ನಿಷೇಧದ ನಡುವೆಯೂ ಪಟಾಕಿ ಸಿಡಿಸಿದ ಜನತೆ: ವಿಶ್ವದ ಅತ್ಯಂತ ಕಲುಷಿತ ನಗರವಾದ ದೆಹಲಿ

Date:

ನಿಷೇಧ ನಡುವೆಯು ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ(ನವೆಂಬರ್ 1) ಬೆಳಗ್ಗೆ 6 ಗಂಟೆಗೆ ಗಾಳಿ ಗುಣಮಟ್ಟ ಸೂಚ್ಯಂಕ 359 ದಾಖಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಇದು ʻಅತ್ಯಂತ ಕಳಪೆʼ ವಿಭಾಗಕ್ಕೆ ಸೇರಿದ್ದು ಈ ಮೂಲಕ ದೆಹಲಿ ವಿಶ್ವದ ಅತ್ಯಂತ ಕಲುಷಿತ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.

ಲಜಪತ್ ನಗರ್, ಕಲ್ಕಾಜಿ, ಛತ್ತರ್‌ಪುರ, ಜೌನಾಪುರ್, ಕೈಲಾಶ್ ಪೂರ್ವ, ಸಾಕೇತ್, ರೋಹಿಣಿ, ದ್ವಾರಕಾ, ಪಂಜಾಬಿ ಬಾಗ್, ವಿಕಾಸಪುರಿ, ದಿಲ್ಶಾದ್ ಗಾರ್ಡನ್, ಬುರಾರಿ ಮತ್ತು ಪೂರ್ವ ಮತ್ತು ಪಶ್ಚಿಮ ದೆಹಲಿಯ ಹಲವಾರು ಪ್ರದೇಶಗಳಲ್ಲಿ ಪಟಾಕಿಗಳನ್ನು ಸಿಡಿಸಲಾಗಿದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿದೆ.

ಬೆಳಿಗ್ಗೆ 6 ಗಂಟೆಗೆ, ಬುರಾರಿ ಕ್ರಾಸಿಂಗ್ (394), ಜಹಾಂಗೀರ್‌ಪುರಿ (387), ಆರ್‌ಕೆ ಪುರಂ (395), ರೋಹಿಣಿ (385), ಅಶೋಕ್ ವಿಹಾರ್ (384), ದ್ವಾರಕಾ ಸೆಕ್ಟರ್ 8 (375), ಐಜಿಐ ವಿಮಾನ ನಿಲ್ದಾಣ (375), ಮಂದಿರ ಮಾರ್ಗ ( 369), ಪಂಜಾಬಿ ಬಾಗ್ (391), ಆನಂದ್ ವಿಹಾರ್ (395), ಸಿರಿ ಫೋರ್ಟ್ (373) ಮತ್ತು ಸೋನಿಯಾ ವಿಹಾರ್ (392) ಗಾಳಿಯ ಗುಣಮಟ್ಟ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಲೆಕೇರಿ ಬಹುಕೋಟಿ ಹಗರಣದತ್ತ ಮಾಧ್ಯಮಗಳ ಮೌನವೇಕೆ? 

ಎನ್‌ಸಿಆರ್ ಪ್ರದೇಶಗಳಾದ ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಕ್ರಮವಾಗಿ 293, 316 ಮತ್ತು 348 ಎಕ್ಯೂಐ ಮಟ್ಟವನ್ನು ದಾಖಲಿಸಿವೆ. ಅಕ್ಟೋಬರ್ 14 ರಂದು, ದೆಹಲಿ ಸರ್ಕಾರವು ನಗರದಾದ್ಯಂತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯ ಮೇಲೆ ನಿಷೇಧವನ್ನು ವಿಧಿಸಿತು. ಅದಾಗ್ಯೂ ಜನರು ಅಧಿಕ ಪ್ರಮಾಣ ಪಟಾಕಿ ಸಿಡಿಸಿದ್ದಾರೆ.

ದೀಪಾವಳಿ ಮುನ್ನಾದಿನದಂದು ದೆಹಲಿಯ ಪರಿಸರ ಸಚಿವ ಗೋಪಾಲ್ ರೈ ಅವರು ರಾಷ್ಟ್ರ ರಾಜಧಾನಿಯಾದ್ಯಂತ ಪಟಾಕಿ ನಿಷೇಧ ಜಾರಿಗೊಳಿಸಲು 377 ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ್ದರು. ಜಾಗೃತಿ ಮೂಡಿಸಲು ಅಧಿಕಾರಿಗಳು ಸಂಘಸಂಸ್ಥೆಗಳು, ಮಾರುಕಟ್ಟೆ ಸಂಘಗಳು ಮತ್ತು ಸಾಮಾಜಿಕ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಅವರು ಹೇಳಿದ್ದರು. ಪಟಾಕಿ ಸಿಡಿಸದಂತೆ ನೋಡಿಕೊಳ್ಳಲು ಪೊಲೀಸ್ ತಂಡಗಳನ್ನೂ ರಚಿಸಲಾಗಿತ್ತು.

ಪಟಾಕಿಗಳನ್ನು ಸಿಡಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಯ ಸಂಬಂಧಿತ ವಿಭಾಗಗಳ ಅಡಿಯಲ್ಲಿಯೂ ದಾಖಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದರು‌. ಆದರೂ ಪಟಾಕಿಗಳನ್ನು ಸಿಡಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...