ಡಾನಾ ಚಂಡಮಾರುತ | ಒಡಿಶಾ, ಬಂಗಾಳದಲ್ಲಿ ರೆಡ್ ಅಲರ್ಟ್: ಕರ್ನಾಟಕದ ಹತ್ತು ರೈಲುಗಳು ರದ್ದು

Date:

ಅಕ್ಟೋಬರ್ 24 ಅಥವಾ ಅಕ್ಟೋಬರ್ 25ರ ನಡುವೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಅಪ್ಪಳಿಸಲಿದ್ದು ಇವೆರಡು ರಾಜ್ಯದಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಈಸ್ಟ್ ಕೋಸ್ಟ್ ರೈಲ್ವೇಸ್ (ಇಸಿಒಆರ್) ಒಟ್ಟು 178 ರೈಲುಗಳನ್ನು ರದ್ದುಗೊಳಿಸಿದೆ. ಕರ್ನಾಟಕದ 10 ರೈಲುಗಳು ಕೂಡಾ ರದ್ದಾಗಿವೆ.

ಇತ್ತೀಚೆಗೆ ಹೊರಡಿಸಿದ ಅಧಿಸೂಚನೆಯಲ್ಲಿ ಕೆಲವು ರೈಲು ಸೇವೆಗಳನ್ನು ಅಕ್ಟೋಬರ್ 23ರಿಂದ ಅಕ್ಟೋಬರ್ 25ರವರೆಗೆ ಮೂರು ದಿನಗಳವರೆಗೆ ರದ್ದುಪಡಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಇದನ್ನು ಓದಿದ್ದೀರಾ? ಅ.24ರಂದು ಒಡಿಶಾಕ್ಕೆ ಅಪ್ಪಳಿಸಲಿರುವ ಚಂಡಮಾರುತ: ಕರ್ನಾಟಕ ಸೇರಿ ಹಲವು ಕಡೆ ಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಚಂಡಮಾರುತದಿಂದಾಗುವ ಹಾನಿಯನ್ನು ಎದುರಿಸಲು ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಿದ್ಧತೆಗಳನ್ನು ಮಾಡಲಾಗಿದೆ. 24/7 ವಿಪತ್ತು ನಿರ್ವಹಣಾ ಘಟಕವನ್ನು ಸ್ಥಾಪಿಸಲಾಗಿದೆ. ಉಭಯ ರಾಜ್ಯಗಳ ಕರಾವಳಿಯಲ್ಲಿ ಶಾಲಾ ಕಾಲೇಜುಗಳಿಗೆ ಅಕ್ಟೋಬರ್ 23ರಿಂದ 26ರವರೆಗೆ ರಜೆ ಘೋಷಿಸಲಾಗಿದೆ.

ಕರ್ನಾಟಕದಲ್ಲಿ ರದ್ದಾದ ರೈಲುಗಳ ವಿವರ

ಅಕ್ಟೋಬರ್ 23ರಂದು ಕಾಮಾಕ್ಯ-ಬೆಂಗಳೂರು, ಬೆಂಗಳೂರು- ಹೌರಾ, ಬೆಂಗಳೂರು-ಭುವನೇಶ್ವರ, ಬೆಂಗಳೂರು-ಗುವಾಹಟಿ ರೈಲುಗಳನ್ನು ರದ್ದು ಮಾಡಲಾಗಿದೆ. ಅಕ್ಟೋಬರ್ 24ರಂದು ಹೌರಾ-ಬೆಂಗಳೂರು, ಶಾಲಿಮಾರ್-ವಾಸ್ಕೊ ಡ ಗಾಮಾ, ಬೆಂಗಳೂರು-ಮುಜಾಫರಪುರ, ಬೆಂಗಳೂರು-ಹೌರಾ (22888), ಬೆಂಗಳೂರು-ಹೌರಾ (12246) ರೈಲುಗಳು ರದ್ದಾಗಿವೆ. ಇನ್ನು ಅಕ್ಟೋಬರ್ 25ರಂದು ಭುವನೇಶ್ವರ-ಬೆಂಗಳೂರು, ಅಕ್ಟೋಬರ್ 26ರಂದು ಬೆಂಗಳೂರು-ಕಾಮಾಕ್ಯ, ಅಕ್ಟೋಬರ್ 27ರಂದು ವಾಸ್ಕೊ ಡ ಗಾಮಾ- ಶಾಲಿಮಾರ್ ರೈಲುಗಳು ರದ್ದಾಗಿವೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಮಂಗಳವಾರ ಸಂಜೆ ತೀವ್ರಗೊಂಡಿದ್ದು, ಚಂಡಮಾರುತ ತೀವ್ರವಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವರದಿ ಮಾಡಿದೆ. ಚಂಡಮಾರುತವು ಅಕ್ಟೋಬರ್ 25ರಂದು ಒಡಿಶಾ-ಪಶ್ಚಿಮ ಬಂಗಾಳ ಕರಾವಳಿಯನ್ನು ಅಪ್ಪಳಿಸುವ ಸಾಧ್ಯತೆಯಿದೆ.

ಇದನ್ನು ಓದಿದ್ದೀರಾ? ಗುಜರಾತ್ | ಭಾರೀ ಮಳೆ; ಚಂಡಮಾರುತದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಚಂಡಮಾರುತದಿಂದಾಗಿ ಗಾಳಿಯ ವೇಗವು ಗಂಟೆಗೆ 100ರಿಂದ 110 ಮೈಲುಗಳವರೆಗೆ ಇರುತ್ತದೆ. ಒಡಿಶಾ, ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಕರಾವಳಿ ಕಾವಲು ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಇತರ ರಕ್ಷಣಾ ತಂಡಗಳನ್ನು ನಿಯೋಜಿಸಲಾಗಿದೆ.

ಚಂಡಮಾರುತದ ತೀವ್ರ ಪ್ರಭಾವ ಉಂಟಾಗುವ ಕರಾವಳಿ ಜಿಲ್ಲೆಗಳಲ್ಲಿ ಸ್ಥಳಾಂತರ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. 5,000ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಒಡಿಶಾದ ಕಂದಾಯ ಮತ್ತು ವಿಪತ್ತು ನಿರ್ವಹಣೆ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ. ಒಡಿಶಾದಲ್ಲಿ ಹತ್ತು ಲಕ್ಷ ಜನರನ್ನು ಸ್ಥಳಾಂತರಿಸುವ ಸಿದ್ಧತೆ ನಡೆದಿದೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...