ಎಕ್ಸಿಟ್ ಪೋಲ್‌ಗೂ ಮುನ್ನ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿರುವುದನ್ನು ಬಹಿರಂಗಗೊಳಿಸಿ: ಅಮಿತ್ ಶಾಗೆ ಕಾಂಗ್ರೆಸ್ ಆಗ್ರಹ

Date:

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಜೂನ್ 4 ರಂದು ಷೇರು ಮಾರುಕಟ್ಟೆಯಲ್ಲಾದ ದೊಡ್ಡ ಕುಸಿತದ ಹಿಂದೆ ದೊಡ್ಡ ಹಗರಣದ ಕಾರಣವಿದೆ ಎಂದು ನಿನ್ನೆಯಷ್ಟೆ(ಜೂ.06) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದರು. ಹಗರಣದಿಂದ ಹೂಡಿಕೆದಾರರ 30 ಲಕ್ಷ ಕೋಟಿ ರೂ. ನಷ್ಟಕ್ಕೆ ಕಾರಣವಾಗಿದೆ. ನರೇಂದ್ರ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ನೇರವಾಗಿ ಭಾಗಿಯಾಗಿದ್ದು,ಇದರ ಬಗ್ಗೆ ಜಂಟಿ ಸದನ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದರು.

ಈಗ ಇದೇ ಷೇರು ಹಗರಣಕ್ಕೆ ಸಂಬಂಧಿಸಿದಂತೆ ಚುನಾವಣೋತ್ತರ ಸಮೀಕ್ಷೆ ನಂತರ ಬಿಜೆಪಿ ನಾಯಕ ಅಮಿತ್‌ ಶಾ ಹೂಡಿಕೆ ಮಾಡಿ ನಂತರ ಫಲಿತಾಂಶಕ್ಕೂ ಒಂದು ದಿನ ಮುನ್ನ ತನ್ನ ಷೇರುಗಳನ್ನು ಮಾರಾಟ ಮಾಡಿರುವ ದಾಖಲೆಗಳನ್ನು ಬಿಡುಗಡೆ ಮಾಡುವಂತೆ ಕೇರಳ ಕಾಂಗ್ರೆಸ್ ಸವಾಲೆಸೆದಿದೆ.

ಈ ಬಗ್ಗೆ ಅಮಿತ್‌ ಶಾ ಚುನಾವಣಾ ಸಮಯದಲ್ಲಿ ಸಲ್ಲಿಸಿರುವ ದಾಖಲೆಗಳನ್ನು ಕೇರಳ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಷೇರು ಮಾರುಕಟ್ಟೆ ಹಗರಣದ ಬಗ್ಗೆ ಸವಾಲು ಹಾಕುತ್ತೇವೆ. ಇದು ಅಮಿತ್‌ ಶಾ ಅವರು ತಮ್ಮ ಅಫಿಡೆವಿಟ್‌ನಲ್ಲಿ ಘೋಷಿಸಿರುವ ಷೇರುಗಳ ಪಟ್ಟಿಗಳ ಒಟ್ಟು ಪಟ್ಟಿ. ಇದನ್ನು ತಿರುಚದಿದ್ದರೆ ಅಥವಾ ಆಂತರಿಕ ಮಾರಾಟ ನಡೆಯದಿದ್ದರೆ ನಾವು ಕೆಲವು ಪ್ರಶ್ನೆಗಳೊಂದಿಗೆ ಪರಿಶೀಲನೆಗೊಳಪಡಿಸಬೇಕಾಗಿದೆ.

ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗುವುದಕ್ಕೂ ಮುನ್ನ ಅಮಿತ್‌ ಶಾ ಅವರು ಎಷ್ಟು ಷೇರುಗಳನ್ನು ಖರೀದಿಸಿದ್ದರು? ಎಕ್ಸಿಟ್‌ ಪೋಲ್‌ ಪ್ರಕಟವಾದ ನಂತರ ಜೂನ್‌ 3 ರಂದು ಎಷ್ಟನ್ನು ಮಾರಾಟ ಮಾಡಿದರು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಅದೇ ರೀತಿ ಪಿಯೂಷ್ ಗೋಯಲ್‌, ಇತರ ಸಚಿವರು, ಸಮೀಕ್ಷೆ ಪ್ರಕಟಿಸಿದವರು ಹಾಗೂ ಪತ್ರಕರ್ತರು ಒಳಗೊಂಡು ಈ ಹಗರಣವನ್ನು ಬಯಲಿಗೆಳಯಬೇಕಾಗಿದೆ. ಪೋಸ್ಟ್‌ನಲ್ಲಿ ಇರುವಂತ ಕಂಪನಿಗಳ ಹೆಸರುಗಳು ಅಮಿತ್‌ ಶಾ ಹಾಗೂ ಅವರ ಪತ್ನಿಯವರು ಷೇರು ಹೂಡಿಕೆ ಮಾಡಿರುವ ಕಂಪನಿಗಳ ಪಟ್ಟಿಯಾಗಿದೆ.

ಈ ದಾಖಲೆಯ ಹಿನ್ನೆಲೆಯಲ್ಲಿ ನಾವು ಅಮಿತ್‌ ಶಾ ಅವರಿಗೆ ಬಹಿರಂಗ ಸವಾಲು ಹಾಕುತ್ತೇವೆ. ಕಳೆದ ಒಂದು ತಿಂಗಳಲ್ಲಿ ನೀವು ಚಟುವಟಿಕೆ ನಡೆಸಿದ ಮಾರುಕಟ್ಟೆ ವಹಿವಾಟುಗಳನ್ನು ಸಾರ್ವಜನಿಕಗೊಳಿಸಿ ತಾವು ಸ್ವಚ್ಛವಾಗಿರುವುದಾಗಿ ತಿಳಿಸಿ ಎಂದು ಕೇರಳ ಕಾಂಗ್ರೆಸ್ ಸವಾಲೆಸೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ಕೇರಳ ಕಾಂಗ್ರೆಸ್ ಪೋಸ್ಟ್‌ ಮಾಡಿರುವ ಅಮಿತ್‌ ಶಾ ಅವರ ಚುನಾವಣಾ ಅಫಿಡೆವಿಟ್‌ನ ದಾಖಲೆಗಳಲ್ಲಿ ನೂರಾರು ಕಂಪನಿಗಳಿಗೆ ಹೂಡಿಕೆ ಮಾಡಿರುವ ಮಾಹಿತಿಯಿದೆ. ಇದರಿಂದ ಬಿಜೆಪಿ ನಾಯಕರು ನೂರಾರು ಕೋಟಿಗೂ ಅಧಿಕ ಲಾಭ ಪಡೆದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜೂನ್ 1 ರಂದು ನಡೆದ ಮತದಾನೋತ್ತರ ಸಮೀಕ್ಷೆ ನಂತರ ಷೇರು ಮಾರುಕಟ್ಟೆಗಳು ಏರಿಕೆ ಕಂಡಿದ್ದವು. ಮೂರು ದಿನಗಳ ನಂತರ ಕುಸಿತದ ಷೇರು ಮಾರುಕಟ್ಟೆ ಸೂಚ್ಯಂಕ ತಲೆಕೆಳಗಾಗಿತ್ತು. ಚುನಾವಣೋತ್ತರ ಸಮೀಕ್ಷೆಗಳದ್ದು ಸರಿಯಾಗಿಲ್ಲ ಎಂಬ ಮಾಹಿತಿ ಬಿಜೆಪಿ ನಾಯಕರಿಗೆ ಇತ್ತು ಎಂದು ರಾಹುಲ್ ಆರೋಪಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...