ಜಾತಿ ದೌರ್ಜನ್ಯ | ಮಂಟಪದಲ್ಲಿ ಮದುವೆ ನಡೆಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ ದುರುಳರು; ಇಬ್ಬರಿಗೆ ಗಂಭೀರ ಗಾಯ

Date:

ವಿವಾಹ ಮಂಟಪದಲ್ಲಿ ಮದುವೆ ಸಮಾರಂಭವನ್ನು ನಡೆಸಿದ್ದಕ್ಕಾಗಿ ದಲಿತ ಕುಟುಂಬವೊಂದಕ್ಕೆ ಸವರ್ಣಿಯರ ಗುಂಪೊಂದು ಅಮಾನುಷವಾಗಿ ಕೋಲು ಮತ್ತು ರಾಡ್‌ಗಳಿಂದ ಥಳಿಸಿದ ಘಟನೆ ಉತ್ತರ ಪ್ರದೇಶದ ರಾಸ್ರಾದಲ್ಲಿ ನಡೆದಿದೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ದಾಳಿಯಿಂದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಪೊಲೀಸರು ಭಾನುವಾರ ತಿಳಿಸಿದ್ದಾರೆ. ದಾಳಿ ನಡೆಸುವ ಮುನ್ನ ಗುಂಪು, “ದಲಿತ ಸಮುದಾಯದವರಾಗಿದ್ದು, ನೀವು ಹಾಲ್‌ನಲ್ಲಿ(ಮದುವೆ ಮಂಟಪ) ಮದುವೆಯನ್ನು ಹೇಗೆ ನಡೆಸುತ್ತಿದ್ದೀರಿ” ಎಂದು ಪ್ರಶ್ನಿಸಿದ್ದಾರೆ. ಬಳಿಕ ಅಮಾನುಷವಾಗಿ ಥಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿದ್ದೀರಾ? ಜಾತಿ ದೌರ್ಜನ್ಯ | ಕುದುರೆ ಮೇಲೆ ಮೆರವಣಿಗೆ: ದಲಿತ ವರನ ಮೇಲೆ 40 ಮಂದಿ ಪ್ರಬಲ ಜಾತಿಯ ದುರುಳರಿಂದ ಹಲ್ಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯೊಬ್ಬರ ಸಹೋದರ ರಾಘವೇಂದ್ರ ಗೌತಮ್ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಸುಮಾರು 20ಕ್ಕೂ ಅಧಿಕ ಜನರ ಗುಂಪು ರಾತ್ರಿ 10:30 ರ ಸುಮಾರಿಗೆ ಸ್ವಯಂವರ ಮದುವೆ ಮಂಟಪಕ್ಕೆ ನುಗ್ಗಿ ಕೋಲು ಮತ್ತು ರಾಡ್‌ಗಳಿಂದ ಎಲ್ಲರ ಮೇಲೆ ದಾಳಿ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಹಾಗೆಯೇ ಮಲ್ಲಾಹ್ ಟೋಲಿ ಪ್ರದೇಶದ ಅಮನ್ ಸಾಹ್ನಿ, ದೀಪಕ್ ಸಾಹ್ನಿ, ರಾಹುಲ್ ಮತ್ತು ಅಖಿಲೇಶ್ ಮತ್ತು 15-20 ಅಪರಿಚಿತ ವ್ಯಕ್ತಿಗಳು ಈ ಗುಂಪಿನಲ್ಲಿದ್ದರು ಎಂದು ದೂರುದಾರರು ತಿಳಿಸಿದ್ದಾರೆ. ಶುಕ್ರವಾರ ಘಟನೆ ನಡೆದಿದ್ದರೂ ಈ ಘಟನೆಗೆ ಸಂಬಂಧಿಸಿ ಈವರೆಗೂ ಯಾರನ್ನೂ ಬಂಧಿಸಲಾಗಿಲ್ಲ.

ಇದನ್ನು ಓದಿದ್ದೀರಾ? ಗುಜರಾತ್‌ | ಪ್ರಬಲ ಜಾತಿ ಮಗುವನ್ನು ‘ಬೇಟಾ’ ಎಂದಿದ್ದಕ್ಕೆ ದಲಿತನ ಹತ್ಯೆ

ಗೌತಮ್ ಅವರ ಸಂಬಂಧಿಕರಾದ ಅಜಯ್ ಕುಮಾರ್ ಮತ್ತು ಮನನ್ ಕಾಂತ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ರಾಸ್ರಾ ಪೊಲೀಸ್ ಠಾಣೆಯ ಉಸ್ತುವಾರಿ ವಿಪಿನ್ ಸಿಂಗ್ ದೃಢಪಡಿಸಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಜಾತಿ ದೌರ್ಜನ್ಯ

ದೇಶ ಎಷ್ಟು ಅಭಿವೃದ್ಧಿಯಾದರೂ ಜಾತಿ ದೌರ್ಜನ್ಯ ಇಂದಿಗೂ ಜೀವಂತವಾಗಿ ಉಳಿದಿದೆ. ಸಾಂವಿಧಾನಿಕ ರಕ್ಷಣೆ, ಕಾನೂನು ರಕ್ಷಣೆ ಇದ್ದರೂ ದೇಶದಲ್ಲಿ ದಲಿತರ ಮೇಲೆ ವ್ಯವಸ್ಥಿತ ಹಿಂಸೆ, ತಾರತಮ್ಯ ಮುಂದುವರೆದಿದೆ. ಅಲ್ಲಲ್ಲಿ ದಲಿತರು ಸಾಮಾಜಿಕ ಬಹಿಷ್ಕಾರವನ್ನು ಎದುರಿಸುತ್ತಲೇ ಇದ್ದಾರೆ. ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಕುಟುಂಬ ಕೊಂಚ ಸಂಭ್ರಮದಿಂದ ವಿವಾಹ ನಡೆಸಿದರೆ, ದೇವಾಲಯಕ್ಕೆ ಪ್ರವೇಶಿಸಿದರೆ ಅದಕ್ಕೆ ಸವರ್ಣಿಯರ ವಿರೋಧ, ದಾಳಿ ಇಂದಿಗೂ ನಿಂತಿಲ್ಲ. ಜಾತಿ ದೌರ್ಜನ್ಯ ಹಲ್ಲೆಗೆ ಕೊನೆಯಾಗಿಲ್ಲ, ಹತ್ಯೆಯೂ ನಡೆಯುತ್ತಿದೆ. ಇತ್ತೀಚೆಗೆ ಗುಜರಾತ್‌ನಲ್ಲಿ ಪ್ರಬಲ ಜಾತಿಯ ಮಗುವನ್ನು ‘ಮಗು’ ಎಂದು ಕರೆದಿದ್ದಕ್ಕೆ ಹತ್ಯೆ ಮಾಡಲಾಗಿದೆ. ಅನ್ಯ ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ, ಬಾವಿಯಿಂದ ನೀರು ತೆಗೆದಿದ್ದಕ್ಕೆ ಹೀಗೆ ದಲಿತ ಎಂಬ ಕಾರಣಕ್ಕೆ ಹತ್ಯೆ, ಹಲ್ಲೆ ಕೃತ್ಯಗಳು ಅಲ್ಲಲ್ಲಿ ವರದಿಯಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...