ಸಮಾನ ಆದಾಯದ ದಂಪತಿ; ಪತ್ನಿಗೆ ಜೀವನಾಂಶ ನಿರಾಕರಿಸಿದ ಸುಪ್ರೀಂ ಕೋರ್ಟ್

Date:

ವಿಚ್ಛೇದನ ಪಡೆದ ದಂಪತಿ ಸಮಾನ ಹುದ್ದೆಯಲ್ಲಿದ್ದು ಸಮಾನವೇತನ ಗಳಿಸುತ್ತಿರುವ ಕಾರಣದಿಂದಾಗಿ ಪತ್ನಿಗೆ ಜೀವನಾಂಶ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪತ್ನಿ ತನ್ನ ಪತಿಯಂತಹ ಹುದ್ದೆಯಲ್ಲಿಯೇ ಇದ್ದು, ಆಕೆಯ ಖರ್ಚನ್ನು ಆಕೆಯ ವೇತನದಲ್ಲೇ ನಿಭಾಯಿಸಬಲ್ಲಳು ಎಂದು ಹೇಳಿ ಜೀವನಾಂಶ ಕೋರಿದ ಮಹಿಳೆಯ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ಅಭಯ್ ಎಸ್‌ ಓಕಾ ಮತ್ತು ಉಜ್ಜಲ್ ಭುಯನ್ ಅವರ ದ್ವಿಸದಸ್ಯ ಪೀಠವು ಈ ತೀರ್ಪನ್ನು ನೀಡಿದೆ. ಸಹಾಯಕ ಪ್ರಾಧ್ಯಾಪಕರೂ ಆಗಿರುವ ಮಹಿಳೆ ತನ್ನ ಪತಿಯಿಂದ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದ್ದರು.

ಇದನ್ನು ಓದಿದ್ದೀರಾ? ಸುಪ್ರೀಂ ಕೋರ್ಟ್‌ | ಬ್ಯಾಲೆಟ್‌ ಪೇಪರ್‌ ಮತದಾನ ಮರುಜಾರಿ ಕೋರಿದ್ದ ಅರ್ಜಿ ವಜಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪತಿ ಮತ್ತು ಪತ್ನಿ ಇಬ್ಬರು ಕೂಡಾ ಸಹಾಯಕ ಪ್ರಾಧ್ಯಾಪಕರು ಆಗಿದ್ದಾರೆ. ಸಮಾನವಾದ ಉದ್ಯೋಗ ಹೊಂದಿದ್ದಾರೆ. ಆದ್ದರಿಂದ ಸಂವಿಧಾನದ ವಿಧಿ 136ರ ಅಡಿಯಲ್ಲಿ ಬರದು. ಆದ್ದರಿಂದಾಗಿ ಈ ಅರ್ಜಿಯನ್ನು ವಜಾಗೊಳಿಸಲಾಗುವುದು” ಎಂದು ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.

ಪತ್ನಿ ತನ್ನಷ್ಟೇ ದುಡಿಯುತ್ತಿರುವ ಕಾರಣದಿಂದಾಗಿ ಜೀವನಾಂಶ ನೀಡಬೇಕಾಗಿಲ್ಲ ಎಂಬುದು ಪತಿಯ ವಾದವಾಗಿತ್ತು. ಅರ್ಜಿಯ ವಿರುದ್ಧ ವಾದ ಮಂಡಿಸಿದ ಪತಿಯ ಪರ ವಕೀಲ ಶಶಾಂಕ್ ಸಿಂಗ್, “ಅವರು ಮಾಸಿಕವಾಗಿ 60 ಸಾವಿರ ರೂಪಾಯಿ ಸಂಪಾದನೆ ಮಾಡುತ್ತಿದ್ದರು. ಇಬ್ಬರೂ ಒಂದೇ ದರ್ಜೆಯ ಹುದ್ದೆಯನ್ನು ಹೊಂದಿದ್ದಾರೆ” ಎಂದು ಪ್ರತಿಪಾದಿಸಿದ್ದಾರೆ.

ಆದರೆ ತನ್ನ ಪತಿ ಮಾಸಿಕವಾಗಿ ಒಂದು ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. ಆದ್ದರಿಂದಾಗಿ ಜೀವನಾಂಶ ನೀಡಬೇಕು ಎಂಬುದು ಪತ್ನಿಯ ವಾದವಾಗಿದೆ. ವೇತನದ ವಿಚಾರದಲ್ಲಿ ವಾದ ನಡೆದ ಕಾರಣ ಸುಪ್ರೀಂ ಕೋರ್ಟ್ ಇಬ್ಬರೂ ತನ್ನ ಪೇ ಸ್ಲಿಪ್ (ಮಾಸಿಕ ವೇತನದ ದಾಖಲೆ) ಸಲ್ಲಿಸುವಂತೆ ತಿಳಿಸಿದೆ.

ಇನ್ನು ಇತ್ತೀಚೆಗೆ ಜೀವನಾಂಶ ಕೋರಿ ಸಲ್ಲಿಸಿದ್ದ ಇನ್ನೊಂದು ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, “ಇಂತಹ ಕಾನೂನು ಮಹಿಳೆಗೆ ಯಾವುದೇ ಆರ್ಥಿಕ ತೊಂದರೆ ಉಂಟಾಗದಿರಲಿ ಎಂಬ ಉದ್ದೇಶವನ್ನು ಹೊಂದಿದೆ. ಪತಿಯಿಂದ ಹಣ ದೋಚಲು ಈ ಕಾನೂನು ಇರುವುದಲ್ಲ” ಎಂದು ಹೇಳಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...