ಸಲಿಂಗ ವಿವಾಹ ಮಾನ್ಯತೆ; ಹತ್ತು ದಿನಗಳೊಳಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

Date:

  • ಪತ್ರದಲ್ಲಿ ಕಾಯ್ದೆಗೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಮುಖ್ಯ ಎಂದು ಉಲ್ಲೇಖ
  • ರಾಜ್ಯಗಳ ಅಭಿಪ್ರಾಯಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಲು ಸೂಚನೆ

ಸಲಿಂಗ ವಿವಾಹ ಕಾಯ್ದೆಯನ್ನು ಜಾರಿ ತರುವ ಸಂಬಂಧ ಸುಪ್ರೀಂ ಕೋರ್ಟ್​​ನಲ್ಲಿ​ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಹತ್ತು ದಿನಗಳೊಳಗೆ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.

ಕೇಂದ್ರ ಕಾನೂನು ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಹತ್ತು ದಿನಗಳ ಒಳಗೆ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ಸಲ್ಲಿಸುವಂತೆ ಸೂಚಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಲುವಿನಲ್ಲಿ ಯಾವುದೇ ವಿಳಂಬವಿಲ್ಲದೆ ಸರಿಯಾದ ನಿರ್ಧಾರ ತೆಗೆದುಕೊಳ್ಳತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯಗಳಿಗೆ ಬರೆದ ಪತ್ರದಲ್ಲಿ, “ಮದುವೆ ಸಂವಿಧಾನದ ಸಮಕಾಲೀನ ಪಟ್ಟಿಯಲ್ಲಿ ನಮೂದು 5ರ ಅಡಿಯಲ್ಲಿ ಬರುತ್ತದೆ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಎರಡೂ ಸಂಬಂಧಿತ ಸಮಸ್ಯೆಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುತ್ತದೆ. ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯಗಳನ್ನು ಒಳಗೊಂಡಂತೆ ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಲಾಗುವುದು. ಈ ಕಾಯ್ದೆಗೆ ರಾಜ್ಯ ಸರ್ಕಾರಗಳ ಅಭಿಪ್ರಾಯವು ಮುಖ್ಯ” ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸಲಿಂಗ ವಿವಾಹ ಮಾನ್ಯತೆ; ವಿಶೇಷ ವಿವಾಹ ಕಾಯ್ದೆ ವ್ಯಾಪ್ತಿಯಲ್ಲಿ ಮಾತ್ರ ವಿಚಾರಣೆ ಎಂದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರವು ಅಫಿಡವಿಟ್ ಸಲ್ಲಿಸುವ ಮೂಲಕ ನ್ಯಾಯಾಲಯದ ಮುಂದೆ ತನ್ನ ವಿಚಾರಗಳನ್ನು ತಿಳಿಸಲಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ವಿಚಾರವಾಗಿ ಸಮಾಲೋಚನೆ ಮಾಡಲು ಮುಕ್ತವಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಸಲಿಂಗ ವಿವಾಹಗಳಿಗೆ ಕಾನೂನು ಮಂಜೂರಾತಿ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ವಿರೋಧಿಸಿದ ಕೇಂದ್ರವು, “ಹೊಸ ಸಾಮಾಜಿಕ ಸಂಬಂಧವನ್ನು ರಚಿಸುವ ಬಗ್ಗೆ ಸಂಸತ್ತು ಮಾತ್ರ ನಿರ್ಧರಿಸಬಹುದು” ಎಂದು ಮಂಗಳವಾರ ಹೇಳಿತ್ತು.

“ವಿಚಾರಣೆಯಲ್ಲಿ ಹಾಜರಿರುವವರು ರಾಷ್ಟ್ರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಮತ್ತು ಈ ಬಗ್ಗೆ ನಿರ್ಧರಿಸುವ ವ್ಯಾಪ್ತಿ ನ್ಯಾಯಾಲಯಕ್ಕೆ ಬರುತ್ತದೆಯೇ ಎಂದು ಮೊದಲು ಪರಿಶೀಲಿಸಬೇಕು” ಎಂದು ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದರು.

“ಸಾಮಾನ್ಯ ಜನರು ಮತ್ತು ರಾಜಕೀಯ ಪಕ್ಷಗಳು ಈ ವಿಷಯದ ಬಗ್ಗೆ ಭಿನ್ನ ದೃಷ್ಟಿಕೋನಗಳನ್ನು ಹೊಂದಿದ್ದಾರೆ. ವಿಚಾರಣೆ ಮತ್ತು ಫಲಿತಾಂಶ ದೇಶದಲ್ಲಿ ಗಮನಾರ್ಹ ಪರಿಣಾಮ ಉಂಟು ಮಾಡುತ್ತದೆ” ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಕಳೆದ ವರ್ಷ ನವೆಂಬರ್ 25ರಂದು ಇಬ್ಬರು ಸಲಿಂಗಕಾಮಿ ದಂಪತಿಗಳು ತಮ್ಮ ವಿವಾಹದ ಹಕ್ಕನ್ನು ಖಾತ್ರಿ ಪಡಿಸಲು ಮತ್ತು ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ತಮ್ಮ ವಿವಾಹಗಳನ್ನು ನೋಂದಾಯಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...