ವಾರಕ್ಕೆ 70 ಗಂಟೆ ದುಡಿಮೆ ಸಮರ್ಥನೆ; ನಾರಾಯಣ ಮೂರ್ತಿ ವಿರುದ್ಧ ಕಾಂಗ್ರೆಸ್ ಸಂಸದ ಟೀಕೆ

Date:

ವಾರಕ್ಕೆ 70 ಗಂಟೆಗಳ ಕಾಲ ದುಡಿಯಬೇಕು ಎಂಬ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಟೀಕಿಸಿದ್ದಾರೆ. ಅಧಿಕ ಸಮಯ ‘ಅರ್ಥಹೀನವಾಗಿ’ ಕೆಲಸ ಮಾಡುವುದಕ್ಕಿಂತ ದಕ್ಷತೆಯ ಕಡೆಗೆ ಗಮನಹರಿಸಬೇಕು ಎಂದು ಅಭಿಪ್ರಾಯಿಸಿದ್ದಾರೆ.

ಯುವಕರು ವಾರದಲ್ಲಿ 70 ಗಂಟೆಗಳ ಕಾಲ ಕೆಲಸ ಮಾಡುವುದು ಅತ್ಯಗತ್ಯ. ಇದು ದೇಶದ ಬೆಳವಣಿಗೆಗೆ ಸಹಕಾರಿ ಎಂದು ನಾರಾಯಣ ಮೂರ್ತಿ ಅವರು ಹಲವು ಬಾರಿ ಹೇಳಿದ್ದಾರೆ. ವಿರೋಧ ವ್ಯಕ್ತವಾದಾಗಲೂ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ವಾರಕ್ಕೆ 70 ಗಂಟೆ ದುಡಿಮೆ | ನಾನು ಸತ್ತರೂ ನನ್ನ ಅಭಿಪ್ರಾಯ ಬದಲಿಸಿಕೊಳ್ಳಲ್ಲ: ನಾರಾಯಣ ಮೂರ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಭಾನುವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ, “ದೀರ್ಘಕಾಲ ಕೆಲಸ ಮಾಡುವುದು ಅರ್ಥಹೀನ. ದಕ್ಷತೆಯ ಮೇಲೆ ಅಧಿಕ ಗಮನ ಕೇಂದ್ರೀಕರಿಸಬೇಕು” ಎಂದು ಹೇಳಿದ್ದಾರೆ.

“ದೈನಂದಿನ ಜೀವನ ಒಂದು ಹೋರಾಟವಾಗಿದೆ. ಅಸಮರ್ಥ ಮತ್ತು ಕೆಳದರ್ಜೆಯ ಮೂಲಸೌಕರ್ಯದ ವಿರುದ್ಧವಾಗಿ ಹೋರಾಟ ನಡೆಯುತ್ತಿರುತ್ತದೆ. ಉತ್ತಮ ಸಾಮಾಜಿಕ ವ್ಯವಸ್ಥೆ ಮತ್ತು ಸಾಮರಸ್ಯದ ಜೀವನಕ್ಕಾಗಿ ಉದ್ಯೋಗ ಜೀವನದಲ್ಲಿ ಸಮತೋಲನ ಕಾಯ್ದುಕೊಳ್ಳುವುದು ಅತೀ ಅಗತ್ಯ” ಎಂದು ಅಭಿಪ್ರಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ನಾರಾಯಣ ಮೂರ್ತಿಯ ವಾರಕ್ಕೆ 70 ಗಂಟೆ ದುಡಿಮೆ ಹೇಳಿಕೆ: ನೆಟ್ಟಿಗರಿಂದ ಆಕ್ರೋಶ

ಹಾಗೆಯೇ, “ವಾರದ ನಾಲ್ಕು ದಿನಗಳ ಸೋಮವಾರ ಮಧ್ಯಾಹ್ನ 12 ರಿಂದ ಶುಕ್ರವಾರ ಮಧ್ಯಾಹ್ನ 2 ರವರೆಗೆ ಕೆಲಸದ ಅವಧಿ ಇರಬೇಕು” ಎಂದು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಭಾನುವಾರ ಟ್ವೀಟ್ ಮಾಡಿದ್ದಾರೆ.

ಈ ಹಿಂದೆ ಹಲವು ಬಾರಿ ವಾರಕ್ಕೆ 70 ಗಂಟೆ ದುಡಿಮೆಯ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ನಾರಾಯಣ ಮೂರ್ತಿ ಅವರು, ಕಳೆದ ತಿಂಗಳು “ನಾನು ಉದ್ಯೋಗ ಜೀವನದಲ್ಲಿ ಸಮತೋಲನ ಇರಬೇಕು ಎಂಬುದನ್ನು ನಂಬುವುದಿಲ್ಲ” ಎಂದು ಸಿಎನ್‌ಬಿಸಿ ಗ್ಲೋಬಲ್ ಲೀಡರ್‌ಶಿಪ್ ಶೃಂಗಸಭೆಯಲ್ಲಿ ಹೇಳಿದ್ದರು.

ಹಾಗೆಯೇ ಆರು ದಿನಗಳ ಉದ್ಯೋಗವಧಿಯನ್ನು 1986ರಲ್ಲಿ ಐದು ದಿನಗಳ ಕೆಲಸದ ಅವಧಿಗೆ ಕಡಿತಗೊಳಿಸಿರುವ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದರು. “ಹಾಗೆಯೇ ನನ್ನನ್ನು ಕ್ಷಮಿಸಿ. ನಾನು ನನ್ನ ದೃಷ್ಟಿಕೋನವನ್ನು ಬದಲಾಯಿಸಿಲ್ಲ. ನಾನು ಸಾಯುವವರೆಗೂ ಇದೇ ನಿಲುವು ಹೊಂದಿರುತ್ತೇನೆ” ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...