ಆರ್‌ಜಿ ಕರ್ ಅತ್ಯಾಚಾರ- ಕೊಲೆ ಪ್ರಕರಣ | ಆರೋಪಿ ಸಂಜಯ್ ರಾಯ್ ತಪಿತಸ್ಥ; ಕೋರ್ಟ್ ಘೋಷಣೆ

Date:

ಕಳೆದ ವರ್ಷ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೀಲ್ಡಾ ನ್ಯಾಯಾಲಯವು ಆರೋಪಿ ಸಂಜಯ್ ರಾಯ್ ತಪ್ಪಿತಸ್ಥನೆಂದು ಘೋಷಿಸಿದೆ.

ಕಳೆದ ವರ್ಷ ಆಗಸ್ಟ್‌ 9ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಿನಾರ್ ಕೊಠಡಿಯಲ್ಲಿ ವೈದ್ಯೆಯ ಶವ ಪತ್ತೆಯಾಗಿತ್ತು. ತನಿಖೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ನಡೆದಿರುವುದು ತಿಳಿದುಬಂದಿತ್ತು. ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದೆ.

ಇದನ್ನು ಓದಿದ್ದೀರಾ? ಆರ್‌ಜಿ ಕರ್ ಪ್ರತಿಭಟನೆ | ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಆದೇಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರ ಪೊಲೀಸ್‌ನಲ್ಲಿ ನಾಗರಿಕ ಸ್ವಯಂಸೇವಕರಾಗಿರುವ ಸಂಜಯ್ ರಾಯ್ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಕೋಲ್ಕತ್ತಾದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದೇಶದಾದ್ಯಂತ ವೈದ್ಯರು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿತ್ತು.

ಕೋಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಸಿಬಿಐ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಆರ್ಥಿಕ ಅಕ್ರಮಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿತ್ತು. ಆರೋಪಪಟ್ಟಿಯಲ್ಲಿ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಡಾ. ಆಶಿಶ್ ಕುಮಾರ್ ಪಾಂಡೆ, ವಿಪ್ಲಬ್ ಸಿಂಘಾ, ಸುಮನ್ ಹಜ್ರಾ ಮತ್ತು ಅಫ್ಸರ್ ಅಲಿ ಖಾನ್ ಸೇರಿದಂತೆ ಹಲವು ಮಂದಿಯ ಹೆಸರುಗಳು ಉಲ್ಲೇಖಿಸಲಾಗಿತ್ತು.

ಇದನ್ನು ಓದಿದ್ದೀರಾ? ಕೋಲ್ಕತ್ತಾ ಆರ್‌ಜಿ ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲರ ಮನೆ ಮೇಲೆ ಇಡಿ ದಾಳಿ

ಇನ್ನು ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಸಂಜಯ್ ರಾವ್ ಅವರನ್ನು ಆರೋಪಿ ಎಂದು ಹೇಳಿತ್ತು. ಹಾಗೆಯೇ ಸಿಬಿಐ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಸಂಜಯ್ ರಾವ್ ಅನ್ನು ತಪ್ಪಿತಸ್ಥ ಎಂದು ಘೋಷಿಸಿದೆ. ಹಾಗೆಯೇ ಜನವರಿ 20ರಂದು ಶಿಕ್ಷೆ ಘೋಷಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...