ಸಿಲಿಂಡರ್‌ ಬಿಕ್ಕಟ್ಟು: ಸೌದೆ ಒಲೆಯ ಮೊರೆ ಹೋದ ಬಿಸಿಯೂಟ ಕಾರ್ಯಕರ್ತೆಯರು

Date:

ಮಧ್ಯಪ್ರಾಚ್ಯ ಸಂಘರ್ಷದಿಂದ ಉಂಟಾದ ಎಲ್‌ಪಿಜಿ ಪೂರೈಕೆಯಲ್ಲಿನ ಕೊರತೆ ಈಗ ದೇಶದ ಬಿಸಿಯೂಟ ಯೋಜನೆಯ ಮೇಲೆ ಪರಿಣಾಮ ಬೀರಿದೆ.ಅಡುಗೆ ಮಾಡಲು ಎಲ್‌ಪಿಜಿ ಅವಲಂಭಿಸಿದ ಅಡುಗೆ ಕಾರ್ಯಕರ್ತೆಯರು ಸಿಲಿಂಡರ್‌ ಅಭಾವ ಸೃಷ್ಟಿಯಾದ ಕಾರಣ ಪರ್ಯಾಯ ಇಂಧನ ವ್ಯವಸ್ಥೆ ಹುಡುಕಿಕೊಳ್ಳಬೇಕಿದೆ.

ಬೇರೆ ಯಾವ ಪರ್ಯಾಯಗಳು ಸಿಗದೆ ಕೆಲವು ಶಾಲೆಗಳಲ್ಲಿ ಸೌದೆ ಒಲೆ ಮೊರೆ ಹೋಗಿರುವ ಅಡುಗೆ ಕಾರ್ಯಕರ್ತೆಯರು ಬೇಸಿಗೆಯ ಸುಡು ದಿನಗಳನ್ನು ಬೆಂಕಿಯ ಮುಂದೆ ಕಳೆಯುವಂತಾಗಿದೆ.ಕೆಲವು ವರ್ಷಗಳ ಹಿಂದಷ್ಟೇ ಕಟ್ಟಿಗೆ ಒಲೆಯ ಹೊಗೆಯಿಂದ ಮುಕ್ತಿ ಪಡೆದಿದ್ದ ಬಿಸಿಯೂಟ ಸಹಾಯಕಿಯರು ಹಾಗೂ ಅಡುಗೆಯವರು ಈಗ ಮತ್ತೆ ಹಿಮ್ಮುಖವಾಗಿ ಚಲಿಸಿದಂತಾಗಿದೆ.

ದೂರದ ಕಾಡುಗಳಿಂದ ಸೌದೆ ಹೆಕ್ಕಿ ತರುವ ಕೆಲಸವು ಸಹಾಯಕಿಯರ ಹೆಗಲೇರಿದೆ. ಶಿಕ್ಷಣ ಸಚಿವಾಲಯದ ದತ್ತಾಂಶದ ಪ್ರಕಾರ, ಪಿಎಂ ಪೋಷಣ್ (PM POSHAN) ಯೋಜನೆಯಡಿ ಕೆಲಸ ಮಾಡುತ್ತಿರುವ 24 ಲಕ್ಷ ಅಡುಗೆಯವರು ಮತ್ತು ಸಹಾಯಕರಲ್ಲಿ (CCHs) ಶೇಕಡಾ 90 ಕ್ಕಿಂತ ಹೆಚ್ಚು ಮಹಿಳೆಯರಿದ್ದಾರೆ. ಉರುವಲು ಬಳಸಿ ಅಡುಗೆ ಮಾಡುವುದರಿಂದ ಉಂಟಾಗುವ ದೈಹಿಕ ಶ್ರಮದ ಜೊತೆಗೆ, ಇದು ಉಸಿರಾಟದ ಸಮಸ್ಯೆಗಳನ್ನು ಉಲ್ಬಣಗೊಳಿಸಬಹುದು ಮತ್ತು ಬ್ರಾಂಕೈಟಿಸ್, ಅಸ್ತಮಾ ಹಾಗೂ ಕಾಲಾನಂತರದಲ್ಲಿ ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆಗಳಂತಹ  ಅಪಾಯವನ್ನು ಹೆಚ್ಚಿಸಬಹುದು ಎಂದು ತಜ್ಞರು ಹೇಳುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 10.35 ಲಕ್ಷ ಶಾಲೆಗಳ 11 ಕೋಟಿ ಮಕ್ಕಳನ್ನು ತಲುಪುವ PM POSHAN ಯೋಜನೆಯನ್ನು (ಮಧ್ಯಾಹ್ನದ ಬಿಸಿಯೂಟ ಯೋಜನೆ) ಇದೀಗ ಮತ್ತೆ ಪರ್ಯಾಯ ಇಂಧನಗಳ ಬಳಕೆಗೆ ಬದಲಾಯಿಸಲಾಗುತ್ತಿದೆ. ಈ ಯೋಜನೆಯ ಲಾಭ ಪಡೆಯುವವರಲ್ಲಿ ಹೆಚ್ಚಿನವರು ಸಾಮಾಜಿಕವಾಗಿ ಹಿಂದುಳಿದ ಮತ್ತು ಕಡಿಮೆ ಆದಾಯದ ಕುಟುಂಬದ ಮಕ್ಕಳಿದ್ದಾರೆ.

Midday meal 2

ದೆಹಲಿ-ಎನ್‌ಸಿಆರ್‌ನ (Delhi-NCR) ಕೆಲವು ಶಾಲೆಗಳಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆಯಿಂದಾಗಿ ಊಟದ ಸೇವೆಯನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದೆ. ಮಧ್ಯಪ್ರಾಚ್ಯದ ಸಂಘರ್ಷದಿಂದಾಗಿ ಸಮುದ್ರ ಮಾರ್ಗಗಳಲ್ಲಿ ಉಂಟಾಗಿರುವ ಅಡೆತಡೆಗಳು ಅಡುಗೆ ಅನಿಲ ಪೂರೈಕೆಯ ಮೇಲೆ ತೀವ್ರ ಪರಿಣಾಮ ಬೀರಿವೆ. 

  • ಖಾಸಗಿ ಶಾಲೆಗಳ ಎಚ್ಚರಿಕೆ: ದೆಹಲಿ ಮತ್ತು ಗುರುಗ್ರಾಮದ ಪ್ರತಿಷ್ಠಿತ ಶ್ರೀ ರಾಮ್ ಸ್ಕೂಲ್ (Shri Ram School)ತನ್ನ ಶಾಲೆಯ ಕ್ಯಾಟರರ್ ಬಳಿ ಗ್ಯಾಸ್ ಸಂಗ್ರಹ ಕಡಿಮೆಯಾಗುತ್ತಿದೆ ಎಂದು ಪೋಷಕರಿಗೆ ಇಮೇಲ್ ಕಳುಹಿಸಿದೆ. ಮಾರ್ಚ್ 16ರ ನಂತರ ಮಧ್ಯಾಹ್ನದ ಊಟ ಮತ್ತು ತಿಂಡಿ ಒದಗಿಸಲು ಸಾಧ್ಯವಾಗದಿರಬಹುದು ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.
  • ಪರ್ಯಾಯ ವ್ಯವಸ್ಥೆಗೆ ಸೂಚನೆ: ಕೆಲವು ಶಾಲೆಗಳು ಪೋಷಕರಿಗೆ ತಮ್ಮ ಮಕ್ಕಳಿಗೆ ಮನೆಯಿಂದಲೇ ಊಟವನ್ನು ಕಳುಹಿಸುವಂತೆ ಮತ್ತು ಪರ್ಯಾಯ ವ್ಯವಸ್ಥೆಗಳನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಸೂಚಿಸಿವೆ.

ಬಿಕ್ಕಟ್ಟಿನ ಹಿನ್ನೆಲೆ:
ಯು.ಎಸ್., ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಹಾರ್ಮುಜ್ ಜಲ ಸಂಧಿಯ(Strait of Hormuz) ಮೂಲಕ ನಡೆಯುವ ಇಂಧನ ಸಾಗಾಟಕ್ಕೆ ಅಡ್ಡಿಯಾಗಿದೆ. ಭಾರತವು ತನ್ನ ಎಲ್‌ಪಿಜಿ ಅಗತ್ಯದ ಸುಮಾರು 60% ರಷ್ಟು ಆಮದು ಮಾಡಿಕೊಳ್ಳುತ್ತಿದ್ದು, ಈ ಮಾರ್ಗವು ಅತೀ ಪ್ರಮುಖವಾಗಿದೆ. 

ಈ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರವು ಪೈಪ್ಡ್ ನ್ಯಾಚುರಲ್ ಗ್ಯಾಸ್ (PNG) ಬಳಕೆಯನ್ನು ಹೆಚ್ಚಿಸಲು ಮತ್ತು ಕಾಳಸಂತೆಯನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳುತ್ತಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...