ಖಾಸಗಿಯವರಿಗೆ ನೀಡಿದ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು: ಸುಪ್ರೀಂ ಕೋರ್ಟ್

Date:

ಖಾಸಗಿಯವರೆಗೆ ನೀಡಿರುವ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ತೀರ್ಪನ್ನು ಕಾಯ್ದಿರಿಸಿದೆ.

ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠವು, ಒಪ್ಪಂದ ಪಡೆದ ನಂತರ ಬಂಡವಾಳಗಳನ್ನು ಹೂಡುವವರು ರದ್ದುಗೊಳ್ಳುವಾಗ ಸಮಂಜಸವಾದ ಕಾರಣಗಳನ್ನು ನಿರೀಕ್ಷಿಸುತ್ತಾರೆ ಎಂದು ತಿಳಿಸಿತು.

“ಹೇಗೆ ಯಾವುದೇ ಕಾರಣವಿಲ್ಲದೆ ಒಪ್ಪಂದಗಳನ್ನು ರದ್ದುಗೊಳಿಸುತ್ತೀರಿ? ಒಬ್ಬ ಖಾಸಗಿ ವ್ಯಕ್ತಿಯು ಒಪ್ಪಂದದ ಅನುಸಾರವಾಗಿ ಗುತ್ತಿಗೆ ಪಡೆದಿರುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಾಸ್ತವಗಳನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, ಕಾರಣಗಳನ್ನು ನೀಡದೆ ಗುತ್ತಿಗೆಗಳನ್ನು ರದ್ದುಗೊಳಿಸಬಾರದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಮೇ 25, 2023 ರಂದು ಏಕ ಸದಸ್ಯತ್ವದ ಕಲ್ಕತ್ತಾ ಹೈಕೋರ್ಟ್ ಪೀಠ ಕಂಪನಿಯೊಂದಕ್ಕೆ ಯಾವುದೇ ಕಾರಣ ನೀಡದೆ ಒಪ್ಪಂದವನ್ನು ರದ್ದುಗೊಳಿಸಿದ್ದನ್ನು ಎತ್ತಿಹಿಡಿದಿತ್ತು.

ಒಪ್ಪಂದ ಪಡೆದಿದ್ದ ಕಂಪನಿಯು ಕೋಲ್ಕತ್ತಾದ ಪಶ್ಚಿಮ ನಗರದ ಬೈಪಾಸ್‌ ಕೆಳರಸ್ತೆಗಳನ್ನು ನಿರ್ವಹಿಸಲು  ಹತ್ತು ವರ್ಷಗಳವರೆಗೆ ಗುತ್ತಿಗೆ ಪಡೆದುಕೊಂಡಿತ್ತು. ಒಪ್ಪಂದದಂತೆ ಕಂಪನಿಗೆ ಕೆಳರಸ್ತೆಯ ಎರಡು ಭಾಗಗಳಲ್ಲಿ ಜಾಹೀರಾತು ನೀಡಲು ಅನುಮೋದಿಸಲಾಗಿತ್ತು. ಇದಕ್ಕಾಗಿ ಕೆಲ ಕಾಮಗಾರಿ ಕೆಲಸವನ್ನು ನಿರ್ವಹಿಸುವುದು ಅಗತ್ಯವಾಗಿತ್ತು.

ಆದಾಗ್ಯೂ, ಕೋಲ್ಕತ್ತಾ ಮಹಾನಗರ ಅಭಿವೃದ್ಧಿ ಪ್ರಾಧಿಕಾರ(ಕೆಎಂಡಿಎ) ಫೆ.7,2023 ರಂದು ಒಪ್ಪಂದವನ್ನು ರದ್ದುಗೊಳಿಸಿತ್ತು. ಅಲ್ಲದೆ ಇಲ್ಲಿಯವರೆಗೂ ಕಾಮಗಾರಿ ಹಾಗೂ ನಿರ್ವಹಣೆಗಾಗಿ ವೆಚ್ಚ ಮಾಡಿದ್ದ ಹಣ ಹಾಗೂ ಠೇವಣಿಯಿಟ್ಟಿದ್ದ ಪರವಾನಗಿ ಶುಲ್ಕವನ್ನು ಹಿಂತಿರುಗಿಸುವುದಾಗಿ ಕೆಎಂಡಿಎ ತಿಳಿಸಿತ್ತು.

ಕೆಎಂಡಿಎ ಕಾರಣ ತಿಳಿಸದೆ ಒಪ್ಪಂದವನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಅರ್ಜಿದಾರರು ಕೋರ್ಟ್‌ ಮೆಟ್ಟಿಲೇರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...