ಉದ್ಧವ್ ಠಾಕ್ರೆ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್

Date:

ಲೋಕಸಭಾ ಚುನಾವಣೆಗೆ ಇಂಡಿಯಾ ಮೈತ್ರಿಕೂಟದ ಬಣದ ಶಿವಸೇನೆ(ಯುಬಿಟಿ) ಮುಂಬೈನ ನಾಲ್ಕು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೆ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್‌ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ನಿರುಪಮ್, ಮುಂಬೈ ವಾಯುವ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಶಿವಸೇನೆ(ಯುಬಿಟಿ) ಅಮೂಲ್ ಕೀರ್ತಿಕಾರ್‌ ಅವರನ್ನು ಘೋಷಿಸಿರುವುದು ಒಕ್ಕೂಟ ಧರ್ಮದ ಉಲ್ಲಂಘನೆಯಾಗಿದೆ ಎಂದು ತಿಳಿಸಿದ್ದಾರೆ.

ಮುಂಬೈ ವಾಯುವ್ಯ ಕ್ಷೇತ್ರದ ಹಾಲಿ ಸಂಸದರಾಗಿರುವ ಗಂಜನ್‌ ಕೀರ್ತಿಕಾರ್‌ ಅವರ ಪುತ್ರರಾಗಿರುವ ಅಮೂಲ್ ಕೀರ್ತಿಕಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಈ ವ್ಯಕ್ತಿ ಕೋವಿಡ್ 19 ಸಾಂಕ್ರಮಿಕದ ಸಂದರ್ಭದಲ್ಲಿ ವಲಸಿಗರಿಗೆ ಕಿಚಡಿ ವಿತರಿಸುವಲ್ಲಿ ಅಕ್ರಮವೆಸಗಿದ್ದರು. ಈ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಿತ್ತು. ಶಿವಸೇನೆಯು ಕಿಚಡಿ ಕಳ್ಳನಿಗೆ ಟಿಕೆಟ್ ನೀಡಿದೆ. ಕಿಚಡಿ ಕಳ್ಳ ಅಭ್ಯರ್ಥಿಗಳೊಂದಿಗೆ ಕೆಲಸ ಮಾಡುವುದಿಲ್ಲ ಎಂದು ಸಂಜಯ್‌ ನಿರುಪಮ್‌ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಮುಂಬೈನ ಆರು ಲೋಕಸಭಾ ಕ್ಷೇತ್ರಗಳಲ್ಲಿ ಐದು ಕ್ಷೇತ್ರಗಳಲ್ಲಿ ಶಿವಸೇನೆ ಯುಬಿಟಿ ಸ್ಪರ್ಧಿಸುತ್ತದೆ. ದಾನದ ರೀತಿಯಲ್ಲಿ ಒಂದು ಕ್ಷೆತ್ರವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಏಕಪಕ್ಷೀಯ ನಿರ್ಧಾರವಾಗಿರುವ ಇದು ಮುಂಬೈನಲ್ಲಿ ಕಾಂಗ್ರೆಸ್‌ಅನ್ನು ನಾಶಪಡಿಸುವ ಉದ್ದೇಶ ಹೊಂದಿದೆ ಎಂದು ಸಂಜಯ್‌ ನಿರುಪಮ್‌ ತಿಳಿಸಿದ್ದಾರೆ.

ಶಿವಸೇನೆ ತೆಗೆದುಕೊಂಡಿರುವ ಅತಿರೇಕದ ನಿಲುವಿನಿಂದ ಕಾಂಗ್ರೆಸ್‌ಗೆ ದೊಡ್ಡ ರೀತಿಯಲ್ಲಿ ನಷ್ಟ ಉಂಟಾಗಲಿದೆ. ಇದಕ್ಕೆ ಕಾಂಗ್ರೆಸ್ ನಾಯಕರು ಮಧ್ಯಸ್ಥಿಕೆ ವಹಿಸಬೇಕೆಂದು ಬಯಸುತ್ತೇನೆ. ಇಲ್ಲದಿದ್ದರೆ ಒಕ್ಕೂಟವನ್ನು ಮುರಿದುಕೊಂಡು ಪಕ್ಷವನ್ನು ಉಳಿಸಬೇಕಾಗಿದೆ. ಈ ನಿರ್ಧಾರವು ಕಾಂಗ್ರೆಸ್‌ಗೆ ಸ್ವಯಂ ವಿನಾಶಕಾರಿಯಾಗಿ ಮಾರ್ಪಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ

ಲೋಕಸಭೆ ಚುನಾವಣೆಗೆ ಉದ್ಧವ್‌ ಠಾಕ್ರೆ ಬಣದ ಶಿವಸೇನಾ ತನ್ನ 17 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.ರಾಜ್ಯದ 48 ಕ್ಷೇತ್ರಗಳಲ್ಲಿ ಶಿವಸೇನಾ 22 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...