ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

Date:

ಕೇರಳದ ಸಿಪಿಐಎಂ ರಾಜ್ಯಸಭಾ ಸಂಸದ ವಿ ಶಿವದಾಸನ್ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್‌ ಅವರಿಗೆ ಪತ್ರ ಬರೆದಿದ್ದು, ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ತಮಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿಸಿದ್ದಾರೆ.

ಗುರ್ಪತ್‌ವಂತ್ ಸಿಂಗ್ ಪನ್ನುನ್ ನೇತೃತ್ವದ ಸಂಘಟನೆಯು ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಸಂದೇಶದೊಂದಿಗೆ ಭಾರತೀಯ ಸಂಸತ್ತಿನಿಂದ ಕೆಂಪು ಕೋಟೆ ಪ್ರದೇಶದವರೆಗೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಶಿವದಾಸನ್ ಅವರು ಧನಕರ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಲಾಂಜ್‌ನಲ್ಲಿರುವಾಗ ರಾಜ್ಯಸಭಾ ಸಂಸದರಿಗೆ ಕರೆ ಬಂದಿದೆ. ಕೆಲವೇ ನಿಮಿಷಗಳ ಹಿಂದೆ ಸಂಸದ ಎಎ ರಹೀಮ್‌ ಅವರಿಗೂ ಕರೆ ಬಂದಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಶಿವದಾಸನ್ ಅವರು ಈಗಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಜುಲೈ 23 ರಂದು ಬಜೆಟ್ ಮಂಡಿಸುವುದರೊಂದಿಗೆ ಆಗಸ್ಟ್ 12 ರವರೆಗೆ ನಡೆಯಲಿದೆ.

ಈ ನಡುವೆ ಅಧಿವೇಶನದಲ್ಲಿ ನೀಟ್‌–ಯುಜಿ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ, ಕನ್ವರ್ ಯಾತ್ರೆಗೆ ಸಂಬಂಧಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶ ಸೇರಿದಂತೆ ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...