ಅಸ್ಸಾಂ ದಿಬ್ರುಗರ್ಹ ವಿವಿಯ ವಿವಾದಿತ ನಿರ್ಧಾರ: ಅಭ್ಯಾಸ ಪ್ರಾಧ್ಯಾಪಕರ ಹುದ್ದೆಗೆ ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಯ ನೇಮಕ

Date:

ಅಸ್ಸಾಂನ ದಿಬ್ರುಗರ್ಹ ವಿಶ್ವವಿದ್ಯಾಲಯಕ್ಕೆ ಶೈಕ್ಷಣಿಕ ಅನುಭವವಿಲ್ಲದ ವ್ಯಕ್ತಿಯೊಬ್ಬರನ್ನು ಅಭ್ಯಾಸದ ಪ್ರಾಧ್ಯಾಪಕ ಹುದ್ದೆಗೆ ನೇಮಕ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರ ಸಹೋದರ ದಿಗಂತ ಬಿಸ್ವ ಶರ್ಮ ಅವರನ್ನು ಯಾವುದೇ ಸಂದರ್ಶನ ಅಥವಾ ಶೈಕ್ಷಣಿಕ ಹಿನ್ನೆಲೆ ಗಮನಿಸದೆ ನೇರವಾಗಿ ಅಭ್ಯಾಸದ ಪ್ರಾಧ್ಯಾಪಕರು ಎಂದು ದಿಬ್ರುಗರ್ಹ ವಿವಿಗೆ ನೇಮಕಾತಿ ಮಾಡಲಾಗಿದೆ. ಇದು ಒಂದು ವರ್ಷದವರೆಗೆ ಅಥವಾ ಮುಂದಿನ ಸೂಚನೆಯವರೆಗೆ ಜಾರಿಯಲ್ಲಿರುತ್ತದೆ ಎಂದು ವಿವಿಯ ರಿಜಿಸ್ಟ್ರಾರ್‌ ಆಗಸ್ಟ್‌ 21ರಂದು ಆದೇಶ ಹೊರಡಿಸಿದ್ದಾರೆ.

ಭಾರತೀಯ ಜ್ಞಾನ ವ್ಯವಸ್ಥೆಗಳು (ಐಕೆಎಸ್) ಶಿಕ್ಷಣ ಮತ್ತು ಪರಿಚಯವನ್ನು ನೀಡಿಕೆ ಮತ್ತು ಶ್ರೀಮಂತ ಸಾಂಸ್ಕೃತಿಕ ಮೌಲ್ಯಗಳು ಮತ್ತು ಪರಂಪರೆಯನ್ನು ಬೆಳೆಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಜ್ಞಾನ ಭಂಡಾರ ನೀಡುತ್ತಾರೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಂಡಾಳಿಕೆಯ ಒಳಾರ್ಥಗಳನ್ನು ತಿರಸ್ಕರಿಸುವ ಈ ಕೈಪಿಡಿ ಕ್ರಾಂತಿಕಾರಿ

ಇದು ಎನ್‌ಇಪಿಯ ಶಿಫಾರಸ್ಸಾಗಿದೆ. ಅಂದರೆ ಕೇಂದ್ರ ಸರ್ಕಾರದ ಹೊಸ ಎನ್‌ಇಪಿ ನೀತಿ ಅನ್ವಯ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡಿ ಅನುಭವ ಇರುವವರಿಗೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಯಿಲ್ಲದೆ ಹಾಗೂ ಶೈಕ್ಷಣಿಕ ಅನುಭವ ಇಲ್ಲದಿರುವ ವ್ಯಕ್ತಿಯನ್ನು ನೇರವಾಗಿ ಅಭ್ಯಾಸದ ಪ್ರಾಧ್ಯಾಪಕ ಎಂದು ನೇಮಕ ಮಾಡಬಹುದಾಗಿದೆ.

Diganth biswa sharma

ಪ್ರಾಧ್ಯಾಪಕರಾಗಿ ನೇಮಕಗೊಳ್ಳುವ ಇವರು ತಮ್ಮ ವೃತ್ತಿಪರ ಅನುಭವವನ್ನು ಬೋಧನೆಯಲ್ಲಿ ಧಾರೆ ಎರೆಯುತ್ತಾರೆ ಎನ್ನುವುದು ಬಿಜೆಪಿಯ ಪೋಷಕರಾದ ಕಸ್ತೂರಿ ರಂಗನ್ ಸಮಿತಿಯ ಅಭಿಪ್ರಾಯ.

ವಿವಿಯ ಪ್ರಾಧ್ಯಾಪಕರಾಗಿ ನೇಮಕಗೊಂಡವರು ಭಾರತದ ಸಂವಿಧಾನಕ್ಕೆ ಬದ್ಧರಾಗಿ ವಿವಿಯ ಪಠ್ಯಾನುಸಾರವಾಗಿ ವಿದ್ಯಾರ್ಥಿಗಳಿಗೆ ಜಾತ್ಯತೀತ ಮೌಲ್ಯಗಳನ್ನು ಬೆಳೆಸಬೇಕು. ಆದರೆ ಎನ್‌ಇಪಿಯ ನೀತಿ ಅನ್ವಯ ನೇಮಕವಾದವರು ಒಂದು ಸಿದ್ದಾಂತದ ಹಿನ್ನೆಲೆಯಿಂದ ಬಂದವರಾಗಿದ್ದು ಕೇವಲ ಕೋಮು ಭಾವನೆಗಳನ್ನೇ ವಿದ್ಯಾರ್ಥಿಗಳಲ್ಲಿ ತುಂಬುತ್ತಾರೆ. ಇದರಿಂದ ಸಮಾಜದಲ್ಲಿ ಸಾಮಾಜಿಕ ನ್ಯಾಯ ಕೊನೆಗೊಂಡು ಸಾಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ. ಬ್ರಾಹ್ಮಣರು ಬ್ರಾಹ್ಮಣೇತರ ಮೇಲ್ಜಾತಿಗಳು, ವಿಜೃಂಬಿಸುತ್ತಾರೆ. ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳು ಮತ್ತೆ ತುಳಿತಕ್ಕೆ ಒಳಗಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಎನ್‌ಇಪಿ ದೇಶದ ಶೈಕ್ಷಣಿಕ ವ್ಯವಸ್ಥೆಗೆ ಮಾರಕವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...