ಕಚ್ಚಾ ತೈಲದ ಬೆಲೆಗಳು ತಗ್ಗುತ್ತಿದ್ದರೂ ಜನರನ್ನು ಲೂಟಿ ಮಾಡುತ್ತಿರುವ ಮೋದಿ ಸರ್ಕಾರ: ಮಲ್ಲಿಕಾರ್ಜುನ ಖರ್ಗೆ

Date:

ಜಾಗತಿಕವಾಗಿ ಕಚ್ಚಾ ತೈಲದ ಬೆಲೆಗಳು ತಗ್ಗುತ್ತಿದ್ದರೂ ಮೋದಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಕಡಿಮೆಗೊಳಿಸದೆ ದೇಶದ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಖರ್ಗೆ, ಕಳೆದ 19 ತಿಂಗಳಿನಿಂದ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಗಳು ಶೇ.31 ರಷ್ಟು ತಗ್ಗಿದ್ದರೂ ಸಚಿವರು ಮಾತ್ರ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳನ್ನು ಇಳಿಸುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

“ಕಚ್ಚಾ ತೈಲದ ಬೆಲೆಗಳು ಕಡಿಮೆಯಾಗುತ್ತಲೇ ಇದೆ, ಆದರೆ ಮೋದಿ ಸರ್ಕಾರ ಲೂಟಿ ಮಾಡುವುದನ್ನು ಮಾತ್ರ ನಿಯಂತ್ರಿಸುತ್ತಿಲ್ಲ. ಬೆಲೆ ಇಳಿಸುವ ಬಗ್ಗೆ ತೈಲ ಕಂಪನಿಗಳ ಜೊತೆ ಯಾವುದೇ ಮಾತುಕತೆಯಿಲ್ಲ ಎಂದು ಸ್ವತಃ ಮೋದಿ ಸಂಪುಟದ ಮಂತ್ರಿಗಳೇ ಹೇಳುತ್ತಾರೆ. ತೈಲ ಕಂಪನಿಗಳು ಸಾರ್ವಜನಿಕರಿಂದ ಪ್ರತಿ ಒಂದು ಲೀಟರ್‌ ಪೆಟ್ರೋಲ್‌ನಿಂದ 8 ರಿಂದ 10 ರೂ ಹಾಗೂ ಪ್ರತಿ ಲೀಟರ್‌ ಡೀಸೆಲ್‌ನಿಂದ 3 ರಿಂದ 4 ರೂಪಾಯಿ ಲಾಭ ಗಳಿಸುತ್ತಿವೆ” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 50 ವರ್ಷಗಳಲ್ಲಿ ಸಾರ್ವಜನಿಕರ ಉಳಿತಾಯ ಖಾತೆಯು ಅತೀ ಕಡಿಮೆಗೆ ಇಳಿದಿರುವುದನ್ನು ದೇಶ ನೋಡುತ್ತಿದೆ. ಬಿಜೆಪಿಯ ‘ಅಚ್ಚೆ ದಿನ’ದ ಸುಳ್ಳು ಭಾಷಣಗಳು ಜಾಹೀರಾತುಗಳಲ್ಲಿ ಮಾತ್ರ ರಾರಾಜಿಸುತ್ತಿವೆ” ಎಂದು ಖರ್ಗೆ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

ಇನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆಯಲ್ಲಿ ಭಾರೀ ಏರಿಳಿತ ಉಂಟಾಗಿ ದೇಶದಲ್ಲಿಯೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆಯಾಗಬಹುದು ಎನ್ನುವ ಸುದ್ದಿ ಹರಿದಾಡುತ್ತಿತ್ತು. ಆದರೆ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದಿಪ್ ಸಿಂಗ್ ಪುರಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ದೇಶದಲ್ಲಿ ಸದ್ಯಕ್ಕೆ ತೈಲ ಬೆಲೆ ಇಳಿಕೆ ಮಾಡುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ.

ಈ ಹಿಂದೆ ಕಚ್ಛಾ ತೈಲ ಬೆಲೆ ವಿಪರೀತ ಏರಿಕೆ ಕಂಡಿದ್ದಾಗ ತೈಲ ಮಾರುಕಟ್ಟೆ ಕಂಪನಿಗಳು ಭಾರೀ ನಷ್ಟ ಅನುಭವಿಸಿದ್ದವು. ಕಚ್ಛಾ ತೈಲ ಬೆಲೆ ಬೇಡಿಕೆಗೆ ಅನುಗುಣವಾಗಿ ಏರಿಳಿತ ಕಾಣುತ್ತದೆ. ಕೆಲವು ಅಂತಾರಾಷ್ಟ್ರೀಯ ವಿದ್ಯಮಾನಗಳೂ ತೈಲ ಬೆಲೆ ಏರಿಳಿತಕ್ಕೆ ಕಾರಣ ಆಗುತ್ತದೆ. ಹೀಗಾಗಿ ಈ ಲೆಕ್ಕಾಚಾರವನ್ನು ಆಧರಿಸಿ ಪೆಟ್ರೋಲ್ ಹಾಗೂ ಡೀಸೆಲ್ ದರ ಕೆಲ ದಿನಗಳ ಮಟ್ಟಿಗೆ ಇಳಿಕೆ ಮಾಡಲು ಆಗುವುದಿಲ್ಲ. ಸದ್ಯದ ಮಟ್ಟಿಗೆ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಳಿತ ಕಂಡು ಬರುತ್ತಿದೆ. ಹೀಗಾಗಿ ತೈಲ ಮಾರುಕಟ್ಟೆ ಕಂಪನಿಗಳು ತೈಲ ಬೆಲೆ ಇಳಿಕೆ ಸಂಬಂಧ ಯಾವುದೇ ಚರ್ಚೆ ನಡೆಸಿಲ್ಲ ಎಂದು ಕೇಂದ್ರ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...