ಚಳಿಯನ್ನು ನೀಗಿಸಲು ಬೆಂಕಿ ಬಳಿ ಮಲಗಿದ್ದ ದಂಪತಿಗಳು ಉಸಿರುಗಟ್ಟಿ ಸಾವು

Date:

ತೀವ್ರ ಚಳಿಯನ್ನು ನಿಭಾಯಿಸಲು ‘ಅಗ್ಗಿಸ್ಟಿಕೆ’ಗೆ (ಮನೆಯಲ್ಲಿ ಬೆಂಕಿ ಉರಿಸುವ ಬಾಣಲೆ) ಬೆಂಕಿ ಹೊತ್ತಿಸಿ, ಅದರ ಬಳಿ ಮಲಗಿದ್ದ ದಂಪತಿಗಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ಭಿಲಂಗಣ ಪ್ರದೇಶದಲ್ಲಿ ನಡೆದಿದೆ.

ಭಿಲಂಗಣ ಪ್ರದೇಶದ ದ್ವಾರಿ-ಥಪ್ಲಾ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದಂಪತಿಗಳಾದ ಮದನ್ ಮೋಹನ್ ಸೆಮ್ವಾಲ್ (52) ಮತ್ತು ಅವರ ಪತ್ನಿ ಯಶೋದಾ ದೇವಿ (48) ಮದುವೆ ಸಮಾರಂಭದಲ್ಲಿ ಭಾಗವಹಿಸಲು ಗ್ರಾಮಕ್ಕೆ ಬಂದಿದ್ದರು. ತೀವ್ರ ಚಳಿಯಿದ್ದ ಕಾರಣ ಅಗ್ಗಿಸ್ಟಿಕೆ ಹೊತ್ತಿಸಿ, ಅದನ್ನು ತಮ್ಮ ಕೋಣೆಯೊಳಗೆ ಇಟ್ಟುಕೊಂಡು, ಬಾಗಿಲು-ಕಿಟಕಿಗಳನ್ನು ಮುಚ್ಚಿ ಮಲಗಿದ್ದರು. ಬೆಂಕಿಯ ಹೊಗೆ ಹೊರಹೋಗದ ಮತ್ತು ಶುದ್ಧ ಗಾಳಿ ಬಾರದ ಕಾರಣ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ದ್ವಾರಿ-ಥಪ್ಲಾ ಗ್ರಾಮ ಆಡಳಿತಾಧಿಕಾರಿ ರಿಂಕಿ ದೇವಿ ತಿಳಿಸಿದ್ದಾರೆ.

ಮಾರನೆ ದಿನ ಬಳಗ್ಗೆ ಅವರನ್ನು ಎಬ್ಬಿಸಲು ಅವರ ಮಗ ಹೋಗಿದ್ದಾರೆ. ಆದರೆ, ಅವರು ಬಾಗಿಲು ತೆರೆಯಲಿಲ್ಲ. ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಸ್ಥಳೀಯರು ಬಾಗಿಲು ಒಡೆದು ನೋಡಿದಾಗ, ದಂಪತಿಗಳು ಹಾಸಿಗೆಯಲ್ಲಿಯೇ ಮೃತಪಟ್ಟಿರುವುದು ಕಂಡುಬಂದಿದೆ. ಅಗ್ಗಿಸ್ಟಿಕೆ ಹೊಗೆಯಿಂದ ಉತ್ಪತ್ತಿಯಾಗುವ ಕಾರ್ಬನ್ ಮಾನಾಕ್ಸೈಡ್ ಅನಿಲದಿಂದಾಗಿ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ರಿಂಕಿ ದೇವಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...