ಯುಪಿದಲ್ಲಿ ಮತ್ತೊಂದು ಕಸ್ಟಡಿ ಕೊಲೆ ಆರೋಪ; ದಿನಗೂಲಿ ಕಾರ್ಮಿಕನನ್ನು ಹೊಡೆದು ಕೊಂದ ಪೊಲೀಸರು

Date:

ಪೊಲೀಸ್‌ ರಾಜ್ಯವೆಂಬ ಕುಖ್ಯಾತಿಯ ಹಣೆಪಟ್ಟಿ ಕಟ್ಟಿಕೊಂಡಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಕಸ್ಟಡಿ ಕೊಲೆ ಆರೋಪ ಕೇಳಿಬಂದಿದೆ. ಜೂಜಾಟದ ಶಂಕೆಯ ಮೇಲೆ ದಿನಗೂಲಿ ಕಾರ್ಮಿಕನನ್ನು ಬಂಧಿಸಿದ್ದ ಪೊಲೀಸರು, ಆತನನ್ನು ನಿರ್ದಯವಾಗಿ ಥಳಿಸಿ ಹತ್ಯೆಗೈದಿದ್ದಾರೆ ಎಂದು ಆರೋಪಿಸಲಾಗಿದೆ.

ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ರತೌಲ್‌ ಗ್ರಾಮದ ನಿವಾಸಿ, 28 ವರ್ಷದ ಸಾಜಿದ್ ಅಬ್ಬಾಸಿಯನ್ನು ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಭಾನುವಾರ ಪೊಲೀಸರು ಬಂಧಿಸಿದ್ದರು. ಕೆಲವು ಗಂಟೆಗಳ ನಂತರ ಆತನನ್ನು ಬಿಡುಗಡೆ ಮಾಡಿದ್ದರು. ಯುವಕ ಹೊರ ಬಂದ ಅರ್ಧ ಗಂಟೆಯ ಬಳಿಕ ಸಾವನ್ನಪ್ಪಿದ್ದಾರೆ.

ಯುವಕನಿಗೆ ಪೊಲೀಸರು ಮನಸೋಯಿಚ್ಛ ಥಳಿಸಿದ್ದಾರೆ. ಥರ್ಡ್ ಡಿಗ್ರಿ ಟ್ರೀಟ್‌ಮೆಂಟ್ ನೀಡಿದ್ದಾರೆ. ಇದರಿಂಗಾಗಿ ಗಾಯಗಳಾಗಿದ್ದು, ನೋವು ತಾಳಲಾರದೆ ಅ ಮೃತ ಪಟ್ಟಿದ್ದಾನೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ಆರೋಪವನ್ನು ನಿರಾಕರಿಸಿರುವ ಪೊಲೀಸರು, ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಒಬ್ಬ ಪೊಲೀಸ್‌ ಸಿಬ್ಬಂದಿಯನ್ನು ಸೋಮವಾರ ಅಮಾನತುಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಮೂಲಗಳ ಪ್ರಕಾರ, ಸಾಜಿದ್ ಅಬ್ಬಾಸಿನ್ನು ಬಂಧಿಸಿದ ಸ್ಥಳೀಯ ಪೊಲೀಸರು ಖೇಕ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಚೆಕ್ ಪೋಸ್ಟ್‌ಗೆಕರೆದೊಯ್ದಿದ್ದಾರೆ. ಸ್ವಲ್ಪ ಸಮಯದ ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ. ಆದರೆ, ಆತನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಅಬ್ಬಾಸಿ ಮೃತಪಟ್ಟಿದ್ದಾರೆ.

ಪೊಲೀಸ್ ಚೆಕ್ ಪೋಸ್ಟ್‌ನಲ್ಲಿ ತನ್ನ ಮಗನನ್ನು ಪೊಲೀಸರು ಅಮಾನುಷವಾಗಿ ಥಳಿಸಿದ್ದಾರೆ. ಆತನ ಸ್ಥಿತಿ ಹದಗೆಟ್ಟಾಗ ಬಿಡುಗಡೆ ಮಾಡಿದ್ದಾರೆ. ಮೂವರು ಪೊಲೀಸ್ ಪೇದೆಗಳು ಆತನನ್ನು ನಿರ್ದಯವಾಗಿ ಥಳಿಸುತ್ತಿರುವುದನ್ನು ಗ್ರಾಮಸ್ಥರು ಸಹ ನೋಡಿದ್ದಾರೆ ಎಂದು ಅಬ್ಬಾಸಿ ತಂದೆ ಬಾಬು ಅಬ್ಬಾಸಿ ಆರೋಪಿಸಿದ್ದಾರೆ.

ಅಬ್ಬಾಸಿ ಸಾವಿನ ಬಳಿಕ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಸ್ತೆ ತಡೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಬಂದ ಬಾಗ್‌ಪತ್ ಜಿಲ್ಲಾ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗಿಯ, ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವನೆ ನೀಡಿದ್ದಾರೆ. “ಅಬ್ಬಾಸಿಯನ್ನು ಜೂಜಾಟದ ಶಂಕೆಯ ಮೇಲೆ ಬಂಧಿಸಲಾಗಿತ್ತು. ಆದರೆ, ಪೊಲೀಸರ ಬಳಿ ಆತನ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಕಾರಣ, ಬಿಡುಗಡೆ ಮಾಡಿದ್ದಾರೆ” ಎಂದು ಎಸ್‌ಪಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಣಿಪುರ ಹಿಂಸಾಚಾರ | ತಡೆಗೆ ಕೈಗೊಂಡ ಕ್ರಮಗಳ ಬಗ್ಗೆ ವಿಸ್ತೃತ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್‌ ಸೂಚನೆ

“ಮೃತನ ಕುಟುಂಬಸ್ಥರು ದೂರು ದಾಖಲಿಸದ ಕಾರಣ ಪ್ರಕರಣದಲ್ಲಿ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಘಟನೆಯ ಬಗ್ಗೆ ಈಗಾಗಲೇ ತನಿಖೆ ಪ್ರಾರಂಭಿಸಲಾಗಿದೆ. ಶವಪರೀಕ್ಷೆ ವರದಿಯ ನಂತರ ಸಾವಿನ ಕಾರಣವನ್ನು ಸ್ಪಷ್ಟಪಡಿಸಲಾಗುವುದು” ಎಂದು ಬಾಗ್‌ಪತ್ ಎಎಸ್‌ಪಿ ಮನೀಶ್ ಕುಮಾರ್ ಹೇಳಿದ್ದಾರೆ.

“ಇಸ್ಪೀಟ್‌ ಆಡುತ್ತಿದ್ದ ಜಾಗದಲ್ಲಿ ಅಬ್ಬಾಸಿ ನಿಂತಿದ್ದರು. ಅಲ್ಲಿಗೆ ಬಂದ ಮೂವರು ಪೊಲೀಸ್‌ ಪೇದೆಗಳು ಆತನೂ ಜೂಜಾಟ ಆಡುತ್ತಿದ್ದಾನೆಂದು ಭಾವಿಸಿ, ಎಳೆದೊಯ್ದರು. ಆತನಿಗೆ ಅಮಾನವೀಯ ಥಳಿಸಿದ್ದಾರೆ. ಆತನಿಗೆ ನಿಲ್ಲಲೂ ಸಾಧ್ಯವಾಗದೆ, ಬಾಯಲ್ಲಿ ನೊರೆ ಬರಲು ಪ್ರಾರಂಭವಾದ ಬಳಿಕ ಬಿಡುಗಡೆ ಮಾಡಿದ್ದಾರೆ” ಎಂದು ಮೃತನ ಸಹೋದರ ಮೊಹಮ್ಮದ್ ವಾಜಿದ್ ಅಬ್ಬಾಸಿ ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ 41 ಕಸ್ಟಡಿ ಕೊಲೆಗಳಾಗಿವೆ ಎಂದು ಅಂಕಿಅಂಶಗಳು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...