200 ಸ್ಥಾನ ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಸವಾಲು

Date:

ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400 ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.

ಬಿಜೆಪಿ 400 ದಾಟುತ್ತೇವೆ ಎನ್ನುತ್ತಿದ್ದಾರೆ. ಮೊದಲು ಅವರು ಇನ್ನೂರನ್ನು ದಾಟಲಿ. 2021ರ ವಿಧಾನಸಭೆ ಚುನಾವಣೆಯಲ್ಲಿ ಅವರು 200ಕ್ಕೂ ಹೆಚ್ಚು ಸ್ತಾನ ಗೆಲ್ಲುತ್ತೇವೆ ಎಂದು ಹೇಳಿಕೊಂಡಿದ್ದರು. ಗೆದ್ದಿದ್ದು ಕೇವಲ 77 ಕ್ಷೇತ್ರಗಳನ್ನು ಮಾತ್ರ. ಗೆದ್ದ 77 ಶಾಸಕರಲ್ಲಿ ಹಲವರು ಈಗ ನಮ್ಮೊಂದಿಗಿದ್ದಾರೆ ಎಂದು ಮಮತಾ ಅಣಕವಾಡಿದರು.

ಕೃಷ್ಣಾನಗರದಲ್ಲಿ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರ ಪರವಾಗಿ ಪ್ರಚಾರ ನಡೆಸಿದ ಮಮತಾ ಬ್ಯಾನರ್ಜಿ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರಾಜ್ಯದಲ್ಲಿ ಅನುಷ್ಠಾನಗೊಳಿಸುವುದಿಲ್ಲ ಎಂದು ಮತ್ತೊಮ್ಮೆ ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಬಿಜೆಪಿ ಒಂದು ʻಜುಮ್ಲಾ ಪಕ್ಷ’ ಎಂದು ಬಣ್ಣಿಸಿದ ಅವರು ಬಿಜೆಪಿಯವರು ಸುಳ್ಳುಕೋರರು. ವಿದೇಶಿ ವಲಸೆಕೋರರಿಗೆ ಪೌರತ್ವ ನೀಡುವ ಹುನ್ನಾರ ಸಿಎಎ ಮೂಲಕ ನಡೆಸಲು ಹೊರಡಲಾಗಿದೆ. ಸಿಎಎ ಬೆನ್ನಲ್ಲೇ ಅವರು ಎನ್‌ ಆರ್‌ ಸಿಯನ್ನು ತರುತ್ತಾರೆ. ನಾವು ಸಿಎಎ ಆಗಲಿ ಎನ್‌ಆರ್‌ಸಿಯನ್ನಾಗಲಿ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದರು.

ಮಥುವಾ ಸಮುದಾಯಕ್ಕೆ ಭರವಸೆ ನೀಡಿದ ಮಮತಾ ಬ್ಯಾನರ್ಜಿ, ನಿಮ್ಮ ಪೌರತ್ವವನ್ನು ಕಿತ್ತುಕೊಳ್ಳಲು ನಾನು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಮಥುವಾ ಸಮುದಾಯ ಪೂರ್ವ ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ ಧರ್ಮದ ದುರ್ಬಲ ವರ್ಗಕ್ಕೆ ಸೇರಿದೆ.

ಬಿಜೆಪಿ ವಿರುದ್ಧದ ಸಂಘರ್ಷಕ್ಕಾಗಿ ಅಭ್ಯರ್ಥಿ ಮಹುವಾ ಮೋಯಿತ್ರಾ ಅವರನ್ನು ಶ್ಲಾಘಿಸಿದ ಅವರು, ನೀವು ಮಹುವಾ ಅವರನ್ನು ಗೆಲ್ಲಿಸಿ ಕಳುಹಿಸಿದರೂ ಅವರನ್ನು ಲೋಕಸಭೆಯಿಂದ ಅನ್ಯಾಯವಾಗಿ ಉಚ್ಚಾಟಿಸಲಾಯಿತು. ಬಿಜೆಪಿ ವಿರುದ್ಧ ಯಾವ ಹಿಂಜರಿಕೆ ಇಲ್ಲದೆ ವಾಗ್ದಾಳಿ ನಡೆಸಿದ್ದಕ್ಕಾಗಿ ಹೀಗೆ ಮಾಡಲಾಯಿತು. ಈಗ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳಿಸುವ ಜವಾಬ್ದಾರಿ ನಮ್ಮದು ಎಂದು ಮಮತಾ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...