ಮರಗಳನ್ನು ಕಡಿಯುವುದು ನರಹತ್ಯೆಗಿಂತಲೂ ಭೀಕರ: ಸುಪ್ರೀಂ ಕೋರ್ಟ್

Date:

ಭಾರಿ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ತೋರಿಸಬಾರದು ಎಂದು ಖಂಡತುಂಡವಾಗಿ ಹೇಳಿರುವ ಕೋರ್ಟ್, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಿದೆ.

ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಇಲ್ಲದೇ ಅಕ್ರಮವಾಗಿ ಮರ ಕಡಿಯುವ ದಂಧೆಗೆ ಸ್ಪಷ್ಟ ಸಂದೇಶವನ್ನು ಸುಪ್ರೀಂಕೋರ್ಟ್‌ನ ಈ ತೀರ್ಪು ರವಾನಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಉಜ್ಜಲ್ ಭೂಯಾನ್ ಅವರನ್ನು ಒಳಗೊಂಡ ನ್ಯಾಯಪೀಠ, ತಾಜ್ ಟ್ರಪೇಝಿಯಂ ವಲಯದಲ್ಲಿ 454 ಮರಗಳನ್ನು ಅಕ್ರಮವಾಗಿ ಕಡಿದ ವ್ಯಕ್ತಿಯ ಮೇಲ್ಮನವಿಯನ್ನು ತಿರಸ್ಕರಿಸಿದೆ.

ಪರಿಸರ ವಿಚಾರದಲ್ಲಿ ಕೋರ್ಟ್‌ಗೆ ಸಹಕರಿಸಿದ ಅಮಿಕಸ್ ಕ್ಯೂರಿ, ಹಿರಿಯ ವಕೀಲ ಎಡಿಎನ್ ರಾವ್ ಅವರು ಈ ಸಂಬಂಧ ನೀಡಿ ಸಲಹೆಗಳನ್ನು ನ್ಯಾಯಪೀಠ ಸ್ವೀಕರಿಸಿದೆ. ಕಾನೂನು ಮತ್ತು ಮರಗಳನ್ನು ಹಗುರವಾಗಿ ಪರಿಗಣಿಸಬಾರದು ಎನ್ನುವ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ರಾವ್ ಸಲಹೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹ ಪ್ರಕರಣಗಳಲ್ಲಿ ಎಷ್ಟು ದಂಡ ವಿಧಿಸಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ ಈ ತೀರ್ಪಿನ ಮೂಲಕ ಮಾನದಂಡ ನಿಗದಿಪಡಿಸಿದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಸಕರ ವೇತನ ಹೆಚ್ಚಳ: ಇವರಿಗೆ ಹೇಳೋರು ಕೇಳೋರು ಯಾರೂ ಇಲ್ಲವೇ?

“ಪರಿಸರ ಪ್ರಕರಣಲ್ಲಿ ಯಾವುದೇ ದಯೆ ತೋರಿಸಬಾರದು. ದೊಡ್ಡ ಸಂಖ್ಯೆಯ ಮರಗಳನ್ನು ಕಡಿಯುವುದು ನರಹತ್ಯೆಗಿಂತ ಕೆಟ್ಟದು. ಇಂಥ ಮರವನ್ನು ಮತ್ತೆ ಬೆಳೆಸಲು ಅಥಾ 454 ಮರಗಳ ಹಸಿರು ಹೊದಿಕೆಯನ್ನು ಮರು ಸೃಷ್ಟಿಸಲು ಕನಿಷ್ಠ 100 ವರ್ಷ ಬೇಕು. 2015ರಲ್ಲಿ ನ್ಯಾಯಾಲಯ ನಿಷೇಧ ವಿಧಿಸಿದ್ದರೂ, ಕೋರ್ಟ್‌ನ ಅನುಮತಿ ಇಲ್ಲದೇ ಇವುಗಳನ್ನು ಕಡಿಯಲಾಗಿದೆ” ಎಂದು ನ್ಯಾಯಪೀಠ ಆಕ್ಷೇಪಿಸಿದೆ.

ಕೇಂದ್ರದ ಸಶಕ್ತ ಸಮಿತಿಯ ಶಿಫಾರಸ್ಸಿನಂತೆ ಶಿವಶಂಕರ್ ಅಗರ್‌ವಾಲ್‌ ಎಂಬ ಆರೋಪಿಗೆ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಲಾಗಿದೆ. “ನನ್ನ ಕಕ್ಷಿದಾರ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ ಹಾಗೂ ದಂಡವನ್ನು ಕಡಿಮೆ ಮಾಡುವಂತೆ ಕೋರಿದ್ದಾರೆ” ಎಂದು ಅರ್ಜಿದಾರರ ಪರ ವಕೀಲ ಮುಕುಲ್ ರೋಹಟ್ಗಿ ಹೇಳಿದರು. ಆದರೆ ಇದಕ್ಕೆ ಕೋರ್ಟ್ ನಿರಾಕರಿಸಿದ್ದು, ಅಕ್ಕಪಕ್ಕದ ಪ್ರದೇಶಗಳಲ್ಲಿ ಮರಗಳನ್ನು ಬೆಳೆಸಲು ಅವಕಾಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...