ಸಿಪಿಐಎಂ ಹಿರಿಯ ನೇತಾರ, ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಇನ್ನಿಲ್ಲ

Date:

ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಹಿರಿಯ ನೇತಾರ, ಸಿಪಿಐಎಂನ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸೀತಾರಾಮ್ ಯೆಚೂರಿ ಗುರುವಾರ ನಿಧನರಾಗಿದ್ದಾರೆ. ಅವರ ಕುಟುಂಬವು ಪಾರ್ಥಿವ ಶರೀರವನ್ನು ಏಮ್ಸ್ ಆಸ್ಪತ್ರೆಗೆ ದಾನ ಮಾಡಿದೆ ಎಂದು ಸಿಪಿಐಎಂ ತಿಳಿಸಿದೆ.

ನ್ಯುಮೋನಿಯಾ ರೀತಿಯ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನು ಆಗಸ್ಟ್ 19ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಗೆ ದಾಖಲಿಸಲಾಗಿತ್ತು.

72 ವರ್ಷದ ಯೆಚೂರಿ ಅವರ ಸ್ಥಿತಿ ಗಂಭೀರವಾಗಿದೆ ಮತ್ತು ಅವರು ದೆಹಲಿಯ ಏಮ್ಸ್‌ನಲ್ಲಿ ಆಕ್ಸಿಜನ್ ಬೆಂಬಲದಲ್ಲಿದ್ದಾರೆ ಎಂದು ಸಿಪಿಐಎಂ ಮಂಗಳವಾರ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಸ್ಥಿತಿ ಗಂಭೀರ

1952ರ ಆಗಸ್ಟ್ 12ರಂದು ಚೆನ್ನೈನಲ್ಲಿ ಜನಿಸಿದ ಯೆಚೂರಿ, ಬಳಿಕ 1969ರ ತೆಲಂಗಾಣ ಆಂದೋಲನದ ಬಳಿಕ ದೆಹಲಿಗೆ ತೆರಳಿದರು. ಯೆಚೂರಿ ಹತ್ತನೇ ತರಗತಿಯವರೆಗೆ ಹೈದರಾಬಾದ್‌ನ ಆಲ್ ಸೇಂಟ್ಸ್ ಹೈಸ್ಕೂಲ್‌ನಲ್ಲಿ ಅಧ್ಯಯನ ಮಾಡಿದ್ದು, ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಲ್ಲಿ ಅರ್ಥಶಾಸ್ತ್ರದಲ್ಲಿ ಬಿಎ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಎಂಎ ಪದವಿ ಪಡೆದರು.

ಬಳಿಕ ಯೆಚೂರಿ ಅರ್ಥಶಾಸ್ತ್ರದಲ್ಲಿ ಪಿಎಚ್‌ಡಿ ಮಾಡಲು ಜೆಎನ್‌ಯು ಸೇರಿದ್ದು ತುರ್ತುಪರಿಸ್ಥಿತಿಯ ಸಮಯದಲ್ಲಿ ಅವರ ಬಂಧನವಾದ ಬಳಿಕ ವಿದ್ಯಾಭ್ಯಾಸ ಮೊಟಕುಗೊಳಿಸಿದರು. ಕಮ್ಯೂನಿಸ್ಟ್ ನಾಯಕ ಪ್ರಕಾಶ್ ಕಾರಟ್ ಜೊತೆ ಸೇರಿ ಜೆಎನ್‌ಯುವಿನಲ್ಲಿ ಎಡಪಂಥೀಯ ಭದ್ರಕೋಟೆಯನ್ನು ರಚಿಸುವಲ್ಲಿ ಯೆಚೂರಿ ಪ್ರಮುಖ ಪಾತ್ರ ವಹಿಸಿದ್ದರು.

1974ರಲ್ಲಿ ಎಸ್‌ಎಫ್‌ಐ ಮೂಲಕ ವಿದ್ಯಾರ್ಥಿ ಚಳುವಳಿಗೆ ಧುಮುಕಿದ ಯೆಚೂರಿ ಅವರ ರಾಜಕೀಯ ಜೀವನವು ಇದಾದ ಒಂದೇ ವರ್ಷದಲ್ಲಿ ಆರಂಭವಾಗಿದೆ.

2005ರಿಂದ 2017ರವರೆಗೆ ಪಶ್ಚಿಮ ಬಂಗಾಳದಲ್ಲಿ ಸಂಸದ ಮತ್ತು ರಾಜ್ಯಸಭಾ ಸದಸ್ಯರಾಗಿದ್ದರು. 2022ರಲ್ಲಿ ಸತತ ಮೂರನೇ ಬಾರಿಗೆ ಸಿಪಿಐಎಂ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದರು.

ಮೋದಿ ಗವರ್ನ್‌ಮೆಂಟ್: ನ್ಯೂ ಸರ್ಜ್ ಆಫ್ ಕಮ್ಯೂನಲಿಸಂ, ಗ್ಲೋಬಲ್ ಎಕಾನಮಿಕ್ ಕ್ರೈಸಿಸ್: ಮಾರ್ಕ್ಸಿಸ್ಟ್ ಪರ್ಸ್‌ಪೆಕ್ಟಿವ್, ವಾಟ್ ಇಸ್ ಹಿಂದೂ ರಾಷ್ಟ್ರ ಸೇರಿದಂತೆ ಹಲವಾರು ಪುಸ್ತಕಗಳನ್ನು ಕಾಮ್ರೇಡ್ ಸೀತಾರಾಮ್ ಯೆಚೂರಿ ಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...