ್ನು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೊಳಪಡಿಸಲು ಸಿದ್ಧರಿದ್ದೀರಾ?” ಎಂದು ವೇಣುಗೋಪಾಲ್ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...