ಜಾತಿ ಗಣತಿ ವಿರೋಧಿಸಿ ಖರ್ಗೆಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ

Date:

ಹಿರಿಯ ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಅವರು ಜಾತಿ ಗಣತಿಯನ್ನು ವಿರೋಧಿಸಿ ಮಾ.19ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

“ಜಾತಿ ಭಾರತದ ಸಮಾಜದ ವಾಸ್ತವವಾದರೂ, ಕಾಂಗ್ರೆಸ್ ಇದನ್ನು ಕಾರ್ಯಗತಗೊಳಿಸುವುದಾಗಲಿ ಅಥವಾ ಅನುಮೋದಿಸುವುದಾಗಲಿ ಮಾಡಿಲ್ಲ. ಪ್ರದೇಶ, ಧರ್ಮ, ಜಾತಿ ಹಾಗೂ ಜನಾಂಗೀಯತೆ ಹೊಂದಿರುವ ಶ್ರೀಮಂತ ವೈವಿದ್ಯತೆಯ ಪ್ರಜಾಸತ್ತಾತ್ಮಕ ಸಮಾಜದಲ್ಲಿ ಇದು ಹಾನಿಕರವಾಗಿದೆ” ಎಂದು ಪತ್ರದಲ್ಲಿ ಆನಂದ್‌ ಶರ್ಮಾ ತಿಳಿಸಿದ್ದಾರೆ.

ನನ್ನ ಪರಿಗಣೆಯ ನೋಟದಲ್ಲಿ ಜಾತಿ ಗಣತಿಯು ನಿರುದ್ಯೋಗ ಅಥವಾ ಚಾಲ್ತಿಯಲ್ಲಿರುವ ಅಸಮಾನತೆಗಳಿಗೆ ಔಷಧ ಅಥವಾ ಪರಿಹಾರವಲ್ಲ. ಜಾತಿ ಆಧಾರಿತ ನಮ್ಮ ದೇಶದಲ್ಲಿ ಜಾತಿಯನ್ನು ಪ್ರತಿಷ್ಠಾಪಿಸಿದರೆ ಸಮಸ್ಯೆಗಳಾಗುತ್ತವೆ. ಸಂಸತ್ತು ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಜಾತಿ ಗಣತಿಯನ್ನು ಅನುಷ್ಠಾನಗೊಳಿಸಲು ಹೊರಟರೆ ನಮಗೆ ಸಮಸ್ಯೆಗಳುಂಟಾಗುತ್ತವೆ. ದೇಶ ವಿಭಜನೆಯಾಗುವುದನ್ನು ನೋಡಿಕೊಂಡು ಕಾಂಗ್ರೆಸ್ ಕುಳಿತುಕೊಳ್ಳಬಾರದು ಎಂದು ಆನಂದ್‌ ಶರ್ಮಾ ತಮ್ಮ ಪತ್ರದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1931ರ ಆಂಗ್ಲರ ಆಡಳಿತದ ಅವಧಿಯಲ್ಲಿ ಕೊನೆಯ ಬಾರಿಗೆ ಜಾತಿ ಗಣತಿಯನ್ನು ನಡೆಸಲಾಯಿತು. ಸ್ವಾತಂತ್ರ ನಂತರ ಕೇಂದ್ರ ಸರ್ಕಾರವು ರಾಜ್ಯಗಳಿಂದ ಸಂಗ್ರಹಿಸಿದ ಮಾಹಿತಿಯಿಂದ ತನ್ನ ಪ್ರಜ್ಞಾಪೂರ್ವಕ ನೀತಿಯ ನಿರ್ಧಾರದಿಂದ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳನ್ನು ಹೊರತುಪಡಿಸಿ ಜಾತಿ ಗಣತಿಯನ್ನು ಮಾಡದಿರಲು ನಿರ್ಧರಿಸಿತು. ಸ್ವಾತಂತ್ರ ನಂತರ ಎಲ್ಲ ಜಾತಿ ಗಣತಿ ಆಯುಕ್ತರು ಹೆಚ್ಚು ದಾಖಲಿಸುವಿಕೆ, ನಕಲೀಕರಣಗೊಳಿಸುವುದು, ಖಚಿತತೆ ಮತ್ತು ಪ್ರಾಮಾಣಿಕತೆ ಅಂಕಿಅಂಶಗಳ ಕೊರತೆಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಜಾತಿ ಗಣತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದರು ಎಂದು ಆನಂದ್‌ ಶರ್ಮಾ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ರಾಷ್ಟ್ರೀಯ ಸಾಮರಸ್ಯ ಹಾಗೂ ಹೊಂದಾಣಿಕೆಯ ಸಮಾಜ ನಿರ್ಮಾಣಕ್ಕಾಗಿ ಕಾಂಗ್ರೆಸ್ ಜಾತಿ ಗಣತಿ ಮಾಡುವ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಕ್ಷದ ನಿಲುವು ಸಮತೋಲಿತವಾಗಿರಬೇಕು ಹಾಗೂ ಧರ್ಮ ಹಾಗೂ ಜಾತಿ ಆಧಾರಿತ ಸಂಘಟನೆಗಳ ಒತ್ತಡದಿಂದ ದೂರವಿರಬೇಕು. ಕಾಂಗ್ರೆಸ್ ಪಾರದರ್ಶಕತೆ, ಪ್ರಜಾಸತ್ತಾತ್ಮಕ ನಿರ್ಧಾರ ಹಾಗೂ ಗೌರವಾನ್ವಿತ ಅಭಿವ್ಯಕ್ತ ಸ್ವಾತಂತ್ರವನ್ನು ದೃಢವಾಗಿ ನಂಬಿದೆ. ಇದನ್ನು ನಾನು ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಬರೆಯುತ್ತಿದ್ದೇನೆ ಎಂದು ತಮ್ಮ ಪತ್ರದಲ್ಲಿ ಆನಂದ್ ಶರ್ಮಾ ಉಲ್ಲೇಖಿಸಿದ್ದಾರೆ.

ಶರ್ಮಾ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್‌ ಹುಸೇನ್, ಜಾತಿ ಗಣತಿಯನ್ನು ದೇಶದ ಅತ್ಯಂತ ಹಳೆಯ ಪಕ್ಷ ಸಕ್ರಿಯಗೊಳಿಸಿ ಜಾರಿಗೊಳಿಸುತ್ತಿರುವ ನಿರ್ಧಾರದಿಂದ ಭಾರತೀಯ ಸಮಾಜದ ಪ್ರತಿಯೊಂದ ವರ್ಗದವರು ಅನುಕೂಲ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

“ನಾವು ಯಾವುದೇ ರೀತಿಯ ಜಾತಿ ಆಧಾರಿತ ರಾಜಕೀಯ ಮಾಡುವುದಿಲ್ಲ. ಪಕ್ಷದಲ್ಲಿ ಎಲ್ಲ ಸಮಸ್ಯೆಗಳನ್ನು ಚರ್ಚಿಸಲು ಪ್ರಜಾಪ್ರಭುತ್ವವಿದೆ” ಎಂದು ಹುಸೇನ್‌ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...