ಹೇಮಾ ಮಾಲಿನಿ ವಿರುದ್ಧ ಹೇಳಿಕೆ: ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ 2 ದಿನ ಪ್ರಚಾರ ನಿಷೇಧ

Date:

ಬಿಜೆಪಿ ಸಂಸದೆ ಹೇಮಾ ಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ಹಿರಿಯ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಎರಡು ದಿನ ಪ್ರಚಾರದಿಂದ ನಿಷೇಧ ಹೇರಿದೆ.

ಆಯೋಗದ ಆದೇಶದ ಹಿನ್ನೆಲೆಯಲ್ಲಿ ಸುರ್ಜೇವಾಲ ಅವರು ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳವರೆಗೂ ಯಾವುದೇ ರ್ಯಾಲಿ ಅಥವಾ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳುವಂತಿಲ್ಲ.

“ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ ಸಂಬಂಧಿತ ವಿಷಯಗಳಿಗೆ ಸುರ್ಜೇವಾಲ ಅವರಿಗೆ ಆಯೋಗವು ನೋಟಿಸ್ ನೀಡುತ್ತದೆ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಸುರ್ಜೇವಾಲ ಅವರು ಗೌರವಕ್ಕೆ ಕುಂದು ತರುವಂತ ಹೇಳಿಕೆ ನೀಡಿದ್ದು, ಈ ಹೇಳಿಕೆಯನ್ನು ಚುನಾವಣಾ ಆಯೋಗವು ಬಲವಾಗಿ ಖಂಡಿಸುತ್ತದೆ” ಎಂದು ಚುನಾವಣಾ ಆಯೋಗ ನೋಟಿಸ್‌ನಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿಯವರನ್ನು ಸೋಲಿಸಲು ಬಿಜೆಪಿ ಸುಪಾರಿ ಕೊಟ್ಟಿದೆಯೇ, ಆತಂಕಕ್ಕೊಳಗಾಗಿದ್ದಾರೆಯೇ?

“ಈ ಹಿನ್ನೆಲೆಯಲ್ಲಿ ಸಂವಿಧಾನದ 324ನೇ ವಿಧಿಯಡಿ ಆಯೋಗವು ಸುರ್ಜೇವಾಲ ಅವರಿಗೆ ಸಾರ್ವಜನಿಕ ಸಭೆಗಳು, ಮೆರವಣಿಗೆಗಳು ರ್ಯಾಲಿಗಳು ಹಾಗೂ ಸಂದರ್ಶನ ಒಳಗೊಂಡ ಯಾವುದೇ ಪ್ರಚಾರದಲ್ಲಿ ಮುಂದಿನ 24 ಗಂಟೆಗಳ ಕಾಲ ತೊಡಗುವಂತಿಲ್ಲ” ಎಂದು ಹೇಳಿದೆ.

ಈ ಲೋಕಸಭಾ ಚುನಾವಣೆಯಲ್ಲಿ ಸುರ್ಜೇವಾಲ ಅವರು ಆಯೋಗದಿಂದ ನಿಷೇಧಗೊಂಡ ಮೊದಲ ರಾಜಕಾರಣಿಯಾಗಿದ್ದಾರೆ.

ಬಿಜೆಪಿ ಸಂಸದೆ ಹೇಮಾಮಾಲಿನಿ ವಿರುದ್ಧ ಗೌರವಕ್ಕೆ ಕುಂದು ತರುವಂತಹ ಹೇಳಿಕೆ ನೀಡಿದ್ದ ನಂತರ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲ ಅವರು ಕ್ಷಮೆಯಾಚಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...