‘ದಹಿ’ ವಿವಾದ | ಕರ್ನಾಟಕ, ತಮಿಳುನಾಡು ಆಕ್ರೋಶಕ್ಕೆ ಮಣಿದ ಎಫ್‌ಎಸ್‌ಎಸ್‌ಎಐ; ಪರಿಷ್ಕರಿಸಿ ಆದೇಶ

Date:

  • ನಂದಿನಿ ಕನ್ನಡಿಗರ ಆಸ್ತಿ ಮತ್ತು ಸ್ವಾಭಿಮಾನ ಎಂದು ಮಾಜಿ ಸಿಎಂ ಹೆಚ್‌ ಡಿಕೆ ಆಕ್ರೋಶ
  • ದಹಿ ಆದೇಶದ ವಿರುದ್ಧ ಕೇಂದ್ರಕ್ಕೆ ಎಚ್ಚರಿಕೆ ನೀಡಿದ್ದ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್

ಮೊಸರು ಮತ್ತು ಮುಂತಾದ ಹಾಲಿನ ಉತ್ಪನ್ನಗಳ ಮೇಲೆ ಕಡ್ಡಾಯವಾಗಿ ಹಿಂದಿ ಹೆಸರು ‘ದಹಿ’ ಎಂದು ಮುದ್ರಿಸಬೇಕೆಂದು ಆದೇಶ ಹೊರಡಿಸಿದ್ದ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಆಕ್ರೋಶದ ಕಿಚ್ಚು ಹೆಚ್ಚಾದ ಹಿನ್ನಲೆಯಲ್ಲಿ ಆದೇಶವನ್ನು ಪರಿಷ್ಕರಿಸಿ ಸುತ್ತೋಲೆ ಹೊರಡಿಸಿದೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಫ್‌ಎಸ್‌ಎಸ್‌ಎಐ, “ಇತ್ತೀಚೆಗೆ ‘ದಹಿ’ ಎಂಬ ಪದವನ್ನು ಬಿಟ್ಟುಬಿಡುವುದರ ಕುರಿತು ಪ್ರತಿನಿಧಿಗಳಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಹೈನುಗಾರಿಕೆ ಸಂಘಸಂಸ್ಥೆಗಳು ‘ಕರ್ಡ್’ ಎಂಬ ಇಂಗ್ಲಿಷ್ ಪದನಾಮದೊಂದಿಗೆ ಆವರಣದಲ್ಲಿ ಪ್ರಚಲಿತ ಪ್ರಾದೇಶಿಕ ಸಾಮಾನ್ಯ ಹೆಸರುಗಳನ್ನು ಬಳಸಬಹುದು” ಎಂದು ತಿಳಿಸಲಾಗಿದೆ.

ಕೆಲವು ದಿನಗಳ ಮೊದಲು ಪ್ರಾದೇಶಿಕ ಹೈನುಗಾರಿಕೆ ಉತ್ಪನ್ನಗಳಾದ ಮೊಸರಿನ ಪ್ಯಾಕೆಟುಗಳ ಮೇಲೆ ಕಡ್ಡಾಯವಾಗಿ ‘ದಹಿ’ ಪದ ಬಳಸಬೇಕು ಹಾಗೂ ಆವರಣದಲ್ಲಿ ಪ್ರಚಲಿತ ಪ್ರಾದೇಶಿಕ ಸಾಮಾನ್ಯ ಹೆಸರುಗಳಾದ ಮೊಸರು, ತೈರ್, ಪೆರುಗು ಮುಂತಾದ ಸ್ಥಳೀಯ ಹೆಸರುಗಳನ್ನು ಆವರಣದಲ್ಲಿ ಮುದ್ರಿಸಬೇಕು” ಎಂದು ಎಫ್‌ಎಸ್‌ಎಸ್‌ಎಐ ಆದೇಶ ಹೊರಡಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಂದಿನಿ ಮೊಸರಿನ ಪೊಟ್ಟಣದಲ್ಲಿ ಹಿಂದಿ ಪದ ಬಳಸಲು ಆದೇಶ : ಕರ್ನಾಟಕ, ತಮಿಳುನಾಡಿನಲ್ಲಿ ಆಕ್ರೋಶ

ನಂದಿನಿ ಕನ್ನಡಿಗರ ಆಸ್ತಿ; ಹೆಚ್‌ಡಿಕೆ

ಎಫ್‌ಎಸ್‌ಎಸ್‌ಎಐನ ಹಿಂದಿ ಹೇರಿಕೆಯ ಏಕಪಕ್ಷೀಯ ನಿರ್ಧಾರದಿಂದ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ,“ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು. ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿದ್ದೇವೆ ಎಂದರೆ ಇಷ್ಟ ಬಂದಹಾಗೆ ಒಳ ನುಸುಳುವುದಲ್ಲ, ಸೌಮ್ಯವಾಗಿದ್ದೇವೆ ಎಂದರೆ ಸುಮ್ಮನಿದ್ದೇವೆ ಎಂದಲ್ಲ. ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ. ಕರ್ನಾಟಕ ಭಾರತ ಗಣರಾಜ್ಯದ ಒಂದು ಭಾಗವೇ ಹೊರತು ಗುಜರಾತಿನ ವಸಾಹತುವಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಎಂ ಕೆ ಸ್ಟಾಲಿನ್, ಅಣ್ಣಾಮಲೈ ವಿರೋಧ  

ದಹಿ ಆದೇಶಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿ, “ಹಿಂದಿ ಹೇರಿಕೆಯ ನಾಚಿಕೆಗೇಡುತನದ ಒತ್ತಾಯಗಳು ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಹಿಮ್ಮೆಟ್ಟಿಸುತ್ತವೆ. ಇದು ಮೊಸರು ಪೊಟ್ಟಣಕ್ಕೂ ಹಿಂದಿಯಲ್ಲಿ ಲೇಬಲ್ ಮಾಡಲು ನಿರ್ದೇಶಿಸುವ ಮಟ್ಟಕ್ಕೆ ಬಂದಿವೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸುವ ಇಂತಹ ನಿರ್ಲಜ್ಜ ಹೊಣೆಗಾರರನ್ನು ದಕ್ಷಿಣದಿಂದ ಶಾಶ್ವತವಾಗಿ ಬಹಿಷ್ಕರಿಸುವುದನ್ನು ಈ ಆದೇಶ ಖಚಿತಪಡಿಸುತ್ತದೆ” ಎಂದು ತಿಳಿಸಿದ್ದರು.

ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಬುಧವಾರ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧ್ಯಕ್ಷರಿಗೆ ಪತ್ರ ಬರೆದಿದ್ದು,”ಈ ಅಧಿಸೂಚನೆಯು ಪ್ರಧಾನಿ ನರೇಂದ್ರ ಮೋದಿಯವರ ಪ್ರಾದೇಶಿಕ ಭಾಷೆಗಳ ಪ್ರಚಾರಕ್ಕೆ ಅನುಗುಣವಾಗಿಲ್ಲ. ರಾಜ್ಯ-ಚಾಲಿತ ಸಹಕಾರಿ ಹಾಲು ಸಂಘಗಳು ತಮ್ಮ ಪ್ರಾದೇಶಿಕ ಭಾಷೆಯನ್ನು ಬಳಸಲು ಅನುಮತಿಸಿ. ಈ ಹಿನ್ನಲೆಯಲ್ಲಿ ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆಗಳು ತಯಾರಿಸುವ ಮೊಸರು ಸಾಕೆಟ್‌ಗಳಲ್ಲಿ ‘ದಹಿ’ ಅನ್ನು ಬಳಸುವ ಅಧಿಸೂಚನೆಯನ್ನು ಹಿಂಪಡೆಯಿರಿ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...