ಕೇರಳ ಚುನಾವಣೆ | CPIM ನಾಯಕರಲ್ಲಿ ಅಸಮಾಧಾನ: ಸ್ವತಂತ್ರ ಅಭ್ಯರ್ಥಿಯಾಗಿ ಜಿ ಸುಧಾಕರನ್ ಸ್ಪರ್ಧೆ

Date:

ಕೇರಳದಲ್ಲಿ ಇನ್ನೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ನಡುವೆ ಸಿಪಿಐಎಂ ನಾಯಕರುಗಳಲ್ಲಿ ಅಸಮಾಧಾನ ಕಂಡುಬಂದಿದೆ. ಸಿಪಿಐ(ಎಂ) ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಜಿ. ಸುಧಾಕರನ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ ಅಂಬಲಪ್ಪುಳದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.

ಎರಡು ಬಾರಿ ಸಚಿವರಾಗಿ ಮತ್ತು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸುಧಾಕರನ್, ರಾಜ್ಯ ಕಾರ್ಯದರ್ಶಿ ಎಂ. ವಿ. ಗೋವಿಂದನ್ ಸೇರಿದಂತೆ ಪಕ್ಷದ ನಾಯಕರು ತಮ್ಮನ್ನು ‘ನಿರ್ಲಕ್ಷ್ಯ’ ಮಾಡುತ್ತಿದ್ದಾರೆ ಎಂದು ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿರುವ ಸುಧಾಕರನ್, “ಪಕ್ಷದಲ್ಲಿ ಯಾರಿಗೂ ಅನಾನುಕೂಲವಾಗಲು ಬಯಸುವುದಿಲ್ಲ. ಆದ್ದರಿಂದ ಪಕ್ಷವನ್ನು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ” ಎಂದು ಗುರುವಾರ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿರಿಯ ನಾಯಕರ ನಿರ್ಲಕ್ಷ್ಯ; ಕೇರಳ ಚುನಾವಣೆಗೂ ಮುನ್ನ ಬಂಡಾಯ ಸಿಪಿಐಎಂಗೆ ದುಬಾರಿಯಾಗುವುದೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ಆರೋಗ್ಯ ಸಚಿವೆ ಕೆ. ಕೆ. ಶೈಲಜಾ ಅವರಂತಹ ಅನೇಕ ಜನಪ್ರಿಯ ನಾಯಕರನ್ನು ಬದಿಗಿಡುವ ಪ್ರಯತ್ನಗಳ ಬಗ್ಗೆ ಸಿಪಿಐಎಂನಲ್ಲಿ ಈಗಾಗಲೇ ಅಸಮಾಧಾನ ಉಂಟಾಗಿದೆ. ಈ ಬೆಳವಣಿಗೆಗಳು ಚುನಾವಣೆ ವೇಳೆ ಸಿಪಿಐಎಂಗೆ ಭಾರೀ ಹೊಡೆತ ನೀಡುವ ಸಾಧ್ಯತೆಯಿದೆ. ಸುಧಾಕರನ್ ಅವರಿಗೆ ಕಾಂಗ್ರೆಸ್ ಬೆಂಬಲ ನೀಡಬಹುದು ಎಂಬ ವದಂತಿಗಳೂ ಹರಿದಾಡುತ್ತಿದೆ. ಆದರೆ ಸುಧಾಕರನ್ ತಮಗೆ ಈವರೆಗೆ ಯಾರೂ ಬೆಂಬಲ ನೀಡಿಲ್ಲ ಮತ್ತು ಅಂತಹ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.

“ಪಕ್ಷದ ಅನೇಕ ಕಿರಿಯ ಸದಸ್ಯರು ನನ್ನ ಮೇಲೆ ವೈಯಕ್ತಿಕವಾಗಿ ದಾಳಿ ನಡೆಸಿದ್ದರೂ ಸಹ ಕಮ್ಯುನಿಸ್ಟ್ ಪಕ್ಷ ಅಥವಾ ಯಾರನ್ನೂ ವೈಯಕ್ತಿಕವಾಗಿ ಟೀಕಿಸಲು ಬಯಸುವುದಿಲ್ಲ” ಎಂದೂ ಹೇಳಿದ್ದಾರೆ.

“ಹಿರಿಯ ಸದಸ್ಯರೊಬ್ಬರು ಇಂತಹ ನಿರ್ಧಾರ ತೆಗೆದುಕೊಂಡಿರುವುದು ದುರದೃಷ್ಟಕರ” ಎಂದು ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಎಂಎ ಬೇಬಿ ಹೇಳಿದ್ದಾರೆ. “ನಾನು ಸೇರಿದಂತೆ ಅನೇಕ ಪಕ್ಷದ ನಾಯಕರು ಸುಧಾಕರನ್ ಅವರೊಂದಿಗೆ ಮಾತುಕತೆ ನಡೆಸಿದ್ದೇವೆ” ಎಂದಿದ್ದಾರೆ.

ಸಿಪಿಐಎಂ ನಾಯಕ ಜಿ ಸುಧಾಕರನ್ ಯಾರು?

79 ವರ್ಷ ವಯಸ್ಸಿನ ಸುಧಾಕರನ್ 1946ರ ನವೆಂಬರ್ 1ರಂದು ಕೇರಳದ ಆಲಪ್ಪುಳ ಜಿಲ್ಲೆಯ ಮಾವೇಲಿಕ್ಕರದ ವೇದರಾಪ್ಲವು ಎಂಬಲ್ಲಿ ಜನಿಸಿದ್ದು, ಎಂ.ಎ. (M.A.) ಮತ್ತು ಎಲ್.ಎಲ್.ಬಿ. (LL.B) ಪದವಿಗಳನ್ನು ಪಡೆದಿದ್ದಾರೆ. ವಿದ್ಯಾರ್ಥಿಯಾಗಿರುವಾಗಲೇ ರಾಜಕೀಯದೆಡೆ ಆಕರ್ಷಿತರಾದ ಸುಧಾಕರನ್ ಅವರು, 1967ರಲ್ಲಿ ಸಿಪಿಐಎಂ ಪಕ್ಷವನ್ನು ಸೇರಿದರು. ಎಸ್‌ಎಫ್‌ಐ ವಿದ್ಯಾರ್ಥಿ ಸಂಘಟನೆಯ ಸ್ಥಾಪಕ ಸದಸ್ಯರಲ್ಲಿ ಇವರೂ ಒಬ್ಬರು.

ಇದನ್ನು ಓದಿದ್ದೀರಾ? ಕೇರಳ ಚುನಾವಣೆ | ಸಿಪಿಐಎಂನಲ್ಲಿ ಬಿಕ್ಕಟ್ಟು; ಮಾಜಿ ಶಾಸಕ ಪಿಕೆ ಸಸಿ ಉಚ್ಚಾಟನೆ

ಸುಧಾಕರನ್, ಮಾಜಿ ಮುಖ್ಯಮಂತ್ರಿ ವಿ.ಎಸ್. ಅಚ್ಯುತಾನಂದನ್ ಕಟ್ಟಾ ಬೆಂಬಲಿಗರು. 1977ರಲ್ಲಿ ಕಾಂಗ್ರೆಸ್ ವಿದ್ಯಾರ್ಥಿ ಕಾರ್ಯಕರ್ತರನ್ನು ಒಳಗೊಂಡ ರಾಜಕೀಯ ಹಿಂಸಾಚಾರದಲ್ಲಿ ಸುಧಾಕರನ್ ಅವರ ಸಹೋದರ ಭುವನೇಶ್ವರನ್ ಹತ್ಯೆಗೀಡಾಗಿದ್ದಾರೆ. ಸುಧಾಕರನ್ ಸುಮಾರು 63 ವರ್ಷಗಳ ಕಾಲ ಕಮ್ಯುನಿಸ್ಟ್ ಚಳವಳಿಯಲ್ಲಿ ಸಕ್ರಿಯರಾಗಿದ್ದಾರೆ.

1996ರಲ್ಲಿ ಮೊದಲು ಆಲಪ್ಪುಳದ ಕಾಯಂಕುಲಂನಿಂದ ಶಾಸಕರಾಗಿ ಆಯ್ಕೆಯಾಗಿದ್ದು, 2006ರಲ್ಲಿ 11,929 ಮತಗಳ ಅಂತರದಿಂದ ಗೆದ್ದಿದ್ದರೆ, 2011ರಲ್ಲಿ ಅವರ ಅಂತರ 16,580 ಕ್ಕೆ ಏರಿತು. ಅದಾದ ಬಳಿಕ 2016ರಲ್ಲಿ ಅಂತರ 22,621ಕ್ಕೆ ಏರಿದೆ. 2021ರ ಚುನಾವಣೆಯಲ್ಲಿ ಅಂಬಲಪ್ಪುಳದಲ್ಲಿ ಸಿಪಿಐಎಂ ಅಭ್ಯರ್ಥಿ ಎಚ್. ಸಲಾಂ ಅವರ ಗೆಲುವಿನ ಅಂತರ 11,125ಕ್ಕೆ ಇಳಿದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...