ಮಿಚಾಂಗ್ ಚಂಡಮಾರುತ | ತಮಿಳುನಾಡಿನಲ್ಲಿ ಹೈ ಅಲರ್ಟ್‌; ಶಾಲಾ-ಕಾಲೇಜು ರಜೆ ಘೋಷಣೆ

Date:

ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿದೆ. ಈ ಹಿನ್ನೆಲೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನತ್ತ ಚಂಡಮಾರುತ ಬೀಸುತ್ತಿದ್ದು, ಹಲವು ಭಾಗಗಳಲ್ಲಿ ಡಿ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಚಂಡಮಾರುತದ ಬಗ್ಗೆ ಮಾಹಿತಿ ನೀಡಿದ ಕೂಡಲೇ, ತಮಿಳುನಾಡು ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಚಂಡಮಾರುತದಿಂದ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವ ತಮಿಳುನಾಡು ಸರ್ಕಾರ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಶಾಲೆ ಮತ್ತು ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿವೆ.

ಬಂಗಾಳಕೊಲ್ಲಿಯಿಂದ ಭಾರೀ ಚಂಡಮಾರುತ ಬೀಸುತ್ತಿರುವ ಹಿನ್ನೆಲೆ, ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಆದಷ್ಟು ಮನೆಯಲ್ಲಿ ಸುರಕ್ಷಿತವಾಗಿ ಇರಬೇಕು. ಅನಿವಾರ್ಯ ಸಂದರ್ಭ ಇದ್ದರೆ ಮಾತ್ರ ಹೊರಬರಬೇಕು, ಇಲ್ಲದಿದ್ದರೆ ಮನೆಯಿಂದಲೇ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಅಗತ್ಯ ಸಿಬ್ಬಂದಿ ಜತೆಗೆ ಮಾತ್ರ ಕಾರ್ಯ ನಿರ್ವಹಿಸಲು ಉದ್ಯೋಗಿಗಳಿಗೆ ತಿಳಿಸುವಂತೆ ಖಾಸಗಿ ಕಂಪನಿಗಳಿಗೆ ಕೇಳಲಾಗಿದೆ.

118 ರೈಲು ಸೇವೆ ರದ್ದು ಮಾಡಿದ ದಕ್ಷಿಣ ರೈಲ್ವೆ

ದಕ್ಷಿಣ ರೈಲ್ವೆ ಡಿಸೆಂಬರ್ 3 ರಿಂದ 7ರ ವರೆಗೆ 118 ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಬೆಂಗಳೂರು-ಹೌರಾ, ತಿರುವನಂತಪುರಂ-ನವದೆಹಲಿ ಕೇರಳ ಎಕ್ಸ್‌ಪ್ರೆಸ್, ಪಾಟ್ನಾ-ಎರ್ನಾಕುಲಂ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್, ತಿರುವನಂತಪುರ ಸಿಕಂದರಾಬಾದ್ ಶಬರಿ ಎಕ್ಸ್‌ಪ್ರೆಸ್, ವಿಜಯವಾಡ ಜನಶತಾಬ್ದಿ, ಬರೌನಿ-ಕೊಯಮತ್ತೂರು ವಿಶೇಷ ರೈಲು, ಗಯಾ ಚೆನ್ನೈ ಎಕ್ಸ್‌ಪ್ರೆಸ್, ಗೋರಖ್‌ಪುರ್ ರಪ್ತಿಸಾಗರ್ ಎಕ್ಸ್‌ಪ್ರೆಸ್, ಕೊಚುವೇಲಿ, ನಿಜಾಮುದ್ದೀನ್ ಚೆನ್ನೈ ಡುರಂಟೊ ಎಕ್ಸ್‌ಪ್ರೆಸ್ ಸೇರಿ ರದ್ದಾಗಿರುವ ಪ್ರಮುಖ ರೈಲುಗಳಾಗಿವೆ.

ಹೈ ಅಲರ್ಟ್‌ ಘೋಷಣೆ

ಬಂಗಾಳಕೊಲ್ಲಿಯಲ್ಲಿ ಡಿ.3ರ ವೇಳೆಗೆ ಮಿಚಾಂಗ್ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗೆ ಡಿ.4ರಂದು ಈ ಚಂಡಮಾರುತ ಬಂದು ಅಪ್ಪಳಿಸಲಿದೆ. ಹಾಗಾಗಿ, 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮ್ಯಾನ್ಮಾರ್‌ ಸಲಹೆಯಂತೆ ಈ ಚಂಡಮಾರುತಕ್ಕೆ ‘ಮಿಚಾಂಗ್‌’ ಎಂದು ಹೆಸರಿಡಲಾಗಿದೆ.

ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಗಾಗಲೇ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಚೆನ್ನೈನಾದ್ಯಂತ ಹಲವಾರು ಮೆಟ್ರೋ ನಿಲ್ದಾಣಗಳ ಬಳಿ ಜಲಾವೃತವಾಗಿದೆ. ಸೇಂಟ್ ಥಾಮಸ್ ಮೆಟ್ರೋ ನಿಲ್ದಾಣದಲ್ಲಿ 4 ಅಡಿಗಳಷ್ಟು ನೀರು ನಿಂತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಪುದುಚೇರಿಯ ಪೂರ್ವ-ಆಗ್ನೇಯಕ್ಕೆ ಸುಮಾರು 440 ಕಿಲೋ ಮೀಟರ್ ಮತ್ತು ಚೆನ್ನೈನ ಆಗ್ನೇಯಕ್ಕೆ 420 ಕಿಲೋ ಮೀಟರ್, ಆಂಧ್ರ ಪ್ರದೇಶದ ನೆಲ್ಲೂರಿನ ಆಗ್ನೇಯಕ್ಕೆ 740 ಕಿಲೋ ಮೀಟರ್ ದೂರದಲ್ಲಿ ಚಂಡಮಾರುತ ರೂಪಗೊಂಡಿದೆ. ಗಾಳಿಯೂ ಗಂಟೆಗೆ 80 ರಿಂದ 90 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿದ್ದು, ಈ ವೇಗ ಗಂಟೆಗೆ 100 ಕಿಲೋ ಮೀಟರ್‌ಗೆ ಹೆಚ್ಚುವ ಸಾಧ್ಯತೆ ಇಂದು ಐಎಂಡಿ ಮಾಹಿತಿ ನೀಡಿದೆ.

ಚಂಡಮಾರುತದ ಬಗ್ಗೆ ಸಾರ್ವಜನಿಕರು ಮತ್ತು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಕೃಷ್ಣಪಟ್ಟಣಂ ಸೇರಿದಂತೆ ಮೀನುಗಾರಿಕಾ ಬಂದರುಗಳಲ್ಲಿ 1,000ಕ್ಕೂ ಹೆಚ್ಚು ದೋಣಿಗಳು ಲಂಗರು ಹಾಕಿವೆ.

ತಮಿಳುನಾಡು ವಿಪತ್ತು ನಿರ್ವಹಣಾ ಪಡೆಯ 14 ತಂಡಗಳು 350 ಸಿಬ್ಬಂದಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 225 ಸಿಬ್ಬಂದಿ ಒಂಬತ್ತು ತಂಡಗಳು ಮೈಲಾಡುತುರೈ, ನಾಗಪಟ್ಟಣಂ, ತಿರುವಳ್ಳೂರ್, ಕಡಲೂರು, ವಿಲ್ಲುಪುರಂ, ಕಾಂಚೀಪುರಂ, ಚೆನ್ನೈ, ಚೆಂಗಲ್‌ಪೇಟ್‌ನ ಕರಾವಳಿ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...